ಮೈಸೂರು: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಗರದ ಮುನ್ನೆಚ್ಚರಿಕಾ ಕ್ರಮವಾಗಿ ಹಿರಿಯ ಮುಖಂಡಗಳೊಂದಿಗೆ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರ ನೇತೃತ್ವದಲ್ಲಿ ಶಾಂತಿ ಸಭೆಯನ್ನು ನಡೆಸಲಾಯಿತು.
ನಗರದ ಪೊಲೀಸ್ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಮುಂಜಾಗ್ರತವಾಗಿ ಹಮ್ಮಿಕೊಳ್ಳಲಾಗಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಸೀಮಾ ಲಾಟ್ಕರ್ ಅವರು ಜೂನ್ 7 ರಂದು ನಡೆಯಲಿರುವ ಬಕ್ರೀದ್ ಹಬ್ಬದ ಆಚರಣೆ ಸಂಬಂಧ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರ ವಹಿಸಬೇಕು. ಎಲ್ಲ ಮುಖಂಡರು ಮಧ್ಯಸ್ಥಿಕೆ ವಹಿಸಿ ಶಾಂತಿಯುತವಾಗಿ ಹಬ್ಬ ಆಚರಿಸಬೇಕು. ಸಂಘರ್ಷಗಳಿಗೆ ಆಸ್ಪದ ನೀಡದೆ, ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಆಯುಕ್ತರು ಶೇಖ್ ತನ್ವೀರ್ಅಸೀಫ್, ಡಿಸಿಪಿ ಎಂ.ಮುತ್ತುರಾಜು, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಕೆ.ಎಸ್. ಸುಂದರ್ ರಾಜ್ , ಸಿಎಆರ್ ಸಿದ್ದನಗೌಡ ವೈ.ಪಾಟೀಲ ಉಪಸ್ಥಿತರಿದ್ದರು.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…