ಮೈಸೂರು

ಬಂಡೀಪುರ, ನಾಗರಹೊಳೆಯಲ್ಲಿ ಡಿಸೆಂಬರ್‌ ಮೊದಲ ವಾರದಿಂದ ಮತ್ತೆ ಸಫಾರಿ ಆರಂಭಕ್ಕೆ ಚಿಂತನೆ

ಮೈಸೂರು : ಕಳೆದ 15 ದಿನದಿಂದ ನಾಗರಹೊಳೆ ಹಾಗೂ ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲಾಗಿದ್ದು, ಇದರಿಂದ ಅರಣ್ಯಧಾಮಗಳಿಗೆ ಲಕ್ಷಾಂತರ ರೂ. ನಷ್ಟವಾಗುತ್ತಿದೆ. ಈ ಹಿನ್ನೆಲೆ ಡಿಸೆಂಬರ್ ಮೊದಲ ವಾರದಿಂದ ಮತ್ತೆ ಸಫಾರಿ ಆರಂಭಿಸಲು ಚಿಂತನೆ ನಡೆಸಲಾಗಿದೆ.

ಸದಾ ಜನ ಜಂಗುಳಿಯಿಂದ ತುಂಬಿರುತ್ತಿದ್ದ ಪ್ರವಾಸಿಗರ ಹಾಟ್‌ಸ್ಪಾಟ್ ಹಾಗೂ ಪ್ರಕೃತಿ ಪ್ರಿಯರ ನೆಚ್ಚಿನ ತಾಣ, ರಾಜ್ಯದಲ್ಲಿ ಅತಿ ಹೆಚ್ಚು ಹುಲಿ, ಆನೆ, ಚಿರತೆ ಹೊಂದಿರುವ ಬಂಡೀಪುರ ಅರಣ್ಯ ಪ್ರವಾಸಿಗರಿಲ್ಲದೇ ಭಣಗುಡುತ್ತಿದೆ. ನಿತ್ಯ ನೂರಾರು ಜನರು ಬಂಡೀಪುರದ ಸಫಾರಿಗೆ ಆಗಮಿಸುತ್ತಿದ್ದರು. ಪ್ರಾಣಿಗಳ ದರ್ಶನದ ಜೊತೆಗೆ ಪ್ರಕೃತಿಯ ರಮ್ಯ ರಮಣೀಯತೆಯನ್ನು ಕಣ್ತುಂಬಿಕೊಳ್ಳುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಮೈಸೂರು, ಚಾಮರಾಜನಗರ ಭಾಗದಲ್ಲಿ ಹುಲಿ ದಾಳಿಯಿಂದ ರೈತರು ಸಾವನ್ನಪ್ಪುತ್ತಿರುವ ಪ್ರಕರಣ ಹೆಚ್ಚಳವಾಗಿತ್ತು. ಇದರಿಂದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಬಂಡೀಪುರ ಹಾಗೂ ನಾಗರಹೊಳೆ ಎರಡು ಕಡೆಯೂ ಸಫಾರಿ ನಿಷೇಧಿಸಿ, ಸಫಾರಿಗೆ ಬಳಕೆ ಮಾಡ್ತಿರುವ ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆ ಹಾಗೂ ಜಾಗೃತಿ ಮೂಡಿಸುವಂತೆ ಖಡಕ್ ಸೂಚನೆ ಕೊಟ್ಟಿದ್ದರು.

ಇದನ್ನು ಓದಿ:ಮೈಸೂರು | ಕಾರು ಡಿಕ್ಕಿ ; ಪಾದಚಾರಿ ಸಾವು

ಸಚಿವರ ಆದೇಶದ ಅನುಸಾರ ಬಂಡೀಪುರದ ಸಫಾರಿ ಸ್ಥಗಿತಗೊಂಡು 15 ಕ್ಕೂ ಹೆಚ್ಚು ದಿನಗಳಾಯ್ತು. ಪ್ರತಿನಿತ್ಯ ಮೂರು ಲಕ್ಷ ರೂ. ಹಾಗೂ ವಾರಾಂತ್ಯದಲ್ಲಿ 15 ಲಕ್ಷ ರೂ. ಸಫಾರಿಯಿಂದಲೇ ಆದಾಯ ಬರುತ್ತಿತ್ತು. ಆದ್ರೆ ಸಫಾರಿ ಸ್ಥಗಿತದಿಂದ ಆರ್ಥಿಕ ಹೊಡೆತ ಬೀಳುವ ಸಾಧ್ಯತೆಯಿದೆ. ಜೊತೆಗೆ ಸಫಾರಿ ಜೀಪ್ ಹಾಗೂ ಬಸ್ ಎರಡು ಕೂಡ ಧೂಳು ಹಿಡಿಯುತ್ತಿವೆ.

ಇನ್ನೂ ಸಫಾರಿ ಆರಂಭಿಸುವಂತೆ ಸಾಕಷ್ಟು ಕೇಳಿಬಂದಿದೆ. ಸದ್ಯ ಬಂಡೀಪುರದ ಕಾಡಂಚಿನ ಪ್ರದೇಶಗಳಲ್ಲಿ ಇದ್ದ ಹುಲಿಗಳನ್ನು ಸೆರೆಹಿಡಿಯುವ ಕೆಲಸ ಮಾಡಿದ್ದೇವೆ. ಅಲ್ಲದೇ ಸಫಾರಿ ನಿಷೇಧದಿಂದ ಸಾಕಷ್ಟು ಕುಟುಂಬಗಳಿಗೆ ಆರ್ಥಿಕ ಹೊಡೆತ ಉಂಟಾಗಿದೆ. ಈ ಕುಟುಂಬಗಳು ಸಫಾರಿ ಆರಂಭಿಸುವಂತೆ ಮನವಿ ಮಾಡ್ತಿದ್ದಾರೆ. ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಗಮನಕ್ಕೆ ಈ ವಿಚಾರ ತಂದಿದ್ದು, ಶೀಘ್ರದಲ್ಲೇ ಸಫಾರಿ ಆರಂಭಿಸುವ ಸಾಧ್ಯತೆ ಇದೆ ಎಂದು ಡಿಸಿಎಫ್ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಕ್ರಮ ಗಾಂಜಾ ಮಾರಾಟ : ಮಹಿಳೆ ಪೊಲೀಸ್ ವಶಕ್ಕೆ

ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…

51 mins ago

ಮತಗಳ್ಳತನದ ಹೋರಾಟದಲ್ಲಿ ರಾಜಕೀಯ ಉದ್ದೇಶವಿಲ್ಲ : ಡಿ.ಕೆ.ಶಿವಕುಮಾರ್

ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…

2 hours ago

10 ವರ್ಷದ ಪ್ರೀತಿಗೆ ಮೋಸ,ಹಣವೂ ದೋಖಾ : ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ

ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…

3 hours ago

ವರ್ಷಾಂತ್ಯಕ್ಕೂ ಸಫಾರಿ ಪುನಾರಂಭ ಸಾಧ್ಯತೆ ಕ್ಷೀಣ

ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…

4 hours ago

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

7 hours ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

7 hours ago