ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಮುಖ ಪ್ರಶಸ್ತಿಗಳಲ್ಲೊಂದಾದ ‘ಕನ್ನಡ ಚಳವಳಿ ವೀರ ಸೇನಾನಿ ಮ.ರಾಮಮೂರ್ತಿ ದತ್ತಿ ಪ್ರಶಸ್ತಿ’ಗೆ ಮೈಸೂರಿನ ಕನ್ನಡ ಹೋರಾಟಗಾರ ಸ.ರ.ಸುದರ್ಶನ್ ಆಯ್ಕೆಯಾಗಿದ್ದಾರೆ.
ಈ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಅವರು ಮಾಹಿತಿ ನೀಡಿದ್ದು, ರಾಜ್ಯಾದ್ಯಂತ ಕನ್ನಡ ಚಳುವಳಿಗೆ ಶಕ್ತಿ, ಹೋರಾಟದ ಸ್ಪೂರ್ತಿಯನ್ನು ತುಂಬಿದಂತಹ ಮ.ರಾಮಮೂರ್ತಿಯವರ ಹೆಸರಿನಲ್ಲಿ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ದತ್ತಿಯನ್ನು ಸ್ಥಾಪಿಸಿದ್ದು ಕನ್ನಡ ನಾಡು, ನುಡಿ, ನೆಲ, ಜಲ, ಸಂಸ್ಕೃತಿಗಳ ರಕ್ಷಣೆಗೆ ಹಾಗೂ ಪ್ರಗತಿಗೆ ಶ್ರಮಿಸಿ ಎಲೆ ಮರೆಯ ಕಾಯಿಗಳಂತಿರುವ ಕನ್ನಡ ಕಾರ್ಯಕರ್ತರಿಗೆ ಈ ಗೌರವ ಸಲ್ಲಬೇಕೆಂದು ಆಶಿಸಿದ್ದಾರೆ.
2025ನೆಯ ಸಾಲಿಗೆ ಈ ಪುರಸ್ಕಾರಕ್ಕೆ ಪಾತ್ರರಾಗಿರುವ ಮೈಸೂರಿನ ಸ.ರ.ಸುದರ್ಶನ ಗೋಕಾಕ್ ಚಳುವಳಿಯ ಆರಂಭದಿಂದಲೂ ಕನ್ನಡ ಹೋರಾಟದಲ್ಲಿ ತಮ್ಮನ್ನು ತೊಡಗಿಸಿ ಕೊಂಡವರು, ಕನ್ನಡವನ್ನು ಶಿಕ್ಷಣ ಮಾಧ್ಯಮವಾಗಿಸಲು, ಕನ್ನಡಕ್ಕೆ ದೊರೆತ ಶಾಸ್ತ್ರೀಯ ಸ್ಥಾನಮಾನದ ಸದ್ಭಳಕೆ ಕುರಿತು ಹೀಗೆ ನಿರಂತರವಾಗಿ ಕನ್ನಡಪರ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿ ಕೊಂಡಿದ್ದಾರೆ. ಆಡಳಿತ ಪದಕೋಶ ಸೇರಿ ಕನ್ನಡಪರ ಕೃತಿಗಳನ್ನು ಲೇಖನಗಳನ್ನು ರಚಿಸಿ ನಾಡು ಮತ್ತು ನುಡಿಯ ಪರವಾಗಿ ಸದಾ ಮಿಡಿಯುತ್ತಾ ಬಂದಿದ್ದಾರೆ.
ನಾಡೋಜ ಡಾ.ಮಹೇಶ ಜೋಶಿಯವರ ಅಧ್ಯಕ್ಷತೆಯಲ್ಲಿ ಸೇರಿದ್ದ ಆಯ್ಕೆ ಸಮಿತಿಯು ಪಾರದರ್ಶಕವಾಗಿ ಮತ್ತು ಕೂಲಂಕಶವಾಗಿ ಪರಿಶೀಲಿಸಿ ಸರ ಸುದರ್ಶನ ಅವರನ್ನು ಈ ಪುರಸ್ಕಾರಕ್ಕಾಗಿ ಆಯ್ಕೆ ಮಾಡಿದೆ. ಆಯ್ಕೆ ಸಮಿತಿಯಲ್ಲಿ ಗೌರವ ಕಾರ್ಯದರ್ಶಿಗಳಾದ ನೇ.ಭ.ರಾಮಲಿಂಗ ಶೆಟ್ಟಿ, ಡಾ.ಪದ್ಮಿನಿ ನಾಗರಾಜು , ಗೌರವ ಕೋಶಾಧ್ಯಕ್ಷರಾದ ಬಿ.ಎಂ.ಪಟೇಲ್ ಪಾಂಡು ಮತ್ತು ದತ್ತಿದಾನಿಗಳ ಪರವಾಗಿ ಟಿ.ತಿಮ್ಮೇಶ್ ಭಾಗವಹಿಸಿದ್ದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…