ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ ನಡುವಿನ ಕಲಹ ಪ್ರಕರಣ ಸುಪ್ರೀಂಕೋರ್ಟ್ನಲ್ಲಿದೆ. ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಫೆಬ್ರವರಿ 16ಕ್ಕೆ ಮುಂದೂಡಿದೆ. ಜೊತೆಗೆ, ಮಧ್ಯಂತರ ಆದೇಶ ಮುಂದುವರಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.
ನನ್ನ ವಿರುದ್ಧ ಮಾಡಿರುವ ಅವಹೇಳನಕಾರಿ ಪೋಸ್ಟ್ ತೆಗೆದು ಹಾಕಬಹುದು. ಆದರೆ ಘಟನೆಯಿಂದ ನನ್ನ ಕುಟುಂಬಕ್ಕೆ ಘಾಸಿಯಾಗಿದೆ. ಇದಕ್ಕಾಗಿ ಡಿ.ರೂಪಾ ಬೇಷರತ್ ಕ್ಷಮೆಯಾಚಿಸಬೇಕು ಎಂದು ರೋಹಿಣಿ ಸಿಂಧೂರಿ ಪರ ವಕೀಲರು ವಾದ ಮಂಡಿಸಿದರು. ಆದ್ರೆ, ಇದಕ್ಕೆ ತೀವ್ರ ಆಕ್ಷೇಪವ್ಯಕ್ತಪಡಿಸಿದ ಡಿ.ರೂಪಾ ಪರ ವಕೀಲರು, ರೋಹಿಣಿ ಸಿಂಧೂರಿ ಕೂಡಾ ಅವಹೇಳನಕಾರಿ ಮಾತನಾಡಿದ್ದಾರೆ. ಬುದ್ಧಿ ಭ್ರಮಣೆಯಾಗಿದೆ ಎಂದು ಮಾಧ್ಯಮಗಳ ಎದುರು ಹೇಳಿದ್ದಾರೆ ಎಂದು ಪ್ರತಿವಾದ ಮಂಡಿಸಿದರು.
ವಾದ ಪ್ರತಿವಾದ ವೇಳೆ ಮಧ್ಯಪ್ರವೇಶ ಮಾಡಿದ ನ್ಯಾಯಮೂರ್ತಿ ಎ.ಎಸ್.ಓಕಾ, ನೀವು ಒಂದು ನಿರ್ಧಾರಕ್ಕೆ ಬರಬೇಕು, ಇಬ್ಬರಿಗೂ ಉಜ್ವಲ ಭವಿಷ್ಯವಿದೆ ಎಂದು ಸಲಹೆ ನೀಡಿದರು.
ಬಳಿಕ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎ.ಎಸ್.ಓಕಾ ಅವರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 16ಕ್ಕೆ ಮುಂದೂಡಿದರು. ಆದರೆ, ಮಧ್ಯಂತರ ಆದೇಶ ಮುಂದುವರಿಸುವಂತೆ ಸೂಚನೆ ನೀಡಿದರು.
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…