ಮೈಸೂರು : ಕಳೆದ 15 ದಿನದಿಂದ ನಾಗರಹೊಳೆ ಹಾಗೂ ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲಾಗಿದ್ದು, ಇದರಿಂದ ಅರಣ್ಯಧಾಮಗಳಿಗೆ ಲಕ್ಷಾಂತರ ರೂ. ನಷ್ಟವಾಗುತ್ತಿದೆ. ಈ ಹಿನ್ನೆಲೆ ಡಿಸೆಂಬರ್ ಮೊದಲ ವಾರದಿಂದ ಮತ್ತೆ ಸಫಾರಿ ಆರಂಭಿಸಲು ಚಿಂತನೆ ನಡೆಸಲಾಗಿದೆ.
ಸದಾ ಜನ ಜಂಗುಳಿಯಿಂದ ತುಂಬಿರುತ್ತಿದ್ದ ಪ್ರವಾಸಿಗರ ಹಾಟ್ಸ್ಪಾಟ್ ಹಾಗೂ ಪ್ರಕೃತಿ ಪ್ರಿಯರ ನೆಚ್ಚಿನ ತಾಣ, ರಾಜ್ಯದಲ್ಲಿ ಅತಿ ಹೆಚ್ಚು ಹುಲಿ, ಆನೆ, ಚಿರತೆ ಹೊಂದಿರುವ ಬಂಡೀಪುರ ಅರಣ್ಯ ಪ್ರವಾಸಿಗರಿಲ್ಲದೇ ಭಣಗುಡುತ್ತಿದೆ. ನಿತ್ಯ ನೂರಾರು ಜನರು ಬಂಡೀಪುರದ ಸಫಾರಿಗೆ ಆಗಮಿಸುತ್ತಿದ್ದರು. ಪ್ರಾಣಿಗಳ ದರ್ಶನದ ಜೊತೆಗೆ ಪ್ರಕೃತಿಯ ರಮ್ಯ ರಮಣೀಯತೆಯನ್ನು ಕಣ್ತುಂಬಿಕೊಳ್ಳುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಮೈಸೂರು, ಚಾಮರಾಜನಗರ ಭಾಗದಲ್ಲಿ ಹುಲಿ ದಾಳಿಯಿಂದ ರೈತರು ಸಾವನ್ನಪ್ಪುತ್ತಿರುವ ಪ್ರಕರಣ ಹೆಚ್ಚಳವಾಗಿತ್ತು. ಇದರಿಂದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಬಂಡೀಪುರ ಹಾಗೂ ನಾಗರಹೊಳೆ ಎರಡು ಕಡೆಯೂ ಸಫಾರಿ ನಿಷೇಧಿಸಿ, ಸಫಾರಿಗೆ ಬಳಕೆ ಮಾಡ್ತಿರುವ ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆ ಹಾಗೂ ಜಾಗೃತಿ ಮೂಡಿಸುವಂತೆ ಖಡಕ್ ಸೂಚನೆ ಕೊಟ್ಟಿದ್ದರು.
ಇದನ್ನು ಓದಿ:ಮೈಸೂರು | ಕಾರು ಡಿಕ್ಕಿ ; ಪಾದಚಾರಿ ಸಾವು
ಸಚಿವರ ಆದೇಶದ ಅನುಸಾರ ಬಂಡೀಪುರದ ಸಫಾರಿ ಸ್ಥಗಿತಗೊಂಡು 15 ಕ್ಕೂ ಹೆಚ್ಚು ದಿನಗಳಾಯ್ತು. ಪ್ರತಿನಿತ್ಯ ಮೂರು ಲಕ್ಷ ರೂ. ಹಾಗೂ ವಾರಾಂತ್ಯದಲ್ಲಿ 15 ಲಕ್ಷ ರೂ. ಸಫಾರಿಯಿಂದಲೇ ಆದಾಯ ಬರುತ್ತಿತ್ತು. ಆದ್ರೆ ಸಫಾರಿ ಸ್ಥಗಿತದಿಂದ ಆರ್ಥಿಕ ಹೊಡೆತ ಬೀಳುವ ಸಾಧ್ಯತೆಯಿದೆ. ಜೊತೆಗೆ ಸಫಾರಿ ಜೀಪ್ ಹಾಗೂ ಬಸ್ ಎರಡು ಕೂಡ ಧೂಳು ಹಿಡಿಯುತ್ತಿವೆ.
ಇನ್ನೂ ಸಫಾರಿ ಆರಂಭಿಸುವಂತೆ ಸಾಕಷ್ಟು ಕೇಳಿಬಂದಿದೆ. ಸದ್ಯ ಬಂಡೀಪುರದ ಕಾಡಂಚಿನ ಪ್ರದೇಶಗಳಲ್ಲಿ ಇದ್ದ ಹುಲಿಗಳನ್ನು ಸೆರೆಹಿಡಿಯುವ ಕೆಲಸ ಮಾಡಿದ್ದೇವೆ. ಅಲ್ಲದೇ ಸಫಾರಿ ನಿಷೇಧದಿಂದ ಸಾಕಷ್ಟು ಕುಟುಂಬಗಳಿಗೆ ಆರ್ಥಿಕ ಹೊಡೆತ ಉಂಟಾಗಿದೆ. ಈ ಕುಟುಂಬಗಳು ಸಫಾರಿ ಆರಂಭಿಸುವಂತೆ ಮನವಿ ಮಾಡ್ತಿದ್ದಾರೆ. ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಗಮನಕ್ಕೆ ಈ ವಿಚಾರ ತಂದಿದ್ದು, ಶೀಘ್ರದಲ್ಲೇ ಸಫಾರಿ ಆರಂಭಿಸುವ ಸಾಧ್ಯತೆ ಇದೆ ಎಂದು ಡಿಸಿಎಫ್ ತಿಳಿಸಿದ್ದಾರೆ.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…