ಮೈಸೂರು: ಮೈಸೂರು-ಬೆಂಗಳೂರು ರೈಲಿನಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬಂದು ದರೋಡೆ ಮಾಡಿದ್ದ ನಾಲ್ವರು ಖದೀಮರನ್ನು ಮೈಸೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
ಫೆಬ್ರವರಿ. 11ರಂದು ಮಧ್ಯರಾತ್ರಿ ರೈಲಿನಲ್ಲಿ ಈ ದರೋಡೆ ಪ್ರಕರಣ ನಡೆದಿತ್ತು. ಮದ್ದೂರು ಸಮೀಪ ರೈಲಿಗೆ ಹತ್ತಿದ್ದ ಈ ದರೋಡೆಕೋರರು ಮಲಗಿದ್ದ ಚಂದನ್ ಎಂಬುವವರ ಮೇಲೆ ಹಲ್ಲೆ ಮಾಡಿ, ಬಟನ್ ಚಾಕು ತೋರಿಸಿ ಅವರ ಬಳಿಯಿದ್ದ ಹಣ, ಮೊಬೈಲ್ ಫೋನ್ ಕಿತ್ತುಗೊಂಡಿದ್ದರು. ಅಲ್ಲದೇ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಗಗನ್ ಹಾಗೂ ಶಿವಾನಂದ್ ಸೇರಿ ಹಲವರ ಮೇಲೂ ಹಲ್ಲೆ ನಡೆಸಿದ ನಂತರ ಚನ್ನಪಟ್ಟಣ ರೈಲ್ವೆ ಸ್ಟೇಷನ್ ಬಳಿ ಇಳಿದು ಪರಾರಿಯಾಗಿದ್ದರು.
ಈ ಘಟನೆ ನಡೆದ ಮರುದಿನವೇ ಮೈಸೂರು ರೈಲ್ವೆ ಪೊಲೀಸರರಿಗೆ ಪ್ರಯಾಣಿಕ ಚಂದನ್ ದೂರು ನೀಡಿದ್ದರು. ಈ ದೂರಿನ ಅನ್ವಯ ರೈಲ್ವೆ ನಿಲ್ದಾಣಗಳ ಸಿಸಿಟಿವಿ ಆಧರಿಸಿ ಕಾರ್ಯಾಚರಣೆ ನಡೆಸಿದ ಮೈಸೂರು ರೈಲ್ವೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಇನ್ನು ಈ ಪ್ರಕರಣದಲ್ಲಿ ಬಂಧಿಯಾಗಿರುವ ಆರೋಪಿಗಳನ್ನು ಶೈಕ್ ಸೋಹ್ಮಲ್, ಸೋಹೈಲ್ ಖಾನ್, ಮೊಹಮ್ಮದ್ ಯಾಸೀನ್ ಹಾಗೂ ೧೭ ವರ್ಷದ ಅಪ್ರಾಪ್ತ ಯುವಕ ಎಂದು ಗುರುತಿಸಲಾಗಿದೆ. ಅಲ್ಲದೇ ಬಂಧಿತ ಆರೋಪಿಗಳಿಂದ 6,885 ರೂ. ನಗದು ಹಣ ಮತ್ತು ಬೆಲೆ ಬಾಳುವ ಮೊಬೈಲ್ ಫೋನ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…