ಮೈಸೂರು

ಮೈಸೂರಿನಲ್ಲಿ 250 ಕೋಟಿ ರೂ. ವೆಚ್ಚ: ರಸ್ತೆ ಡಾಂಬರೀಕರಣಕ್ಕೆ ಮರು ಚಾಲನೆ

ಮೈಸೂರು :ಗುಂಡಿಬಿದ್ದ ನಗರದ ರಸ್ತೆಗಳಿಗೆ ಮುಕ್ತಿ ನೀಡುವ ಸಲುವಾಗಿ 250 ಕೋಟಿ ರೂ. ವೆಚ್ಚದ ಡಾಂಬರೀಕರಣಕ್ಕೆ ಮರು ಚಾಲನೆ ನೀಡಲು ಮೈಸೂರು ಮಹಾನಗರಪಾಲಿಕೆ ಮುಂದಾಗಿದೆ.

ಈ ಹಿಂದಿನ ಮೇಯರ್‌ ಸುನಂದಾ ಪಾಲನೇತ್ರ ಅವರು 25 ಕೋಟಿ ರೂ., ಶಾಸಕರಾದ ಎಸ್‌.ಎ. ರಾಮದಾಸ್‌ ಅವರು 150 ಕೋಟಿ ರೂ. ಹಾಗೂ ಎಲ್‌.ನಾಗೇಂದ್ರ ಅವರು 200 ಕೋಟಿ ರೂ. ಅನುದಾನವನ್ನು ರಸ್ತೆ, ಪಾರ್ಕ್, ಯುಜಿಡಿ ಅಭಿವೃದ್ಧಿಗೆ ತಂದಿದ್ದಾರೆ. ಇದರ ಜೊತೆಗೆ ಪಾಲಿಕೆಯ 10 ಕೋಟಿ ರೂ. ಹಾಗೂ 15ನೇ ಹಣಕಾಸಿನ ಯೋಜನೆಯಡಿ ಅನುದಾನವನ್ನು ರಸ್ತೆ ಡಾಂಬರೀಕರಣಕ್ಕೆ ಬಳಸಲಾಗುತ್ತಿದೆ. ಒಟ್ಟಾರೆ ಸದ್ಯ 250 ಕೋಟಿ ರೂ. ವೆಚ್ಚದಲ್ಲಿ ಇನ್ನು ಮೂರು ದಿನದಲ್ಲಿ ಮರು ಡಾಂಬರೀಕರಣಕ್ಕೆ ಚಾಲನೆ ನೀಡಲಾಗುತ್ತದೆ.

ದಸರಾ ಮಹೋತ್ಸವ ಹಾಗೂ ಮಳೆ ಅಡಚಣೆ ಹಿನ್ನೆಲೆಯಲ್ಲಿ ನಗರದ ಹೃದಯ ಭಾಗಕ್ಕಷ್ಟೇ ಡಾಂಬರೀಕರಣ ಮಾಡಲಾಗಿತ್ತು. ಆದರೆ, ಇದೀಗ ದಸರಾ ಮುಗಿದು ಮಳೆಯೂ ಬಿಡುವು ಕೊಟ್ಟಿರುವುದರಿಂದ ವಾರದೊಳಗೆ ನಗರದ ಗುಂಡಿ ಹಾಗೂ ಹಳ್ಳಬಿದ್ದ ರಸ್ತೆಗಳಿಗೆ ಡಾಂಬರೀಕರಣ ಹಾಕಲು ಪಾಲಿಕೆ ನಿರ್ಧರಿಸಿದೆ. ಸೋಮವಾರ (ಅ.10ರಿಂದ) ದಿಂದಲೇ ನಗರಪಾಲಿಕೆ ಮೇಯರ್‌ ಶಿವಕುಮಾರ್‌ ಅವರು ನಗರದಾದ್ಯಂತ ಸ್ಥಳ ಪರಿಶೀಲನೆ ನಡೆಸಿ ಯಾವ ಬಡಾವಣೆಯ ಯಾವ ರಸ್ತೆಗಳಿಗೆ ಡಾಂಬರೀಕರಣ ಅಗತ್ಯವಿದೆ ಎಂಬ ಪಟ್ಟಿ ತಯಾರಿಸಲು ಸಿದ್ಧತೆ ನಡೆಸಿದ್ದಾರೆ. ಈ ಸಂಬಂಧ ಪಾಲಿಕೆ ಆಯುಕ್ತ ಲಕ್ಷ್ಮಿಕಾಂತರೆಡ್ಡಿ ಅವರೊಂದಿಗೂ ಮಾತುಕತೆ ನಡೆಸಿದ್ದು, ಇನ್ನೆರಡು ತಿಂಗಳಿನಲ್ಲಿ ಗುಂಡಿ ರಸ್ತೆಗಳಿಗೆ ಮುಕ್ತಿ ನೀಡಲು ಕಟಿಬದ್ಧರಾಗಿದ್ದಾರೆ.

ಎಲ್ಲಿಎಷ್ಟು ಅನುದಾನ?
ಈ ಹಿಂದಿನ ಮೇಯರ್‌ ಸುನಂದಾ ಪಾಲನೇತ್ರ ಅವರು 25 ಕೋಟಿ ರೂ., ಶಾಸಕರಾದ ಎಸ್‌.ಎ. ರಾಮದಾಸ್‌ ಅವರು 150 ಕೋಟಿ ರೂ. ಹಾಗೂ ಎಲ್‌.ನಾಗೇಂದ್ರ ಅವರು 200 ಕೋಟಿ ರೂ. ಅನುದಾನವನ್ನು ರಸ್ತೆ, ಪಾರ್ಕ್, ಯುಜಿಡಿ ಅಭಿವೃದ್ಧಿಗೆ ತಂದಿದ್ದಾರೆ. ಇದರ ಜೊತೆಗೆ ಪಾಲಿಕೆಯ 10 ಕೋಟಿ ರೂ. ಹಾಗೂ 15ನೇ ಹಣಕಾಸಿನ ಯೋಜನೆಯಡಿ ಅನುದಾನವನ್ನು ರಸ್ತೆ ಡಾಂಬರೀಕರಣಕ್ಕೆ ಬಳಸಲಾಗುತ್ತಿದೆ. ಒಟ್ಟಾರೆ ಸದ್ಯ 250 ಕೋಟಿ ರೂ. ವೆಚ್ಚದಲ್ಲಿ ಇನ್ನು ಮೂರು ದಿನದಲ್ಲಿ ಮರು ಡಾಂಬರೀಕರಣಕ್ಕೆ ಚಾಲನೆ ನೀಡಲಾಗುತ್ತದೆ. ಟೆಂಡರ್‌ ಹಂತದಲ್ಲಿರುವ ರಸ್ತೆ ಕಾಮಗಾರಿಯನ್ನೂ ಬೇಗ ಮುಗಿಸಲು ಪಾಲಿಕೆ ಚಿಂತನೆ ನಡೆಸಿದೆ.

andolana

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

9 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

10 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

10 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

10 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

11 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

19 hours ago