Categories: ಮೈಸೂರು

ಮೈಸೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ರೌಡಿಗಳ ಪೆರೇಡ್‌: ರೌಡಿಗಳಿಗೆ ಖಡಕ್‌ ಎಚ್ಚರಿಕೆ ಕೊಟ್ಟ ಖಾಕಿ

ಮೈಸೂರು: ವರುಣ ಗ್ರಾಮದ ಬಳಿ ರೌಡಿಶೀಟರ್ ಹತ್ಯೆ ನಡೆದ ಬೆನ್ನಲ್ಲೇ ಗ್ರಾಮಾಂತರ ಪ್ರದೇಶದ ಪ್ರಮುಖ ಕಡೆಗಳಲ್ಲಿ ಪೊಲೀಸರು ನಿಗಾ ಇಡಲು ಮುಂದಾಗಿದ್ದು, ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ರೌಡಿಗಳ ಪೆರೇಡ್ ನಡೆಯಿತು.

ವೃತ್ತ ನಿರೀಕ್ಷಕ ಡಾ.ಎಂ.ಎಲ್.ಶೇಖರ್ ಕಾನೂನು ಬಾಹಿರ ಕೃತ್ಯದಲ್ಲಿ ಭಾಗಿಯಾಗದಂತೆ ರೌಡಿಗಳಿಗೆ ಖಡಕ್‌ ಎಚ್ಚರಿಕೆ ನೀಡಿ, ಯಾವುದೇ ಅಹಿತಕರ ಘಟನೆಗಳಲ್ಲಿ ಭಾಗವಹಿಸದಂತೆ ಖಡಕ್‌ ವಾರ್ನಿಂಗ್ ನೀಡಿದರು. ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಭಾಗಿಯಾಗುವುದು, ಮೀಟರ್ ಬಡ್ಡಿ ದಂಧೆ ನಡೆಸುವುದು, ಹಫ್ತಾ ವಸೂಲಿ ಮಾಡುವುದು, ಸಾರ್ವಜನಿಕರಿಗೆ ಭೀತಿ ಹುಟ್ಟಿಸುವಂತಹ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ರೌಡಿಗಳಗೆ ಸೂಚನೆ ನೀಡಿದರು.

ಇದನ್ನೂ ಓದಿ:- ಮೈಸೂರು | ರೌಡಿಶೀಟರ್‌ಗಳಿಗೆ ಪೊಲೀಸರ ಖಡಕ್‌ ಎಚ್ಚರಿಕೆ

ಒಂದು ವೇಳೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾದ್ರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಹಾಗೂ ಅಡಿಷನಲ್ ಎಸ್ಪಿ ಮಲ್ಲಿಕ್ ಸೂಚನೆಯಂತೆ ರೌಡಿಗಳ ಪೆರೇಡ್ ನಡೆಸಲಾಯಿತು. ವಿವಿಧ ಗ್ರಾಮಗಳಲ್ಲಿ ರೌಡಿಶೀಟರ್ ಪಟ್ಟಿಯಲ್ಲಿರುವ 40ಕ್ಕೂ ಹೆಚ್ಚು ರೌಡಿಗಳನ್ನು ರೌಂಡ್ ಅಪ್ ಮಾಡಿ ಸಾರ್ವಜನಿಕರ ನೆಮ್ಮದಿಗೆ ಭಂಗ ತರುವಂತಹ ಚಟುವಟಿಕೆ ನಡೆಸದಂತೆ ವಾರ್ನಿಂಗ್ ಕೊಟ್ಟರು. ಈ ವೇಳೆ ಪಿಎಸ್‌ಐ ಚಂದ್ರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಹೊಸ ವರ್ಷ ಸಂಭ್ರಮ | ಮಾರ್ಗಸೂಚಿ ಪ್ರಕಟ ; ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ

ಬೆಂಗಳೂರು : 2027ರ ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ ಬೆಂಗಳೂರು ಪೊಲೀಸರು ಹೊಸ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಗೋವಾದ…

9 mins ago

ಬೌದ್ಧ ಬಿಕ್ಕುಗಳಿಗೆ ಶೀಘ್ರದಲ್ಲೇ ಮಾಸಿಕ ಸಂಭಾವನೆ : ಸರ್ಕಾರ ಘೋಷಣೆ

ಬೆಳಗಾವಿ : ರಾಜ್ಯದಲ್ಲಿರುವ ಬುದ್ಧವಿಹಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆಯನ್ನು ಶೀಘ್ರದಲ್ಲಿ ನೀಡುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು…

17 mins ago

ಮಂಡ್ಯ | SSLC ಫಲಿತಾಂಶ ಹೆಚ್ಚಳಕ್ಕೆ ಅಗತ್ಯ ಕ್ರಮ : ಜಿ.ಪಂ.ಸಿಇಓ ನಂದಿನಿ

ಮಂಡ್ಯ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಉತ್ತಮಗೊಳಿಸುವ ಸಂಬಂಧ 56 ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಸದರಿ ಅಧಿಕಾರಿಗಳು ತಮ್ಮ…

27 mins ago

ರೈತರ ಬೆಳೆ ಸಮೀಕ್ಷೆಗೆ GPS ಆಧಾರಿತ ಮೊಬೈಲ್ ತಂತ್ರಾಂಶ ಬಳಕೆ : ಸಚಿವ.ಎನ್.ಚಲುವರಾಯಸ್ವಾಮಿ

ಬೆಳಗಾವಿ : ರೈತರ ಅನುಕೂಲಕ್ಕಾಗಿ ಜಮೀನುಗಳಲ್ಲಿ ಬೆಳೆದ ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲು ಡಿಪಿಎಆರ್ ಇಲಾಖಾ ವತಿಯಿಂದ ಅಭಿವೃದ್ಧಿ ಪಡಿಸಿರುವ ಜಿ.ಪಿ.ಎಸ್…

37 mins ago

ರಾಜ್ಯದಲ್ಲಿ ಕೃಷಿಕರ ಏಳಿಗೆಗಾಗಿ ಕೃಷಿ ಯಾಂತ್ರಿಕರಣ ಯೋಜನೆ ಪರಿಣಾಮಕಾರಿಯಾಗಿ ಜಾರಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಳಗಾವಿ : ರಾಜ್ಯದಲ್ಲಿ ಎಲ್ಲಾ ವರ್ಗದ ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಕೃಷಿ ಯಾಂತ್ರೀಕರಣ ಯೋಜನೆ ಮೂಲಕ ಸಹಾಯಧನದಡಿಯಲ್ಲಿ ಒದಗಿಸಲಾಗುತ್ತಿದೆ ಎಂದು…

38 mins ago

ವಿಶೇಷ ಚೇತನ ಮಕ್ಕಳ ಕ್ರೀಡಾಕೂಟ : ತಗಡೂರು ವಸತಿ ಶಾಲೆಯ ವಿದ್ಯಾರ್ಥಿ ಆಯ್ಕೆ

ನಂಜನಗೂಡು : ರಾಜ್ಯಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟಕ್ಕೆ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ…

44 mins ago