ಮೈಸೂರು: ಬೇಕರಿಯಲ್ಲಿ ತಿಂದ ತಿನಿಸುಗಳಿಗೆ ಹಣ ಕೇಳಿದ್ದಕ್ಕಾಗಿ ದಾಂಧಲೆ ನಡೆಸಿ ಬೇಕರಿ ನೌಕರನಿಗೆ ಚಾಕುವಿನಿಂದ ಇರಿದಿರುವ ಘಟನೆ ನಗರದ ಹೂಟಗಳ್ಳಿ ಕಾಲೋನಿಯಲ್ಲಿ ನಡೆದಿದೆ.
ಇಲ್ಲಿನ ಕೃಷ್ಣಾ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಮದ್ ಸಾಜಿದ್ ಎಂಬುವವರ ಮೇಲೆ ಪುಡಿ ರೌಡಿಗಳು ಚಾಕುವಿನಿಂದ ದಾಳಿ ಮಾಡಿದ್ದಾರೆ. ರೌಡಿ ಶೀಟರ್ಗಳಾದ ಪ್ರಜ್ವಲ್ ಹಾಗೂ ಸಂಜು ಎಂಬುವವರು ದಾಳಿ ಮಾಡಿದ ಆರೋಪಿಗಳಾಗಿದ್ದಾರೆ. ಅದೃಷ್ಟವಶಾತ್ ಸಾಜಿದ್ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಶನಿವಾರ ರಾತ್ರಿ 10ಗಂಟೆ ವೇಳೆಯಲ್ಲಿ ಬೇಕರಿಗೆ ಬಂದ ಪ್ರಜ್ವಲ್ ಹಾಗೂ ಸಂಜು ಚಂಪಾಕಲಿ, ಪಪ್ಸ್ ಪಡೆದು ಹೊರ ನಡೆಯಲು ಮುಂದಾಗಿದ್ದಾರೆ. ತಿಂದ ಪದಾರ್ಥಗಳಿಗೆ ಹಣ ಕೇಳಿದ್ದಕ್ಕೆ ಏಕಾಏಕಿ ಸಾಜಿದ್ ಮೇಲೆ ದಾಳಿ ಮಾಡಿದ್ದಾರೆ.
ಬಳಿಕ ಸಾಜಿದ್ ಬಳಿಯಿದ್ದ ಮೂವತ್ತು ಗ್ರಾಂ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದಾರೆ. ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಜು ಬಂಧನವಾಗಿದ್ದು, ಪ್ರಜ್ವಲ್ ತಲೆ ಮರೆಸಿಕೊಂಡಿದ್ದಾರೆ.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…