ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಮುಖ ಪ್ರಶಸ್ತಿಗಳಲ್ಲೊಂದಾದ ‘ಕನ್ನಡ ಚಳವಳಿ ವೀರ ಸೇನಾನಿ ಮ.ರಾಮಮೂರ್ತಿ ದತ್ತಿ ಪ್ರಶಸ್ತಿ’ಗೆ ಮೈಸೂರಿನ ಕನ್ನಡ ಹೋರಾಟಗಾರ ಸ.ರ.ಸುದರ್ಶನ್ ಆಯ್ಕೆಯಾಗಿದ್ದಾರೆ.
ಈ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಅವರು ಮಾಹಿತಿ ನೀಡಿದ್ದು, ರಾಜ್ಯಾದ್ಯಂತ ಕನ್ನಡ ಚಳುವಳಿಗೆ ಶಕ್ತಿ, ಹೋರಾಟದ ಸ್ಪೂರ್ತಿಯನ್ನು ತುಂಬಿದಂತಹ ಮ.ರಾಮಮೂರ್ತಿಯವರ ಹೆಸರಿನಲ್ಲಿ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ದತ್ತಿಯನ್ನು ಸ್ಥಾಪಿಸಿದ್ದು ಕನ್ನಡ ನಾಡು, ನುಡಿ, ನೆಲ, ಜಲ, ಸಂಸ್ಕೃತಿಗಳ ರಕ್ಷಣೆಗೆ ಹಾಗೂ ಪ್ರಗತಿಗೆ ಶ್ರಮಿಸಿ ಎಲೆ ಮರೆಯ ಕಾಯಿಗಳಂತಿರುವ ಕನ್ನಡ ಕಾರ್ಯಕರ್ತರಿಗೆ ಈ ಗೌರವ ಸಲ್ಲಬೇಕೆಂದು ಆಶಿಸಿದ್ದಾರೆ.
2025ನೆಯ ಸಾಲಿಗೆ ಈ ಪುರಸ್ಕಾರಕ್ಕೆ ಪಾತ್ರರಾಗಿರುವ ಮೈಸೂರಿನ ಸ.ರ.ಸುದರ್ಶನ ಗೋಕಾಕ್ ಚಳುವಳಿಯ ಆರಂಭದಿಂದಲೂ ಕನ್ನಡ ಹೋರಾಟದಲ್ಲಿ ತಮ್ಮನ್ನು ತೊಡಗಿಸಿ ಕೊಂಡವರು, ಕನ್ನಡವನ್ನು ಶಿಕ್ಷಣ ಮಾಧ್ಯಮವಾಗಿಸಲು, ಕನ್ನಡಕ್ಕೆ ದೊರೆತ ಶಾಸ್ತ್ರೀಯ ಸ್ಥಾನಮಾನದ ಸದ್ಭಳಕೆ ಕುರಿತು ಹೀಗೆ ನಿರಂತರವಾಗಿ ಕನ್ನಡಪರ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿ ಕೊಂಡಿದ್ದಾರೆ. ಆಡಳಿತ ಪದಕೋಶ ಸೇರಿ ಕನ್ನಡಪರ ಕೃತಿಗಳನ್ನು ಲೇಖನಗಳನ್ನು ರಚಿಸಿ ನಾಡು ಮತ್ತು ನುಡಿಯ ಪರವಾಗಿ ಸದಾ ಮಿಡಿಯುತ್ತಾ ಬಂದಿದ್ದಾರೆ.
ನಾಡೋಜ ಡಾ.ಮಹೇಶ ಜೋಶಿಯವರ ಅಧ್ಯಕ್ಷತೆಯಲ್ಲಿ ಸೇರಿದ್ದ ಆಯ್ಕೆ ಸಮಿತಿಯು ಪಾರದರ್ಶಕವಾಗಿ ಮತ್ತು ಕೂಲಂಕಶವಾಗಿ ಪರಿಶೀಲಿಸಿ ಸರ ಸುದರ್ಶನ ಅವರನ್ನು ಈ ಪುರಸ್ಕಾರಕ್ಕಾಗಿ ಆಯ್ಕೆ ಮಾಡಿದೆ. ಆಯ್ಕೆ ಸಮಿತಿಯಲ್ಲಿ ಗೌರವ ಕಾರ್ಯದರ್ಶಿಗಳಾದ ನೇ.ಭ.ರಾಮಲಿಂಗ ಶೆಟ್ಟಿ, ಡಾ.ಪದ್ಮಿನಿ ನಾಗರಾಜು , ಗೌರವ ಕೋಶಾಧ್ಯಕ್ಷರಾದ ಬಿ.ಎಂ.ಪಟೇಲ್ ಪಾಂಡು ಮತ್ತು ದತ್ತಿದಾನಿಗಳ ಪರವಾಗಿ ಟಿ.ತಿಮ್ಮೇಶ್ ಭಾಗವಹಿಸಿದ್ದರು.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…