ಸಾಲಿಗ್ರಾಮ: ಸಾಲಿಗ್ರಾಮ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರಾಥಮಿಕ ಶಾಲೆಯನ್ನು ಹೊಡೆದು ರಸ್ತೆ ಮಾಡಿಕೊಂಡು ಟ್ರಾಕ್ಟರ್ ಮೂಲಕ ಮಣ್ಣು ಸಾಗಾಣಿಕೆ ಮಾಡಿ ಮನೆ ನಿರ್ಮಾಣ ಮಾಡಿದ್ದರೂ ಶಿಕ್ಷಣ ಇಲಾಖೆ ಹಾಗೂ ತಾಲ್ಲೂಕು ಆಡಳಿತ ಕಣ್ಮುಚ್ಚಿ ಕುಳಿತಿದೆ ಎಂದು ಸಾಲಿಗ್ರಾಮ ನಾಗರಿಕರು ಗಂಭೀರ ಆರೋಪ ಮಾಡಿದ್ದಾರೆ.
ಸಾಲಿಗ್ರಾಮ ಪಟ್ಟಣದ ಸಾಹುಕಾರ್ ಬೋರಣ್ಣನವರು ಅಂದು ಬಡ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರಿ ಶಾಲೆ ನಿರ್ಮಾಣ ಮಾಡಲು ಜಾಗವನ್ನು ದಾನವಾಗಿ ನೀಡಿದ್ದರು. ಇದು ಸರ್ಕಾರದ ಜಮೀನಲ್ಲ. ನಮ್ಮೂರಿನ ಸಾಹುಕಾರ್ ನೀಡಿದ್ದು. ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾದ ಮೇಲೆ ಶಾಲೆಯನ್ನು ಮುಚ್ಚಲಾಗಿದೆ. ಆದರೀಗ ಶಾಲೆಯ ಗೋಡೆಗಳನ್ನು ಹೊಡೆದು ಹಾಕಿ, ಮಣ್ಣು ಸಾಗಾಟ ಮಾಡಲಾಗಿದೆ.
ಇದನ್ನೂ ಓದಿ:-ಹಿರಿಯ ಸಾಹಿತಿ ಮೊಗಳ್ಳಿ ಗಣೇಶ್ ನಿಧನ
ಈ ಹಿನ್ನೆಲೆಯಲ್ಲಿ ಶಾಲೆಯ ಗೋಡೆ ಹೊಡೆದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಈ ಪ್ರಕರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ಶಿಕ್ಷಣ ಇಲಾಖೆ ಅಸಡ್ಡೆ ತೋರಿದೆ. ಶಾಲೆಯ ಕಟ್ಟಡ ಉಳಿಸುವ ಕಾರ್ಯವಾಗಬೇಕು. ನಮ್ಮ ಹಿರಿಯರು ಓದಿದ ಶಾಲಾ ಕಟ್ಟಡಗಳು ಸಹ ಇವೆ. ಅವುಗಳನ್ನು ರಕ್ಷಣೆ ಮಾಡಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…