ಮೈಸೂರು

ಬಂಡೀಪುರ, ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭ : ಸಿಎಂ

ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ ಬರುವುದು ಏಕೆ ಎಂಬ ಬಗ್ಗೆ ಅಧ್ಯಯನ ಮಾಡಿ ವರದಿ ಸಲ್ಲಿಸಲು ತಜ್ಞರ ಸಮಿತಿಯನ್ನು ರಚಿಸಲು ಅರಣ್ಯ ಇಲಾಖೆ ಸಚಿವರು ಮತ್ತು ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕರ್ನಾಟಕ ವನ್ಯಜೀವಿ ಮಂಡಳಿಯ ೨೦ನೇ ಸಭೆಯಲ್ಲಿ ಸಫಾರಿ ವಾಹನಗಳ ಕಿರಿಕಿರಿಯಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುತ್ತಿವೆಯೇ, ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿ ವಾಹನಗಳ ಧಾರಣಾ ಸಾಮರ್ಥ್ಯವೆಷ್ಟು ಎಂಬ ಬಗ್ಗೆ ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸಲು ನಿರ್ಣಯಿಸಲಾಗಿದೆ.

ಸಭೆಯಲ್ಲಿ ಅಧ್ಯಕ್ಷರ ಅನುಮತಿಯ ಮೇರೆಗೆ ಈ ವಿಷಯ ಪ್ರಸ್ತಾಪಿಸಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು, ಕಳೆದ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಹುಲಿಗಳ ದಾಳಿಯಿಂದ ಮೂವರು ಸಾವಿಗೀಡಾಗಿ, ಒಬ್ಬರು ಶಾಶ್ವತ ವಿಶೇಷಚೇತನರಾದ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿ ಸ್ಥಗಿತಗೊಳಿಸಲಾಯಿತು. ಈ ೨ ತಿಂಗಳ ಅವಽಯಲ್ಲಿ ಕಾಡಿನ ಹೊರಗೆ ಹುಲಿ ದಾಳಿ ನಡೆದಿಲ್ಲ, ಯಾವುದೇ ಜೀವಹಾನಿ ಆಗಿಲ್ಲ ಎಂದು ಸಭೆಗೆ ವಿವರಿಸಿದರು.

ಸಫಾರಿ ವಾಹನಗಳ ಕಿರಿಕಿರಿಯಿಂದ, ವಾಹನಗಳ ಬೆಳಕಿನಿಂದ ವನ್ಯಜೀವಿಗಳು ಹೊರಬರುತ್ತವೆ ಎಂಬುದು ಸ್ಥಳೀಯರು ಮತ್ತು ರೈತರ ಆರೋಪವಾಗಿದೆ. ಈ ಬಗ್ಗೆ ಅಧ್ಯಯನ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

೧೯೭೨ರಲ್ಲಿ ಬಂಡೀಪುರದಲ್ಲಿ ಕೇವಲ ೧೨ ಹುಲಿಗಳು ಇದ್ದವು. ಇಂದು ಸುಮಾರು ೧೭೫ – ೨೦೦ ಹುಲಿಗಳಿವೆ. ಒಂದು ಹುಲಿ ಸ್ವಚ್ಛಂದವಾಗಿ ಜೀವಿಸಲು ೧೦ ಚದರ ಕಿಲೋ ಮೀಟರ್ ಪ್ರದೇಶ ಬೇಕು ಎಂದು ತಜ್ಞರು ಹೇಳುತ್ತಾರೆ. ಆದರೆ ೯೦೦ ಚದರ ಕಿಲೋಮೀಟರ್ ಕಾಡಿನಲ್ಲಿ ೨ ಪಟ್ಟು ಹುಲಿಗಳಿವೆ. ಇದು ಸಹ ಹುಲಿಗಳು ಕಾಡಿನಿಂದ ನಾಡಿನತ್ತ ಬರಲು ಕಾರಣವಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ವನ ಮತ್ತು ವನ್ಯಜೀವಿ ವಿಭಾಗದ ರಾಯಭಾರಿ ಅನಿಲ್ ಕುಂಬ್ಳೆ ವನ್ಯಜೀವಿಗಳು ಕಾಡಿನಿಂದ ಹೊರಗೆ ಬರುವುದಕ್ಕೂ ಸಫಾರಿಗೂ ಸಂಬಂಧವಿಲ್ಲ. ಸಫಾರಿಗೆ ಕೇವಲ ಶೇ.೮ರಷ್ಟು ಅರಣ್ಯ ಪ್ರದೇಶವೂ ಬಳಕೆ ಆಗುವುದಿಲ್ಲ, ಸ್ಥಳೀಯರ ಜೀವನೋಪಾಯವೂ ಇದರಲ್ಲಿ ಅಡಗಿದೆ. ಹೀಗಾಗಿ ಪುನರ್ ಪರಿಶೀಲಿಸಬೇಕು ಎಂದು ಸಲಹೆ ಮಾಡಿದರು.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕ ಪಿ.ಸಿ.ರೇ, ಹಂತಹಂತವಾಗಿ ಸಫಾರಿ ಆರಂಭಿಸುವುದು ಸೂಕ್ತ ಎಂದು ತಿಳಿಸಿದರು. ಸಭೆಯಲ್ಲಿ ಇದೇ ಅಭಿಪ್ರಾಯ ವ್ಯಕ್ತವಾಯಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶೀತದಲೆ ಹಿನ್ನೆಲೆ: ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಚಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಲವು ಜಿಲ್ಲೆಗಳಲ್ಲಿ ಶೀತಗಾಳಿ, ಶೀತದ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಶೀತದಲೆ…

27 mins ago

‘ಸಾವಿನ ನಂತರವೂ ಜನಮಾನಸದಲ್ಲಿ ಉಳಿದ ವೀರಭದ್ರಪ್ಪ’

ಯಳಂದೂರು: ನುಡಿನಮನ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಬಣ್ಣನೆ  ಯಳಂದೂರು: ಜನರ ಪ್ರೀತಿ ಗಳಿಕೆಯೇ ಸಾರ್ಥಕಜೀವನವಾಗಿದ್ದು, ಮನುಕುಲವನ್ನು ಕೃತಾರ್ಥ ಮಾಡುವ ಕೆಲಸವನ್ನು…

4 hours ago

ಓದುಗರ ಪತ್ರ: ಮಹಿಳೆ ವಿವಸ ಪ್ರಕರಣ ತನಿಖೆಯಲ್ಲಿ ಪೂರ್ವಗ್ರಹ ಬೇಡ

ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯ ವಿವಸ ಪ್ರಕರಣ ಅತ್ಯಂತ ಅಮಾನವೀಯವಾದುದು. ಸಂತ್ರಸ್ತ ಮಹಿಳೆ ಬಿಜೆಪಿಯೋ, ಕಾಂಗ್ರೆಸ್ಸೋ ಎನ್ನುವುದು ನಂತರದ ವಿಚಾರ. ಮೊದಲಿಗೆ…

4 hours ago

ಓದುಗರ ಪತ್ರ: ಶಾಲೆ ಬಳಿಯೇ ಕಸದ ಗುಡ್ಡೆ!

ನಂಜನಗೂಡು ಬಜಾರ್ ರಸ್ತೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಇದೆ. ಇದನ್ನು ದಳವಾಯಿ ಶಾಲೆ…

4 hours ago

ಓದುಗರ ಪತ್ರ: ಬಹುರೂಪಿ ಬಾಬಾಸಾಹೇಬ್… ಅರ್ಥಪೂರ್ಣ ಆಶಯ

ಮೈಸೂರಿನ ರಂಗಾಯಣದಲ್ಲಿ ಜ.೧೧ರಿಂದ ಆರಂಭವಾಗಲಿರುವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಧ್ಯೇಯವಾಕ್ಯ ಅತ್ಯಂತ ಸಮಂಜಸವಾಗಿದೆ. ‘ಬಾಬಾಸಾಹೇಬ್ -ಸಮತೆಯೆಡೆಗೆ ನಡಿಗೆ’ ಎಂಬ ಆಶಯದ…

4 hours ago

ದೊಡ್ಡ ಹೆಜ್ಜೂರು ಆಂಜನೇಯಸ್ವಾಮಿ ರಥೋತ್ಸವಕ್ಕೆ ಸಿದ್ಧತೆ

ದಾ.ರಾ.ಮಹೇಶ್ ಜ.೧೫ರಿಂದ ೧೮ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು; ಗಿರಿಜನರು ಹೆಚ್ಚಾಗಿ ಭಾಗಿಯಾಗುವ ಜಾತ್ರೆ ವೀರನಹೊಸಹಳ್ಳಿ: ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಹೊಂದಿಕೊಂಡಿರುವ…

4 hours ago