ಕೆ.ಆರ್ ನಗರ : ಇಲ್ಲಿನ ಸಾಲಿಗ್ರಾಮ ಸಮೀಪದ ಮಳಲಿ ಅರಣ್ಯ ವ್ಯಾಪ್ತಿಯ ಹುರುಳಿಕಾಮೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಚಿರತೆ ಬೋನಿಗೆ ಬಿದ್ದಿದೆ.
ಗ್ರಾಮದಲ್ಲಿ ಹಲವು ದಿನಗಳಿಂದ ಕಾಣಿಸಿಕೊಂಡಿದ್ದ ಚಿರತೆಯಿಂದ ಗ್ರಾಮಸ್ಥರು ಭಯ ಬೀತಿಗೊಂಡಿದ್ದರು. ಈ ಬಗ್ಗೆ ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರು. ಬಳಿಕ ಅರಣ್ಯಾಧಿಕಾರಿಗಳು ಪರಿಶೀಲಿಸಿ ಚಿರತೆ ಸೆರೆಗೆ ಬೋನು ಇಟ್ಟಿದ್ದರು.
ಶುಕ್ರವಾರ ರಾತ್ರಿ ಬೋನಿಗೆ ಬಿದ್ದ ಮೂರು ವರ್ಷದ ಚಿರತೆಯನ್ನು ಸುರಕ್ಷಿತವಾಗಿ ನಾಗರಹೊಳೆ ಅರಣ್ಯಕ್ಕೆ ಬಿಡಲಾಯಿತು.