ಮೈಸೂರು

ಬಂಡೀಪುರ, ನಾಗರಹೊಳೆಯಲ್ಲಿ ಡಿಸೆಂಬರ್‌ ಮೊದಲ ವಾರದಿಂದ ಮತ್ತೆ ಸಫಾರಿ ಆರಂಭಕ್ಕೆ ಚಿಂತನೆ

ಮೈಸೂರು : ಕಳೆದ 15 ದಿನದಿಂದ ನಾಗರಹೊಳೆ ಹಾಗೂ ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲಾಗಿದ್ದು, ಇದರಿಂದ ಅರಣ್ಯಧಾಮಗಳಿಗೆ ಲಕ್ಷಾಂತರ ರೂ. ನಷ್ಟವಾಗುತ್ತಿದೆ. ಈ ಹಿನ್ನೆಲೆ ಡಿಸೆಂಬರ್ ಮೊದಲ ವಾರದಿಂದ ಮತ್ತೆ ಸಫಾರಿ ಆರಂಭಿಸಲು ಚಿಂತನೆ ನಡೆಸಲಾಗಿದೆ.

ಸದಾ ಜನ ಜಂಗುಳಿಯಿಂದ ತುಂಬಿರುತ್ತಿದ್ದ ಪ್ರವಾಸಿಗರ ಹಾಟ್‌ಸ್ಪಾಟ್ ಹಾಗೂ ಪ್ರಕೃತಿ ಪ್ರಿಯರ ನೆಚ್ಚಿನ ತಾಣ, ರಾಜ್ಯದಲ್ಲಿ ಅತಿ ಹೆಚ್ಚು ಹುಲಿ, ಆನೆ, ಚಿರತೆ ಹೊಂದಿರುವ ಬಂಡೀಪುರ ಅರಣ್ಯ ಪ್ರವಾಸಿಗರಿಲ್ಲದೇ ಭಣಗುಡುತ್ತಿದೆ. ನಿತ್ಯ ನೂರಾರು ಜನರು ಬಂಡೀಪುರದ ಸಫಾರಿಗೆ ಆಗಮಿಸುತ್ತಿದ್ದರು. ಪ್ರಾಣಿಗಳ ದರ್ಶನದ ಜೊತೆಗೆ ಪ್ರಕೃತಿಯ ರಮ್ಯ ರಮಣೀಯತೆಯನ್ನು ಕಣ್ತುಂಬಿಕೊಳ್ಳುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಮೈಸೂರು, ಚಾಮರಾಜನಗರ ಭಾಗದಲ್ಲಿ ಹುಲಿ ದಾಳಿಯಿಂದ ರೈತರು ಸಾವನ್ನಪ್ಪುತ್ತಿರುವ ಪ್ರಕರಣ ಹೆಚ್ಚಳವಾಗಿತ್ತು. ಇದರಿಂದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಬಂಡೀಪುರ ಹಾಗೂ ನಾಗರಹೊಳೆ ಎರಡು ಕಡೆಯೂ ಸಫಾರಿ ನಿಷೇಧಿಸಿ, ಸಫಾರಿಗೆ ಬಳಕೆ ಮಾಡ್ತಿರುವ ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆ ಹಾಗೂ ಜಾಗೃತಿ ಮೂಡಿಸುವಂತೆ ಖಡಕ್ ಸೂಚನೆ ಕೊಟ್ಟಿದ್ದರು.

ಇದನ್ನು ಓದಿ:ಮೈಸೂರು | ಕಾರು ಡಿಕ್ಕಿ ; ಪಾದಚಾರಿ ಸಾವು

ಸಚಿವರ ಆದೇಶದ ಅನುಸಾರ ಬಂಡೀಪುರದ ಸಫಾರಿ ಸ್ಥಗಿತಗೊಂಡು 15 ಕ್ಕೂ ಹೆಚ್ಚು ದಿನಗಳಾಯ್ತು. ಪ್ರತಿನಿತ್ಯ ಮೂರು ಲಕ್ಷ ರೂ. ಹಾಗೂ ವಾರಾಂತ್ಯದಲ್ಲಿ 15 ಲಕ್ಷ ರೂ. ಸಫಾರಿಯಿಂದಲೇ ಆದಾಯ ಬರುತ್ತಿತ್ತು. ಆದ್ರೆ ಸಫಾರಿ ಸ್ಥಗಿತದಿಂದ ಆರ್ಥಿಕ ಹೊಡೆತ ಬೀಳುವ ಸಾಧ್ಯತೆಯಿದೆ. ಜೊತೆಗೆ ಸಫಾರಿ ಜೀಪ್ ಹಾಗೂ ಬಸ್ ಎರಡು ಕೂಡ ಧೂಳು ಹಿಡಿಯುತ್ತಿವೆ.

ಇನ್ನೂ ಸಫಾರಿ ಆರಂಭಿಸುವಂತೆ ಸಾಕಷ್ಟು ಕೇಳಿಬಂದಿದೆ. ಸದ್ಯ ಬಂಡೀಪುರದ ಕಾಡಂಚಿನ ಪ್ರದೇಶಗಳಲ್ಲಿ ಇದ್ದ ಹುಲಿಗಳನ್ನು ಸೆರೆಹಿಡಿಯುವ ಕೆಲಸ ಮಾಡಿದ್ದೇವೆ. ಅಲ್ಲದೇ ಸಫಾರಿ ನಿಷೇಧದಿಂದ ಸಾಕಷ್ಟು ಕುಟುಂಬಗಳಿಗೆ ಆರ್ಥಿಕ ಹೊಡೆತ ಉಂಟಾಗಿದೆ. ಈ ಕುಟುಂಬಗಳು ಸಫಾರಿ ಆರಂಭಿಸುವಂತೆ ಮನವಿ ಮಾಡ್ತಿದ್ದಾರೆ. ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಗಮನಕ್ಕೆ ಈ ವಿಚಾರ ತಂದಿದ್ದು, ಶೀಘ್ರದಲ್ಲೇ ಸಫಾರಿ ಆರಂಭಿಸುವ ಸಾಧ್ಯತೆ ಇದೆ ಎಂದು ಡಿಸಿಎಫ್ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

14 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

14 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

14 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

14 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

14 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

14 hours ago