ನಂಜನಗೂಡು: ಪಟ್ಟಣದಲ್ಲಿ ಸರಣಿ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದ್ದು, ನಗರವಾಸಿಗಳಲ್ಲಿ ಆತಂಕ ಮೂಡಿಸಿದೆ.
ನಗರದ ಆರ್.ಪಿ. ರಸ್ತೆಯಲ್ಲಿರುವ ಸುಮಾರು 14 ರಿಂದ 16 ಅಂಗಡಿಗಳಲ್ಲಿ ಕಳ್ಳತನ ಹಾಗೂ ಕಳ್ಳತನಕ್ಕೆ ಯತ್ನ ನಡೆದಿರುವ ಘಟನೆ ಕಳೆದ ತಡರಾತ್ರಿ ಸಂಭವಿಸಿದೆ.
ಪಟ್ಟಣ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಬಾಯ್ಸ್ ಮಿಡಲ್ ಶಾಲೆಯ ಆವರಣದಲ್ಲಿನ ಹಾಲಿನ ಡೈರಿಯಲ್ಲಿ ಸುಮಾರು 2 ಸಾವಿರ ರೂ. ನಗದು ಕಳ್ಳತನವಾಗಿದ್ದು, ಎದುರಿನ ಕೋಳಿ ಮಾರಾಟದ ಅಂಗಡಿಗಳಲ್ಲಿ ಇದ್ದ ಅಲ್ಪ ಪ್ರಮಾಣದ ಹಣವೂ ಕಳ್ಳರ ಪಾಲಾಗಿದೆ.
ಇದಲ್ಲದೆ, ನಾಲ್ಕನೇ ಕ್ರಾಸ್ನ ಅಪ್ಪು ಸ್ಟೋರ್, ಅಕ್ಷಯ ಫುಟ್ವೇರ್, 6ನೇ ಕ್ರಾಸ್ನ ಅಶ್ವಿನಿ ಬೇಕರಿ, ನಂಜುಂಡೇಶ್ವರ ಡಿಟಿಎಚ್ ಹಾಗೂ ವಿಡಿಯೋ ಅಂಗಡಿ ಸೇರಿದಂತೆ ಹಲವೆಡೆ ಬೀಗ ಮುರಿದು ಕಳ್ಳತನಕ್ಕೆ ಯತ್ನ ಮಾಡಲಾಗಿದೆ.
ಕೆಲವು ಅಂಗಡಿಗಳಲ್ಲಿ ಸರಕಿಗೆ ಹಾನಿಯಾಗಿರುವ ಮಾಹಿತಿ ದೊರೆತಿದೆ.
ಕಳ್ಳತನಕ್ಕೆ ಯತ್ನಿಸುತ್ತಿರುವ ಖದೀಮನ ದೃಶ್ಯಗಳು ಸಿಸಿ ಕ್ಯಾಮೆರಾಗಳಲ್ಲಿ ಸ್ಪಷ್ಟವಾಗಿ ದಾಖಲಾಗಿವೆ. ಪೊಲೀಸ್ ಠಾಣೆಯ ಸಮೀಪದಲ್ಲೇ ಈ ರೀತಿಯ ಸರಣಿ ಕಳ್ಳತನ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ. ಪಟ್ಟಣದಲ್ಲಿ ಭದ್ರತೆ ಹೆಚ್ಚಿಸುವಂತೆ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…
ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…
ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…
ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…
ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…
ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…