ಮೈಸೂರು

ಮೈಸೂರು | ರಸ್ತೆ ಬದಿ ಕಸದ ರಾಶಿ ; ಸಮಾಗಮ ವೆಲ್ಫೇರ್‌ ಸಂಸ್ಥೆಯಿಂದ ಅರಿವು ಕಾರ್ಯಗಾರ

ಮೈಸೂರು : ಇಲ್ಲಿನ ವಿಜಯನಗರದ ನಾಲ್ಕನೇ ಹಂತದಲ್ಲಿ ರಸ್ತೆ ಬದಿ ಕಸ ಸುರಿಯುತ್ತಿರುವುದು ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ರಸ್ತೆ ಬದಿ ಕಸದ ರಾಶಿ ಹಾಗೂ ತ್ಯಾಜ್ಯ ನಿರ್ವಹಣೆಯ ಸಮಸ್ಯೆಯನ್ನು ಬಗೆಹರಿಸಲು ಸಮಾಗಮ ವೆಲ್ಫೇರ್ ಸಂಸ್ಥೆಯು ಕ್ಲೀನ್ ಮೈಸೂರು ಸೇವ್ ಫ್ಯೂಚರ್ ಎಂಬ ಘೋಷವಾಕ್ಯದಡಿ ಭಿತ್ತಿ ಪತ್ರವನ್ನು ಬಿಡುಗಡೆಗೊಳಿಸಿ  ಸಾರ್ವಜನಿಕರಲ್ಲಿ ಅರಿವು  ಮೂಡಿಸುತ್ತಿದೆ.

ಭಾನುವಾರ ವಿಜಯನಗರದ ಮೈಲಾರಿ ಹೋಟೆಲ್‌ನಲ್ಲಿ ನಡೆದ ಸಮಾರಂಭದಲ್ಲಿ ಭಿತ್ತಿ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.

ಬಳಿಕ ಮಾತನಾಡಿದ ವಿಜಯನಗರ ನಿವಾಸಿಗಳ ಸಂಘದ ಅಧ್ಯಕ್ಷ ರಾಮಕೃಷ್ಣ ಗೌಡ, ಇತ್ತೀಚಿನ ದಿನಗಳಲ್ಲಿ ನಾಲ್ಕನೇ ಹಂತದಲ್ಲಿ ತ್ಯಾಜ್ಯದ ನಿರ್ವಹಣೆ ಸಮಸ್ಯೆಯು ಹೆಚ್ಚಾಗುತ್ತಿದ್ದು ನಗರಸಭೆಯ ಕಸ ಸಂಗ್ರಹಣ ವಾಹನ ಮನೆಯ ಬಳಿ ಬಂದರು ಕೆಲವರು ಸಾರ್ವಜನಿಕರು ತ್ಯಾಜ್ಯವನ್ನು ಎಲ್ಲೆಂದರಲ್ಲಿ ಹಾಕುತ್ತಿದ್ದಾರೆ ಎಂದು ಬೇಸರಿಸಿದರು.

ಹೀಗೆ ಎಲ್ಲೆಂದರಲ್ಲಿ ಕಸದ ರಾಶಿ ಎಸೆಯುವುದರಿಂದ ಮುಂಜಾನೆ ವಾಕಿಂಗ್ ಬರುವವರು ಮೂಗು ಮುಚ್ಚಿಕೊಂಡು ಓಡಾಡುವ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ನಿವಾಸಿಗಳು ಕಸವನ್ನು ಮನೆಯ ಬಳಿ ಬರುವ ಕಸದ ವಾಹನಕ್ಕೆ ಕಸ ನೀಡಿ ಎಂದು ಹೇಳಿದರು.

ಪರಿಸರ ಸಂರಕ್ಷಣೆ ದೃಷ್ಠಿಯಿಂದ ಸಮಾಗಮ ವೆಲ್ಫೇರ್ ಸಂಸ್ಥೆಯು ಇಂತಹ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಪ್ರಸ್ತುತ ಅತ್ಯಾವಶ್ಯಕವಾಗಿದೆ. ನಮ್ಮ ಮೈಸೂರು ಸ್ವಚ್ಛ ಮೈಸೂರಗಲೂ ಎಲ್ಲರೂ ಕೈಜೋಡಿಸೋಣ ಎಂದು ಕರೆ ನೀಡಿದರು.

ಬಳಿಕ ಮಾತನಾಡಿದ ಸಮಾಗಮ ವೆಲ್ಫೇರ್ ಫೌಂಡೇಶನ್ ಸಂಸ್ಥೆಯ ಸಂಸ್ಥಾಪಕ ಪಾಂಡು ಎಸ್, ಸಾರ್ವಜನಿಕರಲ್ಲಿನ ಪರಿಸರ ಕಾಳಜಿಯ ಕೊರತೆ ಹಾಗೂ ನಿರ್ಲಕ್ಷ ಮನೋಭಾವನೆಯಿಂದ ತ್ಯಾಜ್ಯದ ಸಮಸ್ಯೆ ಉಲ್ಬಣಗೊಳ್ಳುತ್ತಿದೆ, ಜಾಗೃತಿ ನೀಡುವ ಸಲುವಾಗಿ ಬಿತ್ತಿ ಪತ್ರಿಕೆಯನ್ನು ಪ್ರತಿ ಮನೆಮನೆಗೂ ತಲುಪಿಸಿ ಅರಿವು ಮೂಡಿಸಲಾಗುವುದು ಎಂದು ಹೇಳಿದರು.

ಮುಂದಿನ ವಾರದೊಳೆಗೆ ಪ್ರತಿ ಮನೆ ಮನೆಗೂ ಭಿತ್ತಿ ಪತ್ರವನ್ನು ಹಂಚಿ, ಅರಿವು ಮೂಡಿಸಲಾಗುವುದು. ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು ಎಂದು.  ನಮ್ಮ ಸುತ್ತಮುತ್ತಲಿನ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ನಿವಾಸಿಗಳು ಭಾವಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಪ್ರೊ. ಆನಂದ್, ನಿರ್ದೇಶಕ ಶಂಭುಲಿಂಗೇಗೌಡ, ಡಿ ಎಲ್ ಮಂಜುನಾಥ್, ಸದಸ್ಯರುಗಳಾದ ನಂಜುಂಡ, ನಿವೃತ್ತ ಡಿ.ವೈ.ಎಸ್.ಪಿ, ಡಾ. ಪುಟ್ಟಸ್ವಾಮಿ, ಪಾಂಡು, ರಾಜಶೇಖರ್ ಮತ್ತು ಸಮಾಗಮ ವೆಲ್ಫೇರ್ ಫೌಂಡೇಶನ್ ಸಂಸ್ಥೆಯ ನಿರ್ದೇಶಕರಾದ ಸುಮಿತ್ರ, ರಾಘವೇಂದ್ರ ಸ್ವಾಮಿ, ಶಿವಕುಮಾರ್ ಸ್ಥಳೀಯರಾದ ನಾರಾಯಣಸ್ವಾಮಿ ಹಾಜರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೇಂದ್ರದ ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ಬೆಂಗಳೂರು: ಬಿಜೆಪಿ ಶಾಸಕ ಸಭಾತ್ಯಾಗದ ನಡುವೆ ಕೇಂದ್ರ ಸರ್ಕಾರದ ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ರಾಜ್ಯ ಸರ್ಕಾರ ಇಂದು ವಿಧಾನಸಭೆಯಲ್ಲಿ…

2 hours ago

ಹನೂರು| ದ್ವಿಚಕ್ರ ವಾಹನದಲ್ಲಿ ಅಕ್ರಮ ಗಾಂಜಾ ಸಾಗಣೆ: ನಾಲ್ವರು ಆರೋಪಿಗಳ ಬಂಧನ

ಹನೂರು: ದ್ವಿಚಕ್ರವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಡಿವೈಎಸ್ಪಿ ಪತ್ತೆದಳದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲ್ಲೂಕಿನ…

3 hours ago

ಶೀಘ್ರದಲ್ಲೇ ಹೊಸ ಟೋಲ್‌ ನೀತಿ ಜಾರಿ: ಕೇಂದ್ರ ಸಚಿವ ನಿತಿನ್‌ ಗಡ್ಕರಿ

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ಸಂಗ್ರಹಕ್ಕೆ ಸಂಬಂಧಿಸಿದಂತೆ ಸರ್ಕಾರ ಶೀಘ್ರದಲ್ಲೇ ಹೊಸ ನೀತಿಯನ್ನು ಪ್ರಕಟಿಸಲಿದೆ ಎಂದು ಕೇಂದ್ರ ಸಚಿವ ನಿತಿನ್‌…

3 hours ago

ಮಳೆ ಕೊರತೆಯಿಂದ ತೊಗರಿ ಬೆಳೆ ಹಾನಿ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಿಷ್ಟು.!

ಬೆಂಗಳೂರು: ಕಳೆದ ಸಾಲಿನಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ತೊಗರಿ ಬೆಳೆ ಹಾನಿಯನ್ನು ಅಂದಾಜಿಸಲಾಗಿದ್ದು, ರಾಜ್ಯಾದ್ಯಂತ ತೊಗರಿ ಬೆಳೆದ 1.86 ಲಕ್ಷ…

4 hours ago

ಭಾರತದ ಆರೋಗ್ಯ ವ್ಯವಸ್ಥೆ ಬಲಪಡಿಸಲು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕರೆ

ನವದೆಹಲಿ: ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್.ಡಿ.ದೇವೇಗೌಡ ಅವರು ಭಾರತದ ಆರೋಗ್ಯ ವ್ಯವಸ್ಥೆ ಬಲಪಡಿಸಲು ಕರೆ ನೀಡಿದ್ದಾರೆ. ಈ…

4 hours ago

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್:‌ 2ನೇ ಆರೋಪಿ ತರುಣ್‌ ರಾಜ್‌ ಜಾಮೀನು ಅರ್ಜಿ ವಜಾ

ಬೆಂಗಳೂರು: ನಟಿ ರನ್ಯಾ ರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ ತರುಣ್‌ ರಾಜ್‌ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ.…

4 hours ago