ಮೈಸೂರು: ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಿಸುವ ಯೋಜನೆಯನ್ನು ಶಾಶ್ವತವಾಗಿ ಕೈಬಿಡಬೇಕು ಎಂದು ಚಾಮುಂಡಿ ಬೆಟ್ಟ ಉಳಿಸಿ ಸಮಿತಿ ಸರ್ಕಾರಕ್ಕೆ ಮನವಿ ಮಾಡಿದೆ.
ಪತ್ರಕರ್ತರ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಚಾಮುಂಡಿ ಬೆಟ್ಟ ಉಳಿಸಿ ಸಮಿತಿಯು ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದೆ.
ಬೆಟ್ಟಕ್ಕೆ ರೋಪ್ ವೇ ನಿರ್ವಾಣ ವಾಡುವ ಪ್ರಸ್ತಾಪ ರಾಮಕೃಷ್ಣ ಹೆಗಡೆುಂವರ ಸರ್ಕಾರ ಇದ್ದಾಗಲಿಂದಲೂ ಇದುವರೆಗೆ ಹಲವು ಬಾರಿ ಬಂದಿದ್ದು ಪರಿಸರ ಪ್ರೇಮಿಗಳು ಪರಿಸರ ತಜ್ಞರ ಮತ್ತು ನಾಗರೀಕರ ತೀವ್ರ ವಿರೋಧದ ಕಾರಣದಿಂದ ಚಾಮುಂಡಿ ಬೆಟ್ಟಕ್ಕೆ ಹೋಗಲು ರೋಪ್ ವೇ ಅವಶ್ಯಕತೆ ಇರುವುದಿಲ್ಲ ಎಂದರು.
ಚಾಮುಂಡಿ ಬೆಟ್ಟವನ್ನು ಗಿಜಿಗುಡುವ ಪ್ರವಾಸಿ ತಾಣ ಅಥವಾ ವ್ಯಾಪಾರಿ ಕೇಂದ್ರ ಮಾಡದೆ, ಕೇವಲ ಧಾರ್ಮಿಕ ಕೇಂದ್ರವಾಗಿ ಉಳಿಸಬೇಕು ಎಂದು ಸಮಿತಿ ಮನವಿ ಮಾಡಿದೆ.
ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ರವರು, ಸಂಸದ ಶ್ರೀನಿವಾಸಪ್ರಸಾದ್, ಶಾಸಕ ಜಿ.ಟಿ. ದೇವೇಗೌಡ, ಕಾದಂಬರಿಕಾರ ಎಸ್.ಎಲ್. ಭೈರಪ್ಪ, ಸಾಹಿತಿ ದೇವನೂರ ಮಹಾದೇವ, ಪ್ರಧಾನ ಗುರುದತ್ತ ಹಾಗೂ ಪಂಡಿತ್ ರಾಜೀವ ತಾರಾನಾಥ ಸೇರಿದಂತೆ ಹಲವು ಗಣ್ಯರು, ಸಾಹಿತಿಗಳು ಮತ್ತು ಕಲಾವಿದರು ಬೆಟ್ಟಕ್ಕೆ ರೋಪ್ ವೇ ಬೇಡ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರದ ಪ್ರಸಾದ್ ಯೋಜನೆ ಬದಲಿಗೆ ಗಿಡಗಳನ್ನು ಬೆಳೆಸುವುದು. ಮಳೆ ನೀರು ಕೊಯ್ಲು ಮಾಡುವುದು, ಚರಂಡಿ ನೀರಿನ ಸರಿಯಾದ ನಿರ್ವಹಣೆ ಹಾಗೂ ಜಲಮೂಲಗಳ ಸಂರಕ್ಷಣೆ ಮುಂತಾದ ಪರಿಸರ ಸ್ನೇಹಿ ಸುಸ್ಥಿರ ಅಭಿವೃದ್ಧಿ ಮಾಡಲು ಜನ ಪ್ರತಿನಿಧಿಗಳು ಮತ್ತು ಸರ್ಕಾರ ಮುಂದಾಗಬೇಕು ಎಂದು ಹೇಳಿದರು.
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…