ಮೈಸೂರು

ಮೈಸೂರಿನಲ್ಲಿ ರೌಡಿ ಪೆರೇಡ್ : ಬೆಳ್ಳಂಬೆಳಗ್ಗೆ ರೌಡಿಗಳಿಗೆ ಬಿಸಿ ಮುಟ್ಟಿಸಿದ ಖಾಕಿ ಪಡೆ

ಮೈಸೂರು : ಬೆಳ್ಳಂಬೆಳಗ್ಗೆ ಮೈಸೂರು ಖಾಕಿ ಪಡೆ ರೌಡಿಗಳಿಗೆ ಬಿಸಿ ಮುಟ್ಟಿಸಿದೆ. ದೇವರಾಜ ಉಪ ವಿಭಾಗದ ಆಲನಹಳ್ಳಿ ಪೊಲೀಸ್ ಠಾಣೆ ಆವರಣದಲ್ಲಿ ರೌಡಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಉದಯಗಿರಿ, ದೇವರಾಜ, ಲಷ್ಕರ್, ಅಲನಹಳ್ಳಿ, ನಜರ್ಬಾದ್ ಠಾಣೆಗಳ ಎಲ್ಲ ರೌಡಿಗಳನ್ನು ಕರೆಸಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು.ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು.ಸಮಾಜದಲ್ಲಿ ಶಾಂತಿಗೆ ಭಂಗ ತರುವ ಕೆಲಸ ಮಾಡಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ಪರೇಡ್ ನಡೆಸಿದ ದೇವರಾಜ ವಿಭಾಗದ ಎಸಿಪಿ ಶಾಂತಮಲ್ಲಪ್ಪ., ನೂತನ ಗೃಹ ಸಚಿವರಾದ ಡಾ. ಜಿ ಪರಮೇಶ್ವರ ರವರ ಹಾಗೂ ನೂತನ ಡಿಜಿ & ಐಜಿಪಿ ಅಲೋಕ್ ಮೋಹನ್ ರವರ ಆದೇಶ ದಂತೆ ಇಂದು ದೇವರಾಜ ಉಪವಿಭಾಗದ ವತಿಯಿಂದ ರೌಡಿ ಪೆರೇಡ್ ನಡೆಸಲಾಗಿದೆ. ಎಸಿಪಿ ಶಾಂತಮಲ್ಲಪ್ಪ ರವರು ಮಾತನಾಡಿ ಯಾವುದೇ ಕಾನೂನು ಬಾಹಿರ ಚಟುವಟಿಕೆ ಗಳಲ್ಲಿ ಭಾಗಿಯಾಗದಂತೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.ಹಾಗೊಂದು ವೇಳೆ ಭಾಗಿಯಾದಲ್ಲಿ ಗೂಂಡಾ ಕಾಯ್ದೆಯಂತಹ ಕಾನೂನು ಬಳಸಿ ಹತ್ತಿಕ್ಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಎಲ್ಲರೂ ಸನ್ನಡತೆ ಯಿಂದ ಇರುವಂತೆ ಸೂಚಿಸಿ ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಪೊಲೀಸ್ ಇನ್ಸ್ ಪೆಕ್ಟ್ ರ್ ಗಳಾದ ಪಿ.ಪಿ ಸಂತೋಷ್, ಜೀವನ್, ಪಿ.ಕೆ. ರಾಜು, ಟಿ.ಬಿ ಶಿವಕುಮಾರ್ ಹಾಗೂ ವಿಭಾಗದ ಎಲ್ಲ ಪಿ ಎಸ್ ಐ ಗಳು ಹಾಗೂ ಅಪರಾಧ ವಿಭಾಗದ ಸಿಬ್ಬಂದಿಗಳು ಹಾಜರಿದ್ದರು.

lokesh

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

7 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

7 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

8 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

8 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

8 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

9 hours ago