ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ ನಡುವಿನ ಕಲಹ ಪ್ರಕರಣ ಸುಪ್ರೀಂಕೋರ್ಟ್ನಲ್ಲಿದೆ. ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಫೆಬ್ರವರಿ 16ಕ್ಕೆ ಮುಂದೂಡಿದೆ. ಜೊತೆಗೆ, ಮಧ್ಯಂತರ ಆದೇಶ ಮುಂದುವರಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.
ನನ್ನ ವಿರುದ್ಧ ಮಾಡಿರುವ ಅವಹೇಳನಕಾರಿ ಪೋಸ್ಟ್ ತೆಗೆದು ಹಾಕಬಹುದು. ಆದರೆ ಘಟನೆಯಿಂದ ನನ್ನ ಕುಟುಂಬಕ್ಕೆ ಘಾಸಿಯಾಗಿದೆ. ಇದಕ್ಕಾಗಿ ಡಿ.ರೂಪಾ ಬೇಷರತ್ ಕ್ಷಮೆಯಾಚಿಸಬೇಕು ಎಂದು ರೋಹಿಣಿ ಸಿಂಧೂರಿ ಪರ ವಕೀಲರು ವಾದ ಮಂಡಿಸಿದರು. ಆದ್ರೆ, ಇದಕ್ಕೆ ತೀವ್ರ ಆಕ್ಷೇಪವ್ಯಕ್ತಪಡಿಸಿದ ಡಿ.ರೂಪಾ ಪರ ವಕೀಲರು, ರೋಹಿಣಿ ಸಿಂಧೂರಿ ಕೂಡಾ ಅವಹೇಳನಕಾರಿ ಮಾತನಾಡಿದ್ದಾರೆ. ಬುದ್ಧಿ ಭ್ರಮಣೆಯಾಗಿದೆ ಎಂದು ಮಾಧ್ಯಮಗಳ ಎದುರು ಹೇಳಿದ್ದಾರೆ ಎಂದು ಪ್ರತಿವಾದ ಮಂಡಿಸಿದರು.
ವಾದ ಪ್ರತಿವಾದ ವೇಳೆ ಮಧ್ಯಪ್ರವೇಶ ಮಾಡಿದ ನ್ಯಾಯಮೂರ್ತಿ ಎ.ಎಸ್.ಓಕಾ, ನೀವು ಒಂದು ನಿರ್ಧಾರಕ್ಕೆ ಬರಬೇಕು, ಇಬ್ಬರಿಗೂ ಉಜ್ವಲ ಭವಿಷ್ಯವಿದೆ ಎಂದು ಸಲಹೆ ನೀಡಿದರು.
ಬಳಿಕ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎ.ಎಸ್.ಓಕಾ ಅವರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 16ಕ್ಕೆ ಮುಂದೂಡಿದರು. ಆದರೆ, ಮಧ್ಯಂತರ ಆದೇಶ ಮುಂದುವರಿಸುವಂತೆ ಸೂಚನೆ ನೀಡಿದರು.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…