ಮೈಸೂರು

ಮೈಸೂರು | 10 ಸಾವಿರ ವನರಕ್ಷಕರಿಗೆ ಕೆ.ಎಸ್.ಡಿ.ಎಲ್‌ ಸುರಕ್ಷಾ ಕಿಟ್ ವಿತರಣೆ

ಬುಧವಾರ ಮೈಸೂರಿನಲ್ಲಿ ಮೊದಲ ಕಾರ್ಯಕ್ರಮ: ಸಚಿವ ಎಂ.ಬಿ ಪಾಟೀಲ್‌, ಈಶ್ವರ ಖಂಡ್ರೆ, ಸಿ.ಎಸ್.ನಾಡಗೌಡ ಭಾಗಿ

ಮೈಸೂರು : ಅರಣ್ಯ ರಕ್ಷಣೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ರಾಜ್ಯದ 10 ಸಾವಿರ ಅರಣ್ಯ ರಕ್ಷಕರು/ ವೀಕ್ಷಕರು, ಕಾವಾಡಿಗಳು, ಮಾವುತರು ಮತ್ತು ಚಾಲಕರಿಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತದ (ಕೆಎಸ್ ಡಿಎಲ್) ವತಿಯಿಂದ ಗುಣಮಟ್ಟದ ಬ್ಯಾಗ್, ಜರ್ಕೀನ್, ಶೂ ಮತ್ತು ನೀರಿನ ಬಾಟಲಿ ಇರುವ ಕಿಟ್ ವಿತರಿಸಲಾಗುವುದು. ಈ ಸಿಎಸ್ಆರ್ ಉಪಕ್ರಮದ ಮೊದಲ ಕಾರ್ಯಕ್ರಮ ಬುಧವಾರ (ಜೂನ್ 4) ಮಧ್ಯಾಹ್ನ 1.30ಕ್ಕೆ ಮೈಸೂರಿನ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಸಭಾಂಗಣದಲ್ಲಿ ನಡೆಯಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು,ಕೆಎಸ್ ಡಿಎಲ್ ಸಂಸ್ಥೆಯ 2024-25ನೇ ಸಾಲಿನ ಎರಡು ಕೋಟಿ ರುಪಾಯಿ ಸಿಎಸ್ಆರ್ ನಿಧಿಯನ್ನು ಈ ಕಿಟ್ ಖರೀದಿಗೆ ಬಳಸಲಾಗಿದೆ.ಕೆಎಸ್ ಡಿಎಲ್ ನ ಹೆಮ್ಮೆಯ ಉತ್ಪನ್ನ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆಗೆ ಗಂಧದ ಎಣ್ಣೆ ಮುಖ್ಯವಾಗಿದೆ. ಈ ಸಂಪತ್ತನ್ನು ಕಾಪಾಡುವವರೇ ವನರಕ್ಷಕರು. ಅಂಥವರನ್ನು ಕುರಿತ ಕಳಕಳಿ ಈ ಹೆಜ್ಜೆಯಾಗಿದೆ ಎಂದಿದ್ದಾರೆ.

ಬುಧವಾರದ ಕಾರ್ಯಕ್ರಮದಲ್ಲಿ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಅರಣ್ಯ ವೃತ್ತಗಳ 2,168 ಸಿಬ್ಬಂದಿಗೆ ಈ‌ ಕಿಟ್ ವಿತರಿಸಲಾಗುವುದು. ಅರಣ್ಯ ಸಚಿವ ಈಶ್ವರ ಖಂಡ್ರೆ, ಕೆಎಸ್ ಡಿಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ, ವನ್ಯಜೀವಿ ಮಂಡಳಿ ಸದಸ್ಯ ಧ್ರುವ ಪಾಟೀಲ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಇದಕ್ಕೆ ಸಾಕ್ಷಿಯಾಗಲಿದ್ದಾರೆ.

ಮುಂದಿನ ದಿನಗಳಲ್ಲಿ ರಾಜ್ಯದ ಉಳಿದೆಡೆಗಳ ಅರಣ್ಯಗಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೂ ಕಿಟ್ ವಿತರಣೆ ಮಾಡಲಾಗುವುದು ಎಂದು ಪಾಟೀಲ ಹೇಳಿದ್ದಾರೆ.

ಕಿಟ್ ಸ್ವೀಕರಿಸುವ ಪ್ರತಿಯೊಬ್ಬರಿಂದ ಮೊದಲೇ ಅಳತೆ ತೆಗೆದುಕೊಂಡು, ಜರ್ಕಿನ್, ಶೂ ಖರೀದಿಸಲಾಗಿದೆ. ಇದರಲ್ಲಿ 5 ಸಾವಿರ ಮಂದಿ ಖಾಯಂ ಸಿಬ್ಬಂದಿಯಾಗಿದ್ದು, ಮಿಕ್ಕವರು ತಾತ್ಕಾಲಿಕ ನೆಲೆಯಲ್ಲಿದ್ದಾರೆ. ಇವರೆಲ್ಲರ ಯೋಗಕ್ಷೇಮ ನಮ್ಮ ಹೊಣೆಯಾಗಿದೆ ಎಂದು ಅವರು ನುಡಿದಿದ್ದಾರೆ.

ವನ್ಯಜೀವಿ ಮಂಡಳಿ ಸದಸ್ಯರೂ ಆದ ಸೊಸೈಟಿ ಫಾರ್ ಪ್ರೊಟೆಕ್ಷನ್ ಆಫ್ ಪ್ಲಾಂಟ್ಸ್ ಅಂಡ್ ಅನಿಮಲ್ಸ್ (ಎಸ್ ಪಿಪಿಎ) ಸಂಸ್ಥಾಪಕ ಧ್ರುವ ಪಾಟೀಲ ಅವರು ಹವ್ಯಾಸಿ ವನ್ಯಜೀವಿ ಛಾಯಾಗ್ರಾಹಕರಾಗಿದ್ದು, ಪ್ರತಿಕೂಲ ಸಂದರ್ಭಗಳಲ್ಲಿ ವನರಕ್ಷಕರು ಎದುರಿಸುತ್ತಿದ್ದ ಸಮಸ್ಯೆಗಳಿಗೆ ಕಿವಿಯಾಗಿ ಈ ಯೋಜನೆ ರೂಪಿಸಲು ನೆರವಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

8 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

11 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

15 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

17 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

18 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

19 hours ago