ಮೈಸೂರು: ಬೇಕರಿಯಲ್ಲಿ ತಿಂದ ತಿನಿಸುಗಳಿಗೆ ಹಣ ಕೇಳಿದ್ದಕ್ಕಾಗಿ ದಾಂಧಲೆ ನಡೆಸಿ ಬೇಕರಿ ನೌಕರನಿಗೆ ಚಾಕುವಿನಿಂದ ಇರಿದಿರುವ ಘಟನೆ ನಗರದ ಹೂಟಗಳ್ಳಿ ಕಾಲೋನಿಯಲ್ಲಿ ನಡೆದಿದೆ.
ಇಲ್ಲಿನ ಕೃಷ್ಣಾ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಮದ್ ಸಾಜಿದ್ ಎಂಬುವವರ ಮೇಲೆ ಪುಡಿ ರೌಡಿಗಳು ಚಾಕುವಿನಿಂದ ದಾಳಿ ಮಾಡಿದ್ದಾರೆ. ರೌಡಿ ಶೀಟರ್ಗಳಾದ ಪ್ರಜ್ವಲ್ ಹಾಗೂ ಸಂಜು ಎಂಬುವವರು ದಾಳಿ ಮಾಡಿದ ಆರೋಪಿಗಳಾಗಿದ್ದಾರೆ. ಅದೃಷ್ಟವಶಾತ್ ಸಾಜಿದ್ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಶನಿವಾರ ರಾತ್ರಿ 10ಗಂಟೆ ವೇಳೆಯಲ್ಲಿ ಬೇಕರಿಗೆ ಬಂದ ಪ್ರಜ್ವಲ್ ಹಾಗೂ ಸಂಜು ಚಂಪಾಕಲಿ, ಪಪ್ಸ್ ಪಡೆದು ಹೊರ ನಡೆಯಲು ಮುಂದಾಗಿದ್ದಾರೆ. ತಿಂದ ಪದಾರ್ಥಗಳಿಗೆ ಹಣ ಕೇಳಿದ್ದಕ್ಕೆ ಏಕಾಏಕಿ ಸಾಜಿದ್ ಮೇಲೆ ದಾಳಿ ಮಾಡಿದ್ದಾರೆ.
ಬಳಿಕ ಸಾಜಿದ್ ಬಳಿಯಿದ್ದ ಮೂವತ್ತು ಗ್ರಾಂ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದಾರೆ. ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಜು ಬಂಧನವಾಗಿದ್ದು, ಪ್ರಜ್ವಲ್ ತಲೆ ಮರೆಸಿಕೊಂಡಿದ್ದಾರೆ.
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…