ಮೈಸೂರು :ಗುಂಡಿಬಿದ್ದ ನಗರದ ರಸ್ತೆಗಳಿಗೆ ಮುಕ್ತಿ ನೀಡುವ ಸಲುವಾಗಿ 250 ಕೋಟಿ ರೂ. ವೆಚ್ಚದ ಡಾಂಬರೀಕರಣಕ್ಕೆ ಮರು ಚಾಲನೆ ನೀಡಲು ಮೈಸೂರು ಮಹಾನಗರಪಾಲಿಕೆ ಮುಂದಾಗಿದೆ.
ಈ ಹಿಂದಿನ ಮೇಯರ್ ಸುನಂದಾ ಪಾಲನೇತ್ರ ಅವರು 25 ಕೋಟಿ ರೂ., ಶಾಸಕರಾದ ಎಸ್.ಎ. ರಾಮದಾಸ್ ಅವರು 150 ಕೋಟಿ ರೂ. ಹಾಗೂ ಎಲ್.ನಾಗೇಂದ್ರ ಅವರು 200 ಕೋಟಿ ರೂ. ಅನುದಾನವನ್ನು ರಸ್ತೆ, ಪಾರ್ಕ್, ಯುಜಿಡಿ ಅಭಿವೃದ್ಧಿಗೆ ತಂದಿದ್ದಾರೆ. ಇದರ ಜೊತೆಗೆ ಪಾಲಿಕೆಯ 10 ಕೋಟಿ ರೂ. ಹಾಗೂ 15ನೇ ಹಣಕಾಸಿನ ಯೋಜನೆಯಡಿ ಅನುದಾನವನ್ನು ರಸ್ತೆ ಡಾಂಬರೀಕರಣಕ್ಕೆ ಬಳಸಲಾಗುತ್ತಿದೆ. ಒಟ್ಟಾರೆ ಸದ್ಯ 250 ಕೋಟಿ ರೂ. ವೆಚ್ಚದಲ್ಲಿ ಇನ್ನು ಮೂರು ದಿನದಲ್ಲಿ ಮರು ಡಾಂಬರೀಕರಣಕ್ಕೆ ಚಾಲನೆ ನೀಡಲಾಗುತ್ತದೆ.
ದಸರಾ ಮಹೋತ್ಸವ ಹಾಗೂ ಮಳೆ ಅಡಚಣೆ ಹಿನ್ನೆಲೆಯಲ್ಲಿ ನಗರದ ಹೃದಯ ಭಾಗಕ್ಕಷ್ಟೇ ಡಾಂಬರೀಕರಣ ಮಾಡಲಾಗಿತ್ತು. ಆದರೆ, ಇದೀಗ ದಸರಾ ಮುಗಿದು ಮಳೆಯೂ ಬಿಡುವು ಕೊಟ್ಟಿರುವುದರಿಂದ ವಾರದೊಳಗೆ ನಗರದ ಗುಂಡಿ ಹಾಗೂ ಹಳ್ಳಬಿದ್ದ ರಸ್ತೆಗಳಿಗೆ ಡಾಂಬರೀಕರಣ ಹಾಕಲು ಪಾಲಿಕೆ ನಿರ್ಧರಿಸಿದೆ. ಸೋಮವಾರ (ಅ.10ರಿಂದ) ದಿಂದಲೇ ನಗರಪಾಲಿಕೆ ಮೇಯರ್ ಶಿವಕುಮಾರ್ ಅವರು ನಗರದಾದ್ಯಂತ ಸ್ಥಳ ಪರಿಶೀಲನೆ ನಡೆಸಿ ಯಾವ ಬಡಾವಣೆಯ ಯಾವ ರಸ್ತೆಗಳಿಗೆ ಡಾಂಬರೀಕರಣ ಅಗತ್ಯವಿದೆ ಎಂಬ ಪಟ್ಟಿ ತಯಾರಿಸಲು ಸಿದ್ಧತೆ ನಡೆಸಿದ್ದಾರೆ. ಈ ಸಂಬಂಧ ಪಾಲಿಕೆ ಆಯುಕ್ತ ಲಕ್ಷ್ಮಿಕಾಂತರೆಡ್ಡಿ ಅವರೊಂದಿಗೂ ಮಾತುಕತೆ ನಡೆಸಿದ್ದು, ಇನ್ನೆರಡು ತಿಂಗಳಿನಲ್ಲಿ ಗುಂಡಿ ರಸ್ತೆಗಳಿಗೆ ಮುಕ್ತಿ ನೀಡಲು ಕಟಿಬದ್ಧರಾಗಿದ್ದಾರೆ.
ಎಲ್ಲಿ? ಎಷ್ಟು ಅನುದಾನ?
ಈ ಹಿಂದಿನ ಮೇಯರ್ ಸುನಂದಾ ಪಾಲನೇತ್ರ ಅವರು 25 ಕೋಟಿ ರೂ., ಶಾಸಕರಾದ ಎಸ್.ಎ. ರಾಮದಾಸ್ ಅವರು 150 ಕೋಟಿ ರೂ. ಹಾಗೂ ಎಲ್.ನಾಗೇಂದ್ರ ಅವರು 200 ಕೋಟಿ ರೂ. ಅನುದಾನವನ್ನು ರಸ್ತೆ, ಪಾರ್ಕ್, ಯುಜಿಡಿ ಅಭಿವೃದ್ಧಿಗೆ ತಂದಿದ್ದಾರೆ. ಇದರ ಜೊತೆಗೆ ಪಾಲಿಕೆಯ 10 ಕೋಟಿ ರೂ. ಹಾಗೂ 15ನೇ ಹಣಕಾಸಿನ ಯೋಜನೆಯಡಿ ಅನುದಾನವನ್ನು ರಸ್ತೆ ಡಾಂಬರೀಕರಣಕ್ಕೆ ಬಳಸಲಾಗುತ್ತಿದೆ. ಒಟ್ಟಾರೆ ಸದ್ಯ 250 ಕೋಟಿ ರೂ. ವೆಚ್ಚದಲ್ಲಿ ಇನ್ನು ಮೂರು ದಿನದಲ್ಲಿ ಮರು ಡಾಂಬರೀಕರಣಕ್ಕೆ ಚಾಲನೆ ನೀಡಲಾಗುತ್ತದೆ. ಟೆಂಡರ್ ಹಂತದಲ್ಲಿರುವ ರಸ್ತೆ ಕಾಮಗಾರಿಯನ್ನೂ ಬೇಗ ಮುಗಿಸಲು ಪಾಲಿಕೆ ಚಿಂತನೆ ನಡೆಸಿದೆ.
ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…
ಬೆಂಗಳೂರು : ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ.…
ಹೊಸದಿಲ್ಲಿ : ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ನಾಳೆ(ಫೆ.12) ಭಾರತ್ ಬಂದ್ಗೆ ಕರೆ ನೀಡಲಾಗಿದೆ.…
ಹೊಸದಿಲ್ಲಿ : ‘ರಾಷ್ಟ್ರಗೀತೆ’ಗೂ ಮುನ್ನ ‘ವಂದೇ ಮಾತರಂ’ ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದ್ದು, ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆಗೊಳಿಸಿದೆ.…
ಮೈಸೂರು : ಇಂದಿನ ಯುವಜನತೆ ಪುಸ್ತಕಗಳಿಗೆ ಸೀಮಿತವಾಗದೆ, ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮೈಸೂರು…
ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಸೈಬರ್ ಭದ್ರತೆಯು ಈಗ ಕೇವಲ…