ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ ನಡುವಿನ ಕಲಹ ಪ್ರಕರಣ ಸುಪ್ರೀಂಕೋರ್ಟ್ನಲ್ಲಿದೆ. ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಫೆಬ್ರವರಿ 16ಕ್ಕೆ ಮುಂದೂಡಿದೆ. ಜೊತೆಗೆ, ಮಧ್ಯಂತರ ಆದೇಶ ಮುಂದುವರಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.
ನನ್ನ ವಿರುದ್ಧ ಮಾಡಿರುವ ಅವಹೇಳನಕಾರಿ ಪೋಸ್ಟ್ ತೆಗೆದು ಹಾಕಬಹುದು. ಆದರೆ ಘಟನೆಯಿಂದ ನನ್ನ ಕುಟುಂಬಕ್ಕೆ ಘಾಸಿಯಾಗಿದೆ. ಇದಕ್ಕಾಗಿ ಡಿ.ರೂಪಾ ಬೇಷರತ್ ಕ್ಷಮೆಯಾಚಿಸಬೇಕು ಎಂದು ರೋಹಿಣಿ ಸಿಂಧೂರಿ ಪರ ವಕೀಲರು ವಾದ ಮಂಡಿಸಿದರು. ಆದ್ರೆ, ಇದಕ್ಕೆ ತೀವ್ರ ಆಕ್ಷೇಪವ್ಯಕ್ತಪಡಿಸಿದ ಡಿ.ರೂಪಾ ಪರ ವಕೀಲರು, ರೋಹಿಣಿ ಸಿಂಧೂರಿ ಕೂಡಾ ಅವಹೇಳನಕಾರಿ ಮಾತನಾಡಿದ್ದಾರೆ. ಬುದ್ಧಿ ಭ್ರಮಣೆಯಾಗಿದೆ ಎಂದು ಮಾಧ್ಯಮಗಳ ಎದುರು ಹೇಳಿದ್ದಾರೆ ಎಂದು ಪ್ರತಿವಾದ ಮಂಡಿಸಿದರು.
ವಾದ ಪ್ರತಿವಾದ ವೇಳೆ ಮಧ್ಯಪ್ರವೇಶ ಮಾಡಿದ ನ್ಯಾಯಮೂರ್ತಿ ಎ.ಎಸ್.ಓಕಾ, ನೀವು ಒಂದು ನಿರ್ಧಾರಕ್ಕೆ ಬರಬೇಕು, ಇಬ್ಬರಿಗೂ ಉಜ್ವಲ ಭವಿಷ್ಯವಿದೆ ಎಂದು ಸಲಹೆ ನೀಡಿದರು.
ಬಳಿಕ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎ.ಎಸ್.ಓಕಾ ಅವರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 16ಕ್ಕೆ ಮುಂದೂಡಿದರು. ಆದರೆ, ಮಧ್ಯಂತರ ಆದೇಶ ಮುಂದುವರಿಸುವಂತೆ ಸೂಚನೆ ನೀಡಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…