ಮೈಸೂರು

ಸ್ವಾವಲಂಬಿ ಬದುಕಿಗೆ ಸಂಜೀವಿನಿ ಸಹಕಾರ: ಸಿಇಓ ಕೆ.ಎಂ. ಗಾಯಿತ್ರಿ

ಮೈಸೂರು: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷಿನ್ ಅಡಿಯಲ್ಲಿ(ಎನ್.ಆರ್.ಎಲ್.ಎಂ) ಗ್ರಾಮೀಣ ಭಾಗದ ಸಾಕಷ್ಟು ಮಹಿಳೆಯರು ಆರ್ಥಿಕವಾಗಿ ಸದೃಢಗೊಳುತ್ತಿದ್ದು, ಇನ್ನಷ್ಟು ವಿನೂತನ ರೀತಿಯಲ್ಲಿ ಉಪಯುಕ್ತವಾಗುವಂತಹ ವಿವಿಧ ಉತ್ಪನ್ನಗಳನ್ನು ತಯಾರಿಸಿ ತಮ್ಮದೇ ಬ್ರ್ಯಾಂಡ್ ಅನ್ನು ಸೃಷ್ಠಿಸಿಕೊಂಡು ಮುಖ್ಯವಾಹಿನಿಗೆ ಬರುವಂತೆ  ಸಂಜೀವಿನಿ ಸಂಘದ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಹಾಗೂ ಮುಖ್ಯ ಪುಸ್ತಕ ಬರಹಗಾರರುಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ  ಅವರು ತಿಳಿಸಿದರು.
ಅವರು  ಇಂದು(ಮೇ.೧೫) ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ವಿವಿಧ ಇಲಾಖೆಗಳೊಂದಿಗೆ ಹಲವು ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದರು.
ಸಂಜೀವಿನಿ ಸಂಘಗಳಿಂದ ನೀಡಲಾಗುವ ಪ್ರೋತ್ಸಾಹಧನನ್ನು ಮಹಿಳೆಯರು ವಿನೂತನ ರೀತಿಯಲ್ಲಿ ಇಂಬ್ರಾಯಿಡ್ರಿ ಮಾಡುವುದು,  ವಿವಿಧ ತಿನಿಸುಗಳ ತಯಾರಿಕೆ, ಗೊಬ್ಬರ ತಯಾರಿಕೆ, ಅಣಬೆ ಬೆಳೆಯುವುದು ಸೇರಿದಂತೆ ಸ್ಥಳೀಯವಾಗಿ ಬೆಳೆಯುವ ಬಾಳೆಯಿಂದ ಬಾಳೆಕಾಯಿ ಚಿಪ್ಸ್, ಬಾಳೆ ದಿಂಡಿನಿಂದ ಜ್ಯೂಸ್, ಅದರ ತ್ಯಾಜ್ಯಗಳಿಂದ ಗೊಬ್ಬರ ತಯಾರಿಕೆ ಹೀಗೆ ವಿನೂತನ ರೀತಿಯಲ್ಲಿ ಉತ್ಪಾದನೆ ಮಾಡಿ ಅವುಗಳಿಗೆ ಕ್ರಿಯಾತ್ಮಕವಾಗಿ ಬೇಡಿಕೆ  ಹೆಚ್ಚಿಸಿಕೊಂಡು ಸ್ವಾವಲಂಭಿ ಬದುಕು ಕಟ್ಟಿಕೊಳ್ಳುವಂತೆ ಜೀವನ ಪಾಠ ಮಾಡಿದರು.
ಜಲ ಜೀವನ್ ಯೋಜನೆ ಪ್ರಗತಿ ಪರಿಶೀಲಿಸಿದ ಅವರು, ಪಂಚಾಯಿತಿ ವ್ಯಾಪ್ತಿಯಲ್ಲಿ ನೀರಿನ ಸಂಪರ್ಕ  ಕೆಲಸವನ್ನು ಶೀಘ್ರವೇ ಪೂರ್ಣಗೊಳಿಸಬೇಕು ಎಂದರು. ಈ ವೇಳೆ ಅನುಮೋದಿತ ವರದಿಗಿಂತ  ನೀರಿನ ಸಂಪರ್ಕವು ಹೆಚ್ಚಾಗಿರುವ ಬಗ್ಗೆ  ಸಹಾಯಕ ಕಾರ್ಯಪಾಲಕ ಅಭಿಯಂತರರು  ತಿಳಿಸಿದ್ದು, ಉಳಿತಾಯ ಹಣದಿಂದ ಭರಿಸುವಂತೆ ತಿಳಿಸಿದರು.
ಮಹಾತ್ಮ ಗಾಂಧಿ ನರೇಗಾ  ಯೋಜನೆ ಕುರಿತು ಪರಿಶೀಲಿಸಿ, ನಿಷ್ಕ್ರಿಯವಾಗಿರುವ ಜಾಬ್ ಕಾರ್ಡ್ ಗಳನ್ನು ಕ್ರಿಯಾಶೀಲವಾಗಿಸಲು ಕ್ರಮತೆಗೆದುಕೊಳ್ಳಬೇಕು. ಮಹಿಳಾ ಸಂಘಧ ಮಹಿಳೆಯರನ್ನು ಒಗ್ಗೂಡಿಸಿಕೊಂಡು ಅಭಿಯಾನಗಳ ಮೂಲಕ ಬೇಡಿಕೆ ಸಂಗ್ರಹಿಸಿ ಕೆಲಸ ನೀಡುವಂತೆ ಸೂಚಿಸಿದರು. ಈ ವೇಳೆ ನರೇಗಾ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸುಂತೆ ಅಧಿಕಾರಿಗಳಿಗೆ ತಿಳಿಸಿದರು. ಬಳಿಕ ಮಾತನಾಡಿದ ಅವರು, ಗ್ರಾಮ ಪಂಚಾಯಿತಿಯಲ್ಲಿ ಆಸ್ತಿ ಸಮೀಕ್ಷೆ ಕುಂಠಿತಗೊಂಡಿದ್ದು, ಇದರಿಂದ ತೆರಿಗೆ ಸಂಗ್ರಹಿಸುದು ಕಷ್ಟವಾಗುತ್ತದೆ. ಆದ್ದರಿಂದ ಶೀಘ್ರವೇ ಆಸ್ತಿ ಸಮೀಕ್ಷೆ ಪೂರ್ಣಗೊಳಿಸಿ, ಸಕಾಲದಲ್ಲಿ ಯಾವುದೇ ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳದಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.
ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಕ್ರಮವಹಿಸಬೇಕು, ಎಲ್ಲಾ ಚರಂಡಿ, ನೀರಿನ ಟ್ಯಾಂಕ್ ಗಳು, ದನಗಳು ಕುಡಿಯುವ ನೀರಿನ ತೊಟ್ಟಿಯಲ್ಲಿ ಕಾಲ ಕಾಲಕ್ಕೆ ಸ್ವಚ್ಛಗೊಳಿಸುತ್ತಿರುವ  ಬಗ್ಗೆ ಖಾತರಿ ಪಡಿಸಿಕೊಂಡರು.
ಕೂಸಿನ ಮನೆಗೆ ಮೆಚ್ಚುಗೆ: ಸಭೆ ಬಳಿಕ ಪಂಚಾಯಿತಿ ಎದುಗಿರಿನ ಕೂಸಿನ ಮನೆಗೆ ಭೇಟಿ ನೀಡಿದ ಅವರು,  ಕೂಸಿನ ಮನೆಯ ಅತ್ಯಾಕರ್ಷಕ ಪೇಯಿಟಿಂಗ್, ಚಾರ್ಟ್ಗಳ ಪ್ರದರ್ಶನ ಹಾಗೂ ಕಟ್ಟಡವು  ವಿಶಾಲ ಹಾಗೂ ಸುಸಜ್ಜಿತವಾಗಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು ಬಳಿಕ ದಾಖಲಾತಿ ಪುಸ್ತಕಗಳನ್ನು ಪರಿಶೀಲಿಸಿ, ಜಿಲ್ಲಾ ಪಂಚಾಯಿತಿ ಸಮಿತಿಯಿಂದ ಸಿದ್ದಪಡಿಸಿರುವ  ಆಹಾರದ ಮೆನುವಿನಲ್ಲಿ ಬದಲಾವಣೆ ಬೇಕಿದಲ್ಲಿ ತಿಳಿಸುವಂತೆ ಕೇರ್ ಟೇಕರ್ಸ್ ಗಳಿಗೆ ತಿಳಿಸಿದರು.
ಬಳಿಕ ನರೇಗಾ ಯೋಜನೆಯಡಿ  ಬಾಳೆ ಬೆಳೆದಿದ್ದ ಫಲಾನುಭವಿ ಮಹೇಶ್ ಎಂಬುವವರು ಬಾಳೆ ತೋಟಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು,  ಉದ್ಯೋಗ ಖಾತರಿ ಯೋಜನೆ ಅಡಿ ವೈಯಕ್ತಿಕ  ಕಾಮಗಾರಿಗಳಿಗೆ ಇದ್ದ 2.5 ಲಕ್ಷ ಮಿತಿಯನ್ನು 5 ಲಕ್ಷ ರೂ.ಗೆ  ಹೆಚ್ಚಿಸಲಾಗಿದೆ, ಹಾಗಾಗಿ ಇನ್ನಷ್ಟು ವೈಯಕ್ತಿಕ ಕಾಮಗಾರಿಗಳನ್ನು  ಕೈಗೊಂಡು ಆರ್ಥಿಕವಾಗಿ ಸದೃಢಗೊಳ್ಳುವಂತೆ ಫಲಾನುಭವಿಗೆ ತಿಳಿಸಿದರು.
ಈ ವೇಳೆ ನರೇಗಾ ಸಹಾಯಕ ನಿರ್ದೇಶಕರಾದ ಶಿವಕುಮಾರ್,  ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಲಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು,  ಪಂಚಾಯತ್ ರಾಜ್  ಸಹಾಯಕ ನಿರ್ದೇಶಕರಾದ ವಿವೇಕ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರದೀಪ್ ಕುಮಾರ್, ಸೇರಿದಂತೆ ಇತರರು ಹಾಜರಿದ್ದರು.
ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

6 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

6 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

6 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

6 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

6 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

6 hours ago