ನಂಜನಗೂಡು: ಪಟ್ಟಣದಲ್ಲಿ ಸರಣಿ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದ್ದು, ನಗರವಾಸಿಗಳಲ್ಲಿ ಆತಂಕ ಮೂಡಿಸಿದೆ.
ನಗರದ ಆರ್.ಪಿ. ರಸ್ತೆಯಲ್ಲಿರುವ ಸುಮಾರು 14 ರಿಂದ 16 ಅಂಗಡಿಗಳಲ್ಲಿ ಕಳ್ಳತನ ಹಾಗೂ ಕಳ್ಳತನಕ್ಕೆ ಯತ್ನ ನಡೆದಿರುವ ಘಟನೆ ಕಳೆದ ತಡರಾತ್ರಿ ಸಂಭವಿಸಿದೆ.
ಪಟ್ಟಣ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಬಾಯ್ಸ್ ಮಿಡಲ್ ಶಾಲೆಯ ಆವರಣದಲ್ಲಿನ ಹಾಲಿನ ಡೈರಿಯಲ್ಲಿ ಸುಮಾರು 2 ಸಾವಿರ ರೂ. ನಗದು ಕಳ್ಳತನವಾಗಿದ್ದು, ಎದುರಿನ ಕೋಳಿ ಮಾರಾಟದ ಅಂಗಡಿಗಳಲ್ಲಿ ಇದ್ದ ಅಲ್ಪ ಪ್ರಮಾಣದ ಹಣವೂ ಕಳ್ಳರ ಪಾಲಾಗಿದೆ.
ಇದಲ್ಲದೆ, ನಾಲ್ಕನೇ ಕ್ರಾಸ್ನ ಅಪ್ಪು ಸ್ಟೋರ್, ಅಕ್ಷಯ ಫುಟ್ವೇರ್, 6ನೇ ಕ್ರಾಸ್ನ ಅಶ್ವಿನಿ ಬೇಕರಿ, ನಂಜುಂಡೇಶ್ವರ ಡಿಟಿಎಚ್ ಹಾಗೂ ವಿಡಿಯೋ ಅಂಗಡಿ ಸೇರಿದಂತೆ ಹಲವೆಡೆ ಬೀಗ ಮುರಿದು ಕಳ್ಳತನಕ್ಕೆ ಯತ್ನ ಮಾಡಲಾಗಿದೆ.
ಕೆಲವು ಅಂಗಡಿಗಳಲ್ಲಿ ಸರಕಿಗೆ ಹಾನಿಯಾಗಿರುವ ಮಾಹಿತಿ ದೊರೆತಿದೆ.
ಕಳ್ಳತನಕ್ಕೆ ಯತ್ನಿಸುತ್ತಿರುವ ಖದೀಮನ ದೃಶ್ಯಗಳು ಸಿಸಿ ಕ್ಯಾಮೆರಾಗಳಲ್ಲಿ ಸ್ಪಷ್ಟವಾಗಿ ದಾಖಲಾಗಿವೆ. ಪೊಲೀಸ್ ಠಾಣೆಯ ಸಮೀಪದಲ್ಲೇ ಈ ರೀತಿಯ ಸರಣಿ ಕಳ್ಳತನ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ. ಪಟ್ಟಣದಲ್ಲಿ ಭದ್ರತೆ ಹೆಚ್ಚಿಸುವಂತೆ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…