ಮೈಸೂರು: ವರುಣ ಗ್ರಾಮದ ಬಳಿ ರೌಡಿಶೀಟರ್ ಹತ್ಯೆ ನಡೆದ ಬೆನ್ನಲ್ಲೇ ಗ್ರಾಮಾಂತರ ಪ್ರದೇಶದ ಪ್ರಮುಖ ಕಡೆಗಳಲ್ಲಿ ಪೊಲೀಸರು ನಿಗಾ ಇಡಲು ಮುಂದಾಗಿದ್ದು, ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ರೌಡಿಗಳ ಪೆರೇಡ್ ನಡೆಯಿತು.
ವೃತ್ತ ನಿರೀಕ್ಷಕ ಡಾ.ಎಂ.ಎಲ್.ಶೇಖರ್ ಕಾನೂನು ಬಾಹಿರ ಕೃತ್ಯದಲ್ಲಿ ಭಾಗಿಯಾಗದಂತೆ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿ, ಯಾವುದೇ ಅಹಿತಕರ ಘಟನೆಗಳಲ್ಲಿ ಭಾಗವಹಿಸದಂತೆ ಖಡಕ್ ವಾರ್ನಿಂಗ್ ನೀಡಿದರು. ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಭಾಗಿಯಾಗುವುದು, ಮೀಟರ್ ಬಡ್ಡಿ ದಂಧೆ ನಡೆಸುವುದು, ಹಫ್ತಾ ವಸೂಲಿ ಮಾಡುವುದು, ಸಾರ್ವಜನಿಕರಿಗೆ ಭೀತಿ ಹುಟ್ಟಿಸುವಂತಹ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ರೌಡಿಗಳಗೆ ಸೂಚನೆ ನೀಡಿದರು.
ಇದನ್ನೂ ಓದಿ:- ಮೈಸೂರು | ರೌಡಿಶೀಟರ್ಗಳಿಗೆ ಪೊಲೀಸರ ಖಡಕ್ ಎಚ್ಚರಿಕೆ
ಒಂದು ವೇಳೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾದ್ರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಹಾಗೂ ಅಡಿಷನಲ್ ಎಸ್ಪಿ ಮಲ್ಲಿಕ್ ಸೂಚನೆಯಂತೆ ರೌಡಿಗಳ ಪೆರೇಡ್ ನಡೆಸಲಾಯಿತು. ವಿವಿಧ ಗ್ರಾಮಗಳಲ್ಲಿ ರೌಡಿಶೀಟರ್ ಪಟ್ಟಿಯಲ್ಲಿರುವ 40ಕ್ಕೂ ಹೆಚ್ಚು ರೌಡಿಗಳನ್ನು ರೌಂಡ್ ಅಪ್ ಮಾಡಿ ಸಾರ್ವಜನಿಕರ ನೆಮ್ಮದಿಗೆ ಭಂಗ ತರುವಂತಹ ಚಟುವಟಿಕೆ ನಡೆಸದಂತೆ ವಾರ್ನಿಂಗ್ ಕೊಟ್ಟರು. ಈ ವೇಳೆ ಪಿಎಸ್ಐ ಚಂದ್ರು ಹಾಜರಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…