bglre mysore
ಮೈಸೂರು : ರಾಜ್ಯ ರಾಜಧಾನಿ ಹಾಗೂ ಸಾಂಸ್ಕೃತಿಕ ರಾಜಧಾನಿಗೆ ಪ್ರಮುಖ ಸಂಪರ್ಕ ಕಲ್ಪಿಸುವ ಎಕ್ಸ್ಪ್ರೆಸ್ ವೇ ನಲ್ಲಿ ಹಲವಾರು ಸುಧಾರಣೆ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಬಿಜೆಪಿ ಸರ್ಕಾರ 712 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಂಸದ ಯದುವೀರ್ ಒಡೆಯರ್, ಈ ಅನುದಾನದಿಂದ ಹಲವಾರು ಜನೋಪಯೋಗಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದಿದ್ದಾರೆ.
ದಶಪಥದಲ್ಲಿ ಹೊಸದಾಗಿ ಎಂಟ್ರಿ-ಎಕ್ಸಿಟ್, ರೈಲ್ವೆ ಸೇತುವೆ, ಅಂಡರ್ಪಾಸ್, ಓವರ್ಪಾಸ್, ಸರ್ವೀಸ್ ರಸ್ತೆ ಹಾಗೂ ಪ್ರಯಾಣಿಕರಿಗೆ ಅನುಕೂಲವಾಗುವ ಅನೇಕ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ದಶಪಥ ಕೊನೆಗೊಳ್ಳುವ ಮಣಿಪಾಲ್ ಆಸ್ಪತ್ರೆ ಜಂಕ್ಷನ್ನಲ್ಲಿ ಸಂಚಾರ ದಟ್ಟಣೆ ನಿವಾರಿಸಲು ಫ್ಲೈ ಓವರ್ ನಿರ್ಮಾಣ ಮಾಡಲಾಗುವುದು. ಈ ಬಗ್ಗೆ ಸಾರ್ವಜನಿಕರು ಹಲವಾರು ಬಾರಿ ದೂರು ಸಲ್ಲಿಸಿದ್ದರು. ಅದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಯದುವೀರ್ ಮಾಹಿತಿ ನೀಡಿದ್ದಾರೆ.
ಈ ದಶಪಥವು ಜನರಿಗೆ ಇನ್ನಷ್ಟು ಉಪಯುಕ್ತವಾಗಬೇಕು ಎಂಬುದನ್ನು ಮನಗಂಡು ಕೇಂದ್ರ ಸರ್ಕಾರ ಸುಧಾರಣೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಸಂಸದರು ವಿವರಿಸಿದ್ದಾರೆ.
ಎಕ್ಸ್ಪ್ರೆಸ್ ವೇನಲ್ಲಿ ಯೋಜನೆಗಳನ್ನು ಕೈಗೊಳ್ಳಲು ಅನುದಾನ ಬಿಡುಗಡೆ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಸಮಸ್ತ ಜನರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿಯೂ ಬಿಜೆಪಿ ಸರ್ಕಾರ ಜನಪರ ಕಾಳಜಿ ಯೋಜನೆಗಳನ್ನ ಜಾರಿಗೆ ತರಲಿದೆ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…