ಮೈಸೂರು

ಹುಣಸೂರು | ರೌಡಿಶೀಟರ್‌ಗಳು ಎಚ್ಚರವಹಿಸದಿದ್ದಲ್ಲಿ ಗಡಿಪಾರು ಎಚ್ಚರಿಕೆ

ಹುಣಸೂರು : ಹುಣಸೂರು ನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ರೌಡಿ ಶೀಟರ್‌ ಪಟ್ಟಿಯಲ್ಲಿರುವವರನ್ನು ಅಡಿಷನಲ್‌ ಎಸ್‌ಪಿ ಮಲ್ಲಿಕ್‌ ನೇತೃತ್ವದಲ್ಲಿ ಪೆರೆಡ್‌ ನಡೆಸಲಾಯಿತು.

ಹುಣಸೂರು ನಗರದ ಡಿವೈಎಸ್‌ಪಿ ಕಚೇರಿಯಲ್ಲಿ ನಡೆದ ಪೆರೆಡ್‌ನಲ್ಲಿ ಸುಮಾರು 150 ಕ್ಕೂ ಹೆಚ್ಚು ರೌಡಿಗಳು ಭಾಗಿಯಾಗಿದ್ದರು. ಕಾನೂನು ಸುವ್ಯವಸ್ಥೆಗೆ ಭಂಗ ತಂದರೆ ಗಡೀಪಾರು ಮಾಡಲಾಗುವುದು ಎಂದು ಜಿಲ್ಲಾ ಅಡಿಷನಲ್ ಎಸ್ ಪಿ ಮಲ್ಲಿಕ್ ಖಡಕ್ ವಾರ್ನಿಂಗ್ ನೀಡಿದರು.

ಮುಂದಿನ ದಿನಗಳಲ್ಲಿ ಯಾವುದೇ ಅಹಿತಕರ ಘಟನೆಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ ಅವರು, ಸಮಾಜದಲ್ಲಿ ಶಾಂತಿ ಕದಡುವ ಹಾಗೂ ರೌಡಿ ಚಟುವಟಿಕೆಗಳಲ್ಲಿ ಭಾಗವಹಿಸದೆ ಉತ್ತಮ ಜೀವನ ರೂಪಿಸಿಕೊಳ್ಳುವಂತೆ ಸಲಹೆ ನೀಡಿದರು.

ನಿಮ್ಮ ವರ್ತನೆಯಿಂದ ಕುಟುಂಬಸ್ಥರ ಮೇಲೆ ಪರಿಣಾಮ ಬೀರುತ್ತದೆ ಹೀಗಾಗಿ ಅಂತಹ ಚಟುವಟಿಕೆಗಳಿಂದ ದೂರವಿರಿ ವಯಸ್ಸಾದ ಹಾಗೂ ಉತ್ತಮ ನಡುವಳಿಕೆ ತೋರಿದವರಿಗೆ ರೌಡಿ ಶೀಟರ್ ಗಳಿಂದ ಮುಕ್ತಿ ನೀಡುವ ಬಗ್ಗೆ ಯೂ ಭರವಸೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

3 hours ago