ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಮುಖ ಪ್ರಶಸ್ತಿಗಳಲ್ಲೊಂದಾದ ‘ಕನ್ನಡ ಚಳವಳಿ ವೀರ ಸೇನಾನಿ ಮ.ರಾಮಮೂರ್ತಿ ದತ್ತಿ ಪ್ರಶಸ್ತಿ’ಗೆ ಮೈಸೂರಿನ ಕನ್ನಡ ಹೋರಾಟಗಾರ ಸ.ರ.ಸುದರ್ಶನ್ ಆಯ್ಕೆಯಾಗಿದ್ದಾರೆ.
ಈ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಅವರು ಮಾಹಿತಿ ನೀಡಿದ್ದು, ರಾಜ್ಯಾದ್ಯಂತ ಕನ್ನಡ ಚಳುವಳಿಗೆ ಶಕ್ತಿ, ಹೋರಾಟದ ಸ್ಪೂರ್ತಿಯನ್ನು ತುಂಬಿದಂತಹ ಮ.ರಾಮಮೂರ್ತಿಯವರ ಹೆಸರಿನಲ್ಲಿ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ದತ್ತಿಯನ್ನು ಸ್ಥಾಪಿಸಿದ್ದು ಕನ್ನಡ ನಾಡು, ನುಡಿ, ನೆಲ, ಜಲ, ಸಂಸ್ಕೃತಿಗಳ ರಕ್ಷಣೆಗೆ ಹಾಗೂ ಪ್ರಗತಿಗೆ ಶ್ರಮಿಸಿ ಎಲೆ ಮರೆಯ ಕಾಯಿಗಳಂತಿರುವ ಕನ್ನಡ ಕಾರ್ಯಕರ್ತರಿಗೆ ಈ ಗೌರವ ಸಲ್ಲಬೇಕೆಂದು ಆಶಿಸಿದ್ದಾರೆ.
2025ನೆಯ ಸಾಲಿಗೆ ಈ ಪುರಸ್ಕಾರಕ್ಕೆ ಪಾತ್ರರಾಗಿರುವ ಮೈಸೂರಿನ ಸ.ರ.ಸುದರ್ಶನ ಗೋಕಾಕ್ ಚಳುವಳಿಯ ಆರಂಭದಿಂದಲೂ ಕನ್ನಡ ಹೋರಾಟದಲ್ಲಿ ತಮ್ಮನ್ನು ತೊಡಗಿಸಿ ಕೊಂಡವರು, ಕನ್ನಡವನ್ನು ಶಿಕ್ಷಣ ಮಾಧ್ಯಮವಾಗಿಸಲು, ಕನ್ನಡಕ್ಕೆ ದೊರೆತ ಶಾಸ್ತ್ರೀಯ ಸ್ಥಾನಮಾನದ ಸದ್ಭಳಕೆ ಕುರಿತು ಹೀಗೆ ನಿರಂತರವಾಗಿ ಕನ್ನಡಪರ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿ ಕೊಂಡಿದ್ದಾರೆ. ಆಡಳಿತ ಪದಕೋಶ ಸೇರಿ ಕನ್ನಡಪರ ಕೃತಿಗಳನ್ನು ಲೇಖನಗಳನ್ನು ರಚಿಸಿ ನಾಡು ಮತ್ತು ನುಡಿಯ ಪರವಾಗಿ ಸದಾ ಮಿಡಿಯುತ್ತಾ ಬಂದಿದ್ದಾರೆ.
ನಾಡೋಜ ಡಾ.ಮಹೇಶ ಜೋಶಿಯವರ ಅಧ್ಯಕ್ಷತೆಯಲ್ಲಿ ಸೇರಿದ್ದ ಆಯ್ಕೆ ಸಮಿತಿಯು ಪಾರದರ್ಶಕವಾಗಿ ಮತ್ತು ಕೂಲಂಕಶವಾಗಿ ಪರಿಶೀಲಿಸಿ ಸರ ಸುದರ್ಶನ ಅವರನ್ನು ಈ ಪುರಸ್ಕಾರಕ್ಕಾಗಿ ಆಯ್ಕೆ ಮಾಡಿದೆ. ಆಯ್ಕೆ ಸಮಿತಿಯಲ್ಲಿ ಗೌರವ ಕಾರ್ಯದರ್ಶಿಗಳಾದ ನೇ.ಭ.ರಾಮಲಿಂಗ ಶೆಟ್ಟಿ, ಡಾ.ಪದ್ಮಿನಿ ನಾಗರಾಜು , ಗೌರವ ಕೋಶಾಧ್ಯಕ್ಷರಾದ ಬಿ.ಎಂ.ಪಟೇಲ್ ಪಾಂಡು ಮತ್ತು ದತ್ತಿದಾನಿಗಳ ಪರವಾಗಿ ಟಿ.ತಿಮ್ಮೇಶ್ ಭಾಗವಹಿಸಿದ್ದರು.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…