ಮೈಸೂರು

ಬಂಡೀಪುರ, ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭ : ಸಿಎಂ

ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ ಬರುವುದು ಏಕೆ ಎಂಬ ಬಗ್ಗೆ ಅಧ್ಯಯನ ಮಾಡಿ ವರದಿ ಸಲ್ಲಿಸಲು ತಜ್ಞರ ಸಮಿತಿಯನ್ನು ರಚಿಸಲು ಅರಣ್ಯ ಇಲಾಖೆ ಸಚಿವರು ಮತ್ತು ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕರ್ನಾಟಕ ವನ್ಯಜೀವಿ ಮಂಡಳಿಯ ೨೦ನೇ ಸಭೆಯಲ್ಲಿ ಸಫಾರಿ ವಾಹನಗಳ ಕಿರಿಕಿರಿಯಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುತ್ತಿವೆಯೇ, ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿ ವಾಹನಗಳ ಧಾರಣಾ ಸಾಮರ್ಥ್ಯವೆಷ್ಟು ಎಂಬ ಬಗ್ಗೆ ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸಲು ನಿರ್ಣಯಿಸಲಾಗಿದೆ.

ಸಭೆಯಲ್ಲಿ ಅಧ್ಯಕ್ಷರ ಅನುಮತಿಯ ಮೇರೆಗೆ ಈ ವಿಷಯ ಪ್ರಸ್ತಾಪಿಸಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು, ಕಳೆದ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಹುಲಿಗಳ ದಾಳಿಯಿಂದ ಮೂವರು ಸಾವಿಗೀಡಾಗಿ, ಒಬ್ಬರು ಶಾಶ್ವತ ವಿಶೇಷಚೇತನರಾದ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿ ಸ್ಥಗಿತಗೊಳಿಸಲಾಯಿತು. ಈ ೨ ತಿಂಗಳ ಅವಽಯಲ್ಲಿ ಕಾಡಿನ ಹೊರಗೆ ಹುಲಿ ದಾಳಿ ನಡೆದಿಲ್ಲ, ಯಾವುದೇ ಜೀವಹಾನಿ ಆಗಿಲ್ಲ ಎಂದು ಸಭೆಗೆ ವಿವರಿಸಿದರು.

ಸಫಾರಿ ವಾಹನಗಳ ಕಿರಿಕಿರಿಯಿಂದ, ವಾಹನಗಳ ಬೆಳಕಿನಿಂದ ವನ್ಯಜೀವಿಗಳು ಹೊರಬರುತ್ತವೆ ಎಂಬುದು ಸ್ಥಳೀಯರು ಮತ್ತು ರೈತರ ಆರೋಪವಾಗಿದೆ. ಈ ಬಗ್ಗೆ ಅಧ್ಯಯನ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

೧೯೭೨ರಲ್ಲಿ ಬಂಡೀಪುರದಲ್ಲಿ ಕೇವಲ ೧೨ ಹುಲಿಗಳು ಇದ್ದವು. ಇಂದು ಸುಮಾರು ೧೭೫ – ೨೦೦ ಹುಲಿಗಳಿವೆ. ಒಂದು ಹುಲಿ ಸ್ವಚ್ಛಂದವಾಗಿ ಜೀವಿಸಲು ೧೦ ಚದರ ಕಿಲೋ ಮೀಟರ್ ಪ್ರದೇಶ ಬೇಕು ಎಂದು ತಜ್ಞರು ಹೇಳುತ್ತಾರೆ. ಆದರೆ ೯೦೦ ಚದರ ಕಿಲೋಮೀಟರ್ ಕಾಡಿನಲ್ಲಿ ೨ ಪಟ್ಟು ಹುಲಿಗಳಿವೆ. ಇದು ಸಹ ಹುಲಿಗಳು ಕಾಡಿನಿಂದ ನಾಡಿನತ್ತ ಬರಲು ಕಾರಣವಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ವನ ಮತ್ತು ವನ್ಯಜೀವಿ ವಿಭಾಗದ ರಾಯಭಾರಿ ಅನಿಲ್ ಕುಂಬ್ಳೆ ವನ್ಯಜೀವಿಗಳು ಕಾಡಿನಿಂದ ಹೊರಗೆ ಬರುವುದಕ್ಕೂ ಸಫಾರಿಗೂ ಸಂಬಂಧವಿಲ್ಲ. ಸಫಾರಿಗೆ ಕೇವಲ ಶೇ.೮ರಷ್ಟು ಅರಣ್ಯ ಪ್ರದೇಶವೂ ಬಳಕೆ ಆಗುವುದಿಲ್ಲ, ಸ್ಥಳೀಯರ ಜೀವನೋಪಾಯವೂ ಇದರಲ್ಲಿ ಅಡಗಿದೆ. ಹೀಗಾಗಿ ಪುನರ್ ಪರಿಶೀಲಿಸಬೇಕು ಎಂದು ಸಲಹೆ ಮಾಡಿದರು.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕ ಪಿ.ಸಿ.ರೇ, ಹಂತಹಂತವಾಗಿ ಸಫಾರಿ ಆರಂಭಿಸುವುದು ಸೂಕ್ತ ಎಂದು ತಿಳಿಸಿದರು. ಸಭೆಯಲ್ಲಿ ಇದೇ ಅಭಿಪ್ರಾಯ ವ್ಯಕ್ತವಾಯಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

1 hour ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

1 hour ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

1 hour ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

1 hour ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

2 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

2 hours ago