ಮೈಸೂರು : ಬೆಳ್ಳಂಬೆಳಗ್ಗೆ ಮೈಸೂರು ಖಾಕಿ ಪಡೆ ರೌಡಿಗಳಿಗೆ ಬಿಸಿ ಮುಟ್ಟಿಸಿದೆ. ದೇವರಾಜ ಉಪ ವಿಭಾಗದ ಆಲನಹಳ್ಳಿ ಪೊಲೀಸ್ ಠಾಣೆ ಆವರಣದಲ್ಲಿ ರೌಡಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಉದಯಗಿರಿ, ದೇವರಾಜ, ಲಷ್ಕರ್, ಅಲನಹಳ್ಳಿ, ನಜರ್ಬಾದ್ ಠಾಣೆಗಳ ಎಲ್ಲ ರೌಡಿಗಳನ್ನು ಕರೆಸಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು.ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು.ಸಮಾಜದಲ್ಲಿ ಶಾಂತಿಗೆ ಭಂಗ ತರುವ ಕೆಲಸ ಮಾಡಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಪರೇಡ್ ನಡೆಸಿದ ದೇವರಾಜ ವಿಭಾಗದ ಎಸಿಪಿ ಶಾಂತಮಲ್ಲಪ್ಪ., ನೂತನ ಗೃಹ ಸಚಿವರಾದ ಡಾ. ಜಿ ಪರಮೇಶ್ವರ ರವರ ಹಾಗೂ ನೂತನ ಡಿಜಿ & ಐಜಿಪಿ ಅಲೋಕ್ ಮೋಹನ್ ರವರ ಆದೇಶ ದಂತೆ ಇಂದು ದೇವರಾಜ ಉಪವಿಭಾಗದ ವತಿಯಿಂದ ರೌಡಿ ಪೆರೇಡ್ ನಡೆಸಲಾಗಿದೆ. ಎಸಿಪಿ ಶಾಂತಮಲ್ಲಪ್ಪ ರವರು ಮಾತನಾಡಿ ಯಾವುದೇ ಕಾನೂನು ಬಾಹಿರ ಚಟುವಟಿಕೆ ಗಳಲ್ಲಿ ಭಾಗಿಯಾಗದಂತೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.ಹಾಗೊಂದು ವೇಳೆ ಭಾಗಿಯಾದಲ್ಲಿ ಗೂಂಡಾ ಕಾಯ್ದೆಯಂತಹ ಕಾನೂನು ಬಳಸಿ ಹತ್ತಿಕ್ಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಎಲ್ಲರೂ ಸನ್ನಡತೆ ಯಿಂದ ಇರುವಂತೆ ಸೂಚಿಸಿ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಪೊಲೀಸ್ ಇನ್ಸ್ ಪೆಕ್ಟ್ ರ್ ಗಳಾದ ಪಿ.ಪಿ ಸಂತೋಷ್, ಜೀವನ್, ಪಿ.ಕೆ. ರಾಜು, ಟಿ.ಬಿ ಶಿವಕುಮಾರ್ ಹಾಗೂ ವಿಭಾಗದ ಎಲ್ಲ ಪಿ ಎಸ್ ಐ ಗಳು ಹಾಗೂ ಅಪರಾಧ ವಿಭಾಗದ ಸಿಬ್ಬಂದಿಗಳು ಹಾಜರಿದ್ದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…