Siddaramaiah government has done injustice to backward classes Mahesh
ಮೈಸೂರು : ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ಎಸ್ಎಸ್ ಅನ್ನು ಬ್ಯಾನ್ ಮಾಡುತ್ತೇವೆಂದು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ. ಅವರು ಮತ್ತೊಂದು ಜನ್ಮ ಎತ್ತಿ ಬಂದರೂ ಅದು ಸಾಧ್ಯವಿಲ್ಲ ಎಂದು ಬಿಜೆಪಿ ವಕ್ತಾರ ಎಂ.ಜಿ ಮಹೇಶ್ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ನ ಎಲ್ಲಾ ಷಡ್ಯಂತ್ರಗಳನ್ನು ಎದುರಿಸುವ ಶಕ್ತಿ ಬಿಜೆಪಿಗಿದೆ. ಕಳೆದ ೭೦ ವರ್ಷಗಳ ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಮೂರು ಬಾರಿ ಬ್ಯಾನ್ ಮಾಡಿತ್ತು. ಬಳಿಕ ಅದೇ ಕಾಂಗ್ರೆಸ್ ಮೂರು ಬಾರಿಯೂ ಆರ್ಎಸ್ಎಸ್ ನಿಷೇಧ ಆದೇಶವನ್ನು ವಾಪಸ್ ಪಡೆದಿತ್ತು. ಸಚಿವ ಪ್ರಿಯಾಂಕ್ ಖರ್ಗೆ ಅವರ ದ್ವೇಷದ ಮನಸ್ಥಿತಿಯನ್ನು ಬಿಜೆಪಿ ಖಂಡಿಸುತ್ತದೆ. ಆರ್ಎಸ್ಎಸ್ ನಿಷೇಧ ಮಾಡುವ ಕಾಂಗ್ರೆಸ್ ಷಡ್ಯಂತ್ರಕ್ಕೆ ಬಿಜೆಪಿ ಹೆದರುವುದಿಲ್ಲ ಎಂದು ತಿರುಗೇಟು ನೀಡಿದರು.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…