m b patil
ಬುಧವಾರ ಮೈಸೂರಿನಲ್ಲಿ ಮೊದಲ ಕಾರ್ಯಕ್ರಮ: ಸಚಿವ ಎಂ.ಬಿ ಪಾಟೀಲ್, ಈಶ್ವರ ಖಂಡ್ರೆ, ಸಿ.ಎಸ್.ನಾಡಗೌಡ ಭಾಗಿ
ಮೈಸೂರು : ಅರಣ್ಯ ರಕ್ಷಣೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ರಾಜ್ಯದ 10 ಸಾವಿರ ಅರಣ್ಯ ರಕ್ಷಕರು/ ವೀಕ್ಷಕರು, ಕಾವಾಡಿಗಳು, ಮಾವುತರು ಮತ್ತು ಚಾಲಕರಿಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತದ (ಕೆಎಸ್ ಡಿಎಲ್) ವತಿಯಿಂದ ಗುಣಮಟ್ಟದ ಬ್ಯಾಗ್, ಜರ್ಕೀನ್, ಶೂ ಮತ್ತು ನೀರಿನ ಬಾಟಲಿ ಇರುವ ಕಿಟ್ ವಿತರಿಸಲಾಗುವುದು. ಈ ಸಿಎಸ್ಆರ್ ಉಪಕ್ರಮದ ಮೊದಲ ಕಾರ್ಯಕ್ರಮ ಬುಧವಾರ (ಜೂನ್ 4) ಮಧ್ಯಾಹ್ನ 1.30ಕ್ಕೆ ಮೈಸೂರಿನ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಸಭಾಂಗಣದಲ್ಲಿ ನಡೆಯಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು,ಕೆಎಸ್ ಡಿಎಲ್ ಸಂಸ್ಥೆಯ 2024-25ನೇ ಸಾಲಿನ ಎರಡು ಕೋಟಿ ರುಪಾಯಿ ಸಿಎಸ್ಆರ್ ನಿಧಿಯನ್ನು ಈ ಕಿಟ್ ಖರೀದಿಗೆ ಬಳಸಲಾಗಿದೆ.ಕೆಎಸ್ ಡಿಎಲ್ ನ ಹೆಮ್ಮೆಯ ಉತ್ಪನ್ನ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆಗೆ ಗಂಧದ ಎಣ್ಣೆ ಮುಖ್ಯವಾಗಿದೆ. ಈ ಸಂಪತ್ತನ್ನು ಕಾಪಾಡುವವರೇ ವನರಕ್ಷಕರು. ಅಂಥವರನ್ನು ಕುರಿತ ಕಳಕಳಿ ಈ ಹೆಜ್ಜೆಯಾಗಿದೆ ಎಂದಿದ್ದಾರೆ.
ಬುಧವಾರದ ಕಾರ್ಯಕ್ರಮದಲ್ಲಿ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಅರಣ್ಯ ವೃತ್ತಗಳ 2,168 ಸಿಬ್ಬಂದಿಗೆ ಈ ಕಿಟ್ ವಿತರಿಸಲಾಗುವುದು. ಅರಣ್ಯ ಸಚಿವ ಈಶ್ವರ ಖಂಡ್ರೆ, ಕೆಎಸ್ ಡಿಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ, ವನ್ಯಜೀವಿ ಮಂಡಳಿ ಸದಸ್ಯ ಧ್ರುವ ಪಾಟೀಲ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಇದಕ್ಕೆ ಸಾಕ್ಷಿಯಾಗಲಿದ್ದಾರೆ.
ಮುಂದಿನ ದಿನಗಳಲ್ಲಿ ರಾಜ್ಯದ ಉಳಿದೆಡೆಗಳ ಅರಣ್ಯಗಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೂ ಕಿಟ್ ವಿತರಣೆ ಮಾಡಲಾಗುವುದು ಎಂದು ಪಾಟೀಲ ಹೇಳಿದ್ದಾರೆ.
ಕಿಟ್ ಸ್ವೀಕರಿಸುವ ಪ್ರತಿಯೊಬ್ಬರಿಂದ ಮೊದಲೇ ಅಳತೆ ತೆಗೆದುಕೊಂಡು, ಜರ್ಕಿನ್, ಶೂ ಖರೀದಿಸಲಾಗಿದೆ. ಇದರಲ್ಲಿ 5 ಸಾವಿರ ಮಂದಿ ಖಾಯಂ ಸಿಬ್ಬಂದಿಯಾಗಿದ್ದು, ಮಿಕ್ಕವರು ತಾತ್ಕಾಲಿಕ ನೆಲೆಯಲ್ಲಿದ್ದಾರೆ. ಇವರೆಲ್ಲರ ಯೋಗಕ್ಷೇಮ ನಮ್ಮ ಹೊಣೆಯಾಗಿದೆ ಎಂದು ಅವರು ನುಡಿದಿದ್ದಾರೆ.
ವನ್ಯಜೀವಿ ಮಂಡಳಿ ಸದಸ್ಯರೂ ಆದ ಸೊಸೈಟಿ ಫಾರ್ ಪ್ರೊಟೆಕ್ಷನ್ ಆಫ್ ಪ್ಲಾಂಟ್ಸ್ ಅಂಡ್ ಅನಿಮಲ್ಸ್ (ಎಸ್ ಪಿಪಿಎ) ಸಂಸ್ಥಾಪಕ ಧ್ರುವ ಪಾಟೀಲ ಅವರು ಹವ್ಯಾಸಿ ವನ್ಯಜೀವಿ ಛಾಯಾಗ್ರಾಹಕರಾಗಿದ್ದು, ಪ್ರತಿಕೂಲ ಸಂದರ್ಭಗಳಲ್ಲಿ ವನರಕ್ಷಕರು ಎದುರಿಸುತ್ತಿದ್ದ ಸಮಸ್ಯೆಗಳಿಗೆ ಕಿವಿಯಾಗಿ ಈ ಯೋಜನೆ ರೂಪಿಸಲು ನೆರವಾಗಿದ್ದಾರೆ.
ಜಾರ್ಖಂಡ್: ಜಾರ್ಖಂಡ್ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು…
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…
ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.…
ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ…
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…