ಮೈಸೂರು

ಸಫಾರಿ ಷರತ್ತು ಕಟ್ಟುನಿಟ್ಟಾಗಿ ಜಾರಿಗೆ ತನ್ನಿ ; ಸಚಿವ ಖಂಡ್ರೆ ಸೂಚನೆ

ಮೈಸೂರು : ಮಾನವ-ಹುಲಿ ಸಂಘರ್ಷದ ಹಿನ್ನೆಲೆಯಲ್ಲಿ ಕಳೆದ ನವೆಂಬರ್ 7ರಂದು ಸ್ಥಗಿತಗೊಳಿಸಲಾಗಿದ್ದ ಸಫಾರಿಯನ್ನು ಫೆ.21ರಿಂದ ಷರತ್ತುಬದ್ಧವಾಗಿ ಪುನಾರಂಭಿಸಲು ನಿರ್ಧರಿಸಿದ್ದು, ಈ ಷರತ್ತುಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಮೈಸೂರಿನಲ್ಲಿಂದು ಮೈಸೂರು, ಕೊಡಗು ಮತ್ತು ಚಾಮರಾಜನಗರ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಬಹುತೇಕ ನಾಳೆ (ಶನಿವಾರ)ಯಿಂದ ಸಫಾರಿ ಆರಂಭಿಸಲು ಅಧಿಕೃತ ಆದೇಶ ಹೊ

ರಡಿಸಲಾಗುವುದು. ಈ ಆದೇಶದಲ್ಲಿರುವ ಷರತ್ತುಗಳ ಉಲ್ಲಂಘನೆ ಆದರೆ, ಸಂಬಂಧಿತ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದರು.

ನ.7ಕ್ಕೆ ಮೊದಲು ಬಳಕೆಯಾಗುತ್ತಿದ್ದ ಸಫಾರಿ ವಾಹನಗಳ ಶೇ.50ರಷ್ಟು ವಾಹನ ಮತ್ತು ಸಿಬ್ಬಂದಿಯನ್ನು ಮಾತ್ರವೇ ಬಳಕೆ ಮಾಡಬೇಕು. ಹೆಚ್ಚಾಗಿ ಬಸ್ ಗಳ ಮೂಲಕ ಸಫಾರಿ ನಡೆಸಬೇಕು. ಅತ್ಯಂತ ಕಡಿಮೆ ಸಂಖ್ಯೆಯಲ್ಲಿ ಕ್ಯಾಂಪರ್ ಮತ್ತು ಜೀಪ್ ಬಳಕೆ ಮಾಡಬೇಕು ಈ ಬಗ್ಗೆ ಸ್ಪಷ್ಟ ಆದೇಶ ಹೊರಡಿಸಲಾಗುವುದು ಎಂದರು.

ವನ್ಯಜೀವಿಗಳು ಕಾಡಿನಿಂದ ಹೊರಬರದಂತೆ ಕ್ರಮ ವಹಿಸಿ
ಬಂಡಿಪುರ ಮತ್ತು ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶವನ್ನು ಗುರುತಿಸಬೇಕು. ಆ ಪ್ರದೇಶದಲ್ಲಿ ಗಸ್ತು ಹೆಚ್ಚಸಬೇಕು. ವನ್ಯಜೀವಿಗಳು ವಸತಿ ಪ್ರದೇಶಕ್ಕೆ ಬಾರದಂತೆ, ಜೀವಹಾನಿ, ಬೆಳೆ ಹಾನಿ ಮಾಡದಂತೆ ಎಚ್ಚರಿಕೆ ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಬಂಡೀಪುರ ಅರಣ್ಯದ ಗಡಿಯಲ್ಲಿ 100 ಕಿ.ಲೋ. ಮೀಟರ್ ಅತ್ಯಂತ ಸೂಕ್ಷ್ಮ ಪ್ರದೇಶವಾಗಿದ್ದು, ಇಲ್ಲಿ 5 ಕಿ.ಮೀ.ಗೆ ಒಂದರಂತೆ 25 ಶಿಬಿರ ನಿರ್ಮಿಸಿ ಪ್ರತಿ ಶಿಬಿರದಲ್ಲಿ ಸ್ಥಳೀಯರನ್ನು ಕಾಡಿನ ಮಿತ್ರ ಎಂದು ನೇಮಕ ಮಾಡಿಕೊಂಡು ವನ್ಯಜೀವಿಗಳ ಚಲನವಲನದ ಬಗ್ಗೆ ನಿಗಾ ಇಡಬೇಕು. ಥರ್ಮಲ್ ಡ್ರೋನ್, ವಾಹನ ಇತ್ಯಾದಿ ಯಾವುದೇ ಸೌಲಭ್ಯ ಬೇಕಿದ್ದರೂ ಲಿಖಿತ ಮೂಲಕ ಪ್ರಸ್ತಾವನೆ ಸಲ್ಲಿಸಿ ಎಂದರು.

ಮಾನವ ಜೀವ ರಕ್ಷಣೆ ಆದ್ಯತೆ
ವನ್ಯಜೀವಿಗಳ ರಕ್ಷಣೆಯ ಜೊತೆಗೆ ಕಾಡಿನಂಚಿನಲ್ಲಿ ವಾಸಿಸುತ್ತಿರುವ ನಿವಾಸಿಗಳ ಜೀವ ರಕ್ಷಣೆಯೂ ಅರಣ್ಯ ಇಲಾಖೆಯ ಪ್ರಥಮ ಆದ್ಯತೆ ಆಗಿದೆ. ಇದರ ಜೊತೆಗೆ ಬೆಳೆ ರಕ್ಷಣೆಗೂ ಒತ್ತು ನೀಡಬೇಕು ಎಂದರು.

ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟು ಹಣವನ್ನು ಅರಣ್ಯದಂಚಿನ ವಸತಿ ಪ್ರದೇಶಗಳಲ್ಲಿನ ಯುವಜನರಿಗೆ ಕೌಶಲ್ಯ ತರಬೇತಿ ನೀಡಲು, ಜಾನುವಾರುಗಳಿಗೆ ಮೇವು ಒದಗಿಸಲು, ಮಕ್ಕಳಿಗೆ ಶಿಕ್ಷಣ ಕೊಡಿಸಲು ವಿನಿಯೋಗಿಸಬೇಕು ಎಂದು ತಿಳಿಸಿದರು.

ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ
ಅರಣ್ಯ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆ ಆಗಬೇಕಾದರೆ ಸ್ಥಳೀಯರ ನೆರವು, ಸಹಕಾರ, ಸಹಯೋಗ ಅತ್ಯಂತ ಮುಖ್ಯ. ಈ ನಿಟ್ಟಿನಲ್ಲಿ ಅರಣ್ಯ ಸಿಬ್ಬಂದಿ ಸ್ಥಳೀಯರೊಂದಿಗೆ ಸೌಹಾರ್ದಯುತವಾಗಿ ವರ್ತಿಸಬೇಕು. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅರಣ್ಯ ಸಂರಕ್ಷಣೆ ಮಾಡಬೇಕು ಎಂದರು.

ಇ-ಗಸ್ತು ಅಳವಡಿಕೆಗೆ ಸೂಚನೆ:
ಇಲಾಖೆಯ ಕಾಯಂ ಸಿಬ್ಬಂದಿ ಕಡ್ಡಾಯವಾಗಿ ಅರಣ್ಯ ಇಲಾಖೆ ಆಂತರಿಕವಾಗಿ ಅಭಿವೃದ್ಧಿಪಡಿಸಿರುವ ಇ-ಗಸ್ತು ತಂತ್ರಾಂಶವನ್ನು ಬಳಕೆ ಮಾಡಬೇಕು. ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹೊರಗುತ್ತಿಗೆಯ ಸಿಬ್ಬಂದಿ ಇ-ಸ್ಟ್ರೈಪ್ ಬಳಕೆ ಮಾಡಲಿ ಎಂದು ತಿಳಿಸಿದರು.

ಸಮಗ್ರ ಕಮಾಂಡ್ ಕೇಂದ್ರದಲ್ಲಿ ವನ್ಯಜೀವಿಗಳ ಚಲನವಲನದ ಬಗ್ಗೆ ನಿಗಾ ಇಡಬೇಕು. ಕೂಡಲೇ ಸಂಬಂಧಿತ ವಲಯದ ಅಧಿಕಾರಿ, ಸಿಬ್ಬಂದಿಗೆ ಸೂಚನೆ ನೀಡಬೇಕು. 1926 ದೂರವಾಣಿ ಸಂಖ್ಯೆಗೆ ಬರುವ ದೂರು ಮತ್ತು ಮಾಹಿತಿಗೆ ತಕ್ಷಣ ಸ್ಪಂದಿಸಬೇಕು ಎಂದು ಸೂಚಿಸಿದರು.

ಕಾಡ್ಗಿಚ್ಚು ನಿಯಂತ್ರಿಸಿ
ನಾಗರಹೊಳೆ, ಬಂಡೀಪುರ, ಬಿ.ಆರ್.ಟಿಯಲ್ಲಿ ಈ ಬೇಸಿಗೆಯಲ್ಲಿ ಕಾಡ್ಗಿಚ್ಚು ನಿಯಂತ್ರಿಸಲು ಕ್ರಮ ವಹಿಸುವಂತೆ ಸೂಚಿಸಿದ ಸಚಿವರು, ಬೇಸಿಗೆಯಲ್ಲಿ ಹುಲಿ, ಚಿರತೆ, ಆನೆ ಸೇರಿದಂತೆ ಯಾವುದೇ ವನ್ಯಜೀವಿ ಆಹಾರ ಮತ್ತು ನೀರಿನ ಕೊರತೆಯಿಂದ ಕಾಡಿನಿಂದ ಹೊರಬಾರದಂತೆ ಕ್ರಮ ಕೈಗೊಳ್ಳಲು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

4 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

4 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

4 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

4 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

16 hours ago