ಸಾಲಿಗ್ರಾಮ: ಸಾಲಿಗ್ರಾಮ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರಾಥಮಿಕ ಶಾಲೆಯನ್ನು ಹೊಡೆದು ರಸ್ತೆ ಮಾಡಿಕೊಂಡು ಟ್ರಾಕ್ಟರ್ ಮೂಲಕ ಮಣ್ಣು ಸಾಗಾಣಿಕೆ ಮಾಡಿ ಮನೆ ನಿರ್ಮಾಣ ಮಾಡಿದ್ದರೂ ಶಿಕ್ಷಣ ಇಲಾಖೆ ಹಾಗೂ ತಾಲ್ಲೂಕು ಆಡಳಿತ ಕಣ್ಮುಚ್ಚಿ ಕುಳಿತಿದೆ ಎಂದು ಸಾಲಿಗ್ರಾಮ ನಾಗರಿಕರು ಗಂಭೀರ ಆರೋಪ ಮಾಡಿದ್ದಾರೆ.
ಸಾಲಿಗ್ರಾಮ ಪಟ್ಟಣದ ಸಾಹುಕಾರ್ ಬೋರಣ್ಣನವರು ಅಂದು ಬಡ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರಿ ಶಾಲೆ ನಿರ್ಮಾಣ ಮಾಡಲು ಜಾಗವನ್ನು ದಾನವಾಗಿ ನೀಡಿದ್ದರು. ಇದು ಸರ್ಕಾರದ ಜಮೀನಲ್ಲ. ನಮ್ಮೂರಿನ ಸಾಹುಕಾರ್ ನೀಡಿದ್ದು. ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾದ ಮೇಲೆ ಶಾಲೆಯನ್ನು ಮುಚ್ಚಲಾಗಿದೆ. ಆದರೀಗ ಶಾಲೆಯ ಗೋಡೆಗಳನ್ನು ಹೊಡೆದು ಹಾಕಿ, ಮಣ್ಣು ಸಾಗಾಟ ಮಾಡಲಾಗಿದೆ.
ಇದನ್ನೂ ಓದಿ:-ಹಿರಿಯ ಸಾಹಿತಿ ಮೊಗಳ್ಳಿ ಗಣೇಶ್ ನಿಧನ
ಈ ಹಿನ್ನೆಲೆಯಲ್ಲಿ ಶಾಲೆಯ ಗೋಡೆ ಹೊಡೆದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಈ ಪ್ರಕರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ಶಿಕ್ಷಣ ಇಲಾಖೆ ಅಸಡ್ಡೆ ತೋರಿದೆ. ಶಾಲೆಯ ಕಟ್ಟಡ ಉಳಿಸುವ ಕಾರ್ಯವಾಗಬೇಕು. ನಮ್ಮ ಹಿರಿಯರು ಓದಿದ ಶಾಲಾ ಕಟ್ಟಡಗಳು ಸಹ ಇವೆ. ಅವುಗಳನ್ನು ರಕ್ಷಣೆ ಮಾಡಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…
ಎಚ್.ಡಿ.ಕೋಟೆ: ಬಸ್ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…
ಮಂಡ್ಯ: ವಿಸಿ ಫಾರ್ಮ್ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…
ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ…