ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಮುಖ ಪ್ರಶಸ್ತಿಗಳಲ್ಲೊಂದಾದ ‘ಕನ್ನಡ ಚಳವಳಿ ವೀರ ಸೇನಾನಿ ಮ.ರಾಮಮೂರ್ತಿ ದತ್ತಿ ಪ್ರಶಸ್ತಿ’ಗೆ ಮೈಸೂರಿನ ಕನ್ನಡ ಹೋರಾಟಗಾರ ಸ.ರ.ಸುದರ್ಶನ್ ಆಯ್ಕೆಯಾಗಿದ್ದಾರೆ.
ಈ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಅವರು ಮಾಹಿತಿ ನೀಡಿದ್ದು, ರಾಜ್ಯಾದ್ಯಂತ ಕನ್ನಡ ಚಳುವಳಿಗೆ ಶಕ್ತಿ, ಹೋರಾಟದ ಸ್ಪೂರ್ತಿಯನ್ನು ತುಂಬಿದಂತಹ ಮ.ರಾಮಮೂರ್ತಿಯವರ ಹೆಸರಿನಲ್ಲಿ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ದತ್ತಿಯನ್ನು ಸ್ಥಾಪಿಸಿದ್ದು ಕನ್ನಡ ನಾಡು, ನುಡಿ, ನೆಲ, ಜಲ, ಸಂಸ್ಕೃತಿಗಳ ರಕ್ಷಣೆಗೆ ಹಾಗೂ ಪ್ರಗತಿಗೆ ಶ್ರಮಿಸಿ ಎಲೆ ಮರೆಯ ಕಾಯಿಗಳಂತಿರುವ ಕನ್ನಡ ಕಾರ್ಯಕರ್ತರಿಗೆ ಈ ಗೌರವ ಸಲ್ಲಬೇಕೆಂದು ಆಶಿಸಿದ್ದಾರೆ.
2025ನೆಯ ಸಾಲಿಗೆ ಈ ಪುರಸ್ಕಾರಕ್ಕೆ ಪಾತ್ರರಾಗಿರುವ ಮೈಸೂರಿನ ಸ.ರ.ಸುದರ್ಶನ ಗೋಕಾಕ್ ಚಳುವಳಿಯ ಆರಂಭದಿಂದಲೂ ಕನ್ನಡ ಹೋರಾಟದಲ್ಲಿ ತಮ್ಮನ್ನು ತೊಡಗಿಸಿ ಕೊಂಡವರು, ಕನ್ನಡವನ್ನು ಶಿಕ್ಷಣ ಮಾಧ್ಯಮವಾಗಿಸಲು, ಕನ್ನಡಕ್ಕೆ ದೊರೆತ ಶಾಸ್ತ್ರೀಯ ಸ್ಥಾನಮಾನದ ಸದ್ಭಳಕೆ ಕುರಿತು ಹೀಗೆ ನಿರಂತರವಾಗಿ ಕನ್ನಡಪರ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿ ಕೊಂಡಿದ್ದಾರೆ. ಆಡಳಿತ ಪದಕೋಶ ಸೇರಿ ಕನ್ನಡಪರ ಕೃತಿಗಳನ್ನು ಲೇಖನಗಳನ್ನು ರಚಿಸಿ ನಾಡು ಮತ್ತು ನುಡಿಯ ಪರವಾಗಿ ಸದಾ ಮಿಡಿಯುತ್ತಾ ಬಂದಿದ್ದಾರೆ.
ನಾಡೋಜ ಡಾ.ಮಹೇಶ ಜೋಶಿಯವರ ಅಧ್ಯಕ್ಷತೆಯಲ್ಲಿ ಸೇರಿದ್ದ ಆಯ್ಕೆ ಸಮಿತಿಯು ಪಾರದರ್ಶಕವಾಗಿ ಮತ್ತು ಕೂಲಂಕಶವಾಗಿ ಪರಿಶೀಲಿಸಿ ಸರ ಸುದರ್ಶನ ಅವರನ್ನು ಈ ಪುರಸ್ಕಾರಕ್ಕಾಗಿ ಆಯ್ಕೆ ಮಾಡಿದೆ. ಆಯ್ಕೆ ಸಮಿತಿಯಲ್ಲಿ ಗೌರವ ಕಾರ್ಯದರ್ಶಿಗಳಾದ ನೇ.ಭ.ರಾಮಲಿಂಗ ಶೆಟ್ಟಿ, ಡಾ.ಪದ್ಮಿನಿ ನಾಗರಾಜು , ಗೌರವ ಕೋಶಾಧ್ಯಕ್ಷರಾದ ಬಿ.ಎಂ.ಪಟೇಲ್ ಪಾಂಡು ಮತ್ತು ದತ್ತಿದಾನಿಗಳ ಪರವಾಗಿ ಟಿ.ತಿಮ್ಮೇಶ್ ಭಾಗವಹಿಸಿದ್ದರು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…