ಮೈಸೂರು

ಸ.ರ ಸುದರ್ಶನ್‌ಗೆ ʻಕಸಾಪʼ ದತ್ತಿ ಪ್ರಶಸ್ತಿ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಮುಖ ಪ್ರಶಸ್ತಿಗಳಲ್ಲೊಂದಾದ ‘ಕನ್ನಡ ಚಳವಳಿ ವೀರ ಸೇನಾನಿ ಮ.ರಾಮಮೂರ್ತಿ ದತ್ತಿ ಪ್ರಶಸ್ತಿ’ಗೆ ಮೈಸೂರಿನ ಕನ್ನಡ ಹೋರಾಟಗಾರ ಸ.ರ.ಸುದರ್ಶನ್ ಆಯ್ಕೆಯಾಗಿದ್ದಾರೆ.

ಈ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಅವರು ಮಾಹಿತಿ ನೀಡಿದ್ದು, ರಾಜ್ಯಾದ್ಯಂತ ಕನ್ನಡ ಚಳುವಳಿಗೆ ಶಕ್ತಿ, ಹೋರಾಟದ ಸ್ಪೂರ್ತಿಯನ್ನು ತುಂಬಿದಂತಹ ಮ.ರಾಮಮೂರ್ತಿಯವರ ಹೆಸರಿನಲ್ಲಿ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ದತ್ತಿಯನ್ನು ಸ್ಥಾಪಿಸಿದ್ದು ಕನ್ನಡ ನಾಡು, ನುಡಿ, ನೆಲ, ಜಲ, ಸಂಸ್ಕೃತಿಗಳ ರಕ್ಷಣೆಗೆ ಹಾಗೂ ಪ್ರಗತಿಗೆ ಶ್ರಮಿಸಿ ಎಲೆ ಮರೆಯ ಕಾಯಿಗಳಂತಿರುವ ಕನ್ನಡ ಕಾರ್ಯಕರ್ತರಿಗೆ ಈ ಗೌರವ ಸಲ್ಲಬೇಕೆಂದು ಆಶಿಸಿದ್ದಾರೆ.

2025ನೆಯ ಸಾಲಿಗೆ ಈ ಪುರಸ್ಕಾರಕ್ಕೆ ಪಾತ್ರರಾಗಿರುವ ಮೈಸೂರಿನ ಸ.ರ.ಸುದರ್ಶನ ಗೋಕಾಕ್ ಚಳುವಳಿಯ ಆರಂಭದಿಂದಲೂ ಕನ್ನಡ ಹೋರಾಟದಲ್ಲಿ ತಮ್ಮನ್ನು ತೊಡಗಿಸಿ ಕೊಂಡವರು, ಕನ್ನಡವನ್ನು ಶಿಕ್ಷಣ ಮಾಧ್ಯಮವಾಗಿಸಲು, ಕನ್ನಡಕ್ಕೆ ದೊರೆತ ಶಾಸ್ತ್ರೀಯ ಸ್ಥಾನಮಾನದ ಸದ್ಭಳಕೆ ಕುರಿತು ಹೀಗೆ ನಿರಂತರವಾಗಿ ಕನ್ನಡಪರ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿ ಕೊಂಡಿದ್ದಾರೆ. ಆಡಳಿತ ಪದಕೋಶ ಸೇರಿ ಕನ್ನಡಪರ ಕೃತಿಗಳನ್ನು ಲೇಖನಗಳನ್ನು ರಚಿಸಿ ನಾಡು ಮತ್ತು ನುಡಿಯ ಪರವಾಗಿ ಸದಾ ಮಿಡಿಯುತ್ತಾ ಬಂದಿದ್ದಾರೆ.

ನಾಡೋಜ ಡಾ.ಮಹೇಶ ಜೋಶಿಯವರ ಅಧ್ಯಕ್ಷತೆಯಲ್ಲಿ ಸೇರಿದ್ದ ಆಯ್ಕೆ ಸಮಿತಿಯು ಪಾರದರ್ಶಕವಾಗಿ ಮತ್ತು ಕೂಲಂಕಶವಾಗಿ ಪರಿಶೀಲಿಸಿ ಸರ ಸುದರ್ಶನ ಅವರನ್ನು ಈ ಪುರಸ್ಕಾರಕ್ಕಾಗಿ ಆಯ್ಕೆ ಮಾಡಿದೆ. ಆಯ್ಕೆ ಸಮಿತಿಯಲ್ಲಿ ಗೌರವ ಕಾರ್ಯದರ್ಶಿಗಳಾದ ನೇ.ಭ.ರಾಮಲಿಂಗ ಶೆಟ್ಟಿ, ಡಾ.ಪದ್ಮಿನಿ ನಾಗರಾಜು , ಗೌರವ ಕೋಶಾಧ್ಯಕ್ಷರಾದ ಬಿ.ಎಂ.ಪಟೇಲ್ ಪಾಂಡು ಮತ್ತು ದತ್ತಿದಾನಿಗಳ ಪರವಾಗಿ ಟಿ.ತಿಮ್ಮೇಶ್ ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

1 hour ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

1 hour ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

1 hour ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

1 hour ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

1 hour ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

1 hour ago