ಸಾಲಿಗ್ರಾಮ: ಸಾಲಿಗ್ರಾಮ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರಾಥಮಿಕ ಶಾಲೆಯನ್ನು ಹೊಡೆದು ರಸ್ತೆ ಮಾಡಿಕೊಂಡು ಟ್ರಾಕ್ಟರ್ ಮೂಲಕ ಮಣ್ಣು ಸಾಗಾಣಿಕೆ ಮಾಡಿ ಮನೆ ನಿರ್ಮಾಣ ಮಾಡಿದ್ದರೂ ಶಿಕ್ಷಣ ಇಲಾಖೆ ಹಾಗೂ ತಾಲ್ಲೂಕು ಆಡಳಿತ ಕಣ್ಮುಚ್ಚಿ ಕುಳಿತಿದೆ ಎಂದು ಸಾಲಿಗ್ರಾಮ ನಾಗರಿಕರು ಗಂಭೀರ ಆರೋಪ ಮಾಡಿದ್ದಾರೆ.
ಸಾಲಿಗ್ರಾಮ ಪಟ್ಟಣದ ಸಾಹುಕಾರ್ ಬೋರಣ್ಣನವರು ಅಂದು ಬಡ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರಿ ಶಾಲೆ ನಿರ್ಮಾಣ ಮಾಡಲು ಜಾಗವನ್ನು ದಾನವಾಗಿ ನೀಡಿದ್ದರು. ಇದು ಸರ್ಕಾರದ ಜಮೀನಲ್ಲ. ನಮ್ಮೂರಿನ ಸಾಹುಕಾರ್ ನೀಡಿದ್ದು. ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾದ ಮೇಲೆ ಶಾಲೆಯನ್ನು ಮುಚ್ಚಲಾಗಿದೆ. ಆದರೀಗ ಶಾಲೆಯ ಗೋಡೆಗಳನ್ನು ಹೊಡೆದು ಹಾಕಿ, ಮಣ್ಣು ಸಾಗಾಟ ಮಾಡಲಾಗಿದೆ.
ಇದನ್ನೂ ಓದಿ:-ಹಿರಿಯ ಸಾಹಿತಿ ಮೊಗಳ್ಳಿ ಗಣೇಶ್ ನಿಧನ
ಈ ಹಿನ್ನೆಲೆಯಲ್ಲಿ ಶಾಲೆಯ ಗೋಡೆ ಹೊಡೆದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಈ ಪ್ರಕರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ಶಿಕ್ಷಣ ಇಲಾಖೆ ಅಸಡ್ಡೆ ತೋರಿದೆ. ಶಾಲೆಯ ಕಟ್ಟಡ ಉಳಿಸುವ ಕಾರ್ಯವಾಗಬೇಕು. ನಮ್ಮ ಹಿರಿಯರು ಓದಿದ ಶಾಲಾ ಕಟ್ಟಡಗಳು ಸಹ ಇವೆ. ಅವುಗಳನ್ನು ರಕ್ಷಣೆ ಮಾಡಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…