ಮೈಸೂರು

ಹುಣಸೂರು | ರೌಡಿಶೀಟರ್‌ಗಳು ಎಚ್ಚರವಹಿಸದಿದ್ದಲ್ಲಿ ಗಡಿಪಾರು ಎಚ್ಚರಿಕೆ

ಹುಣಸೂರು : ಹುಣಸೂರು ನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ರೌಡಿ ಶೀಟರ್‌ ಪಟ್ಟಿಯಲ್ಲಿರುವವರನ್ನು ಅಡಿಷನಲ್‌ ಎಸ್‌ಪಿ ಮಲ್ಲಿಕ್‌ ನೇತೃತ್ವದಲ್ಲಿ ಪೆರೆಡ್‌ ನಡೆಸಲಾಯಿತು.

ಹುಣಸೂರು ನಗರದ ಡಿವೈಎಸ್‌ಪಿ ಕಚೇರಿಯಲ್ಲಿ ನಡೆದ ಪೆರೆಡ್‌ನಲ್ಲಿ ಸುಮಾರು 150 ಕ್ಕೂ ಹೆಚ್ಚು ರೌಡಿಗಳು ಭಾಗಿಯಾಗಿದ್ದರು. ಕಾನೂನು ಸುವ್ಯವಸ್ಥೆಗೆ ಭಂಗ ತಂದರೆ ಗಡೀಪಾರು ಮಾಡಲಾಗುವುದು ಎಂದು ಜಿಲ್ಲಾ ಅಡಿಷನಲ್ ಎಸ್ ಪಿ ಮಲ್ಲಿಕ್ ಖಡಕ್ ವಾರ್ನಿಂಗ್ ನೀಡಿದರು.

ಮುಂದಿನ ದಿನಗಳಲ್ಲಿ ಯಾವುದೇ ಅಹಿತಕರ ಘಟನೆಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ ಅವರು, ಸಮಾಜದಲ್ಲಿ ಶಾಂತಿ ಕದಡುವ ಹಾಗೂ ರೌಡಿ ಚಟುವಟಿಕೆಗಳಲ್ಲಿ ಭಾಗವಹಿಸದೆ ಉತ್ತಮ ಜೀವನ ರೂಪಿಸಿಕೊಳ್ಳುವಂತೆ ಸಲಹೆ ನೀಡಿದರು.

ನಿಮ್ಮ ವರ್ತನೆಯಿಂದ ಕುಟುಂಬಸ್ಥರ ಮೇಲೆ ಪರಿಣಾಮ ಬೀರುತ್ತದೆ ಹೀಗಾಗಿ ಅಂತಹ ಚಟುವಟಿಕೆಗಳಿಂದ ದೂರವಿರಿ ವಯಸ್ಸಾದ ಹಾಗೂ ಉತ್ತಮ ನಡುವಳಿಕೆ ತೋರಿದವರಿಗೆ ರೌಡಿ ಶೀಟರ್ ಗಳಿಂದ ಮುಕ್ತಿ ನೀಡುವ ಬಗ್ಗೆ ಯೂ ಭರವಸೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

5 mins ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

12 mins ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

1 hour ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

2 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

4 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

4 hours ago