ಮೈಸೂರು: ಸ್ವ-ಸಹಾಯ ಸಂಘದ ಸದಸ್ಯರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಬಲರಾಗಲು ಸಂಜೀವಿನಿ ಕಾರ್ಯಕ್ರಮಗಳಾದ ಸುತ್ತು ನಿಧಿ, ಸಮುದಾಯ ಬಂಡವಾಳ ನಿಧಿ ಹಾಗೂ ಸರ್ಕಾರದ ಆರ್ಥಿಕ ನೆರವು ಕಾರ್ಯಕ್ರಮಗಳು ಅತ್ಯಂತ ಪ್ರಮುಖ ಪಾತ್ರ ವಹಿಸಿವೆ ಎಂದು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತೆ ಡಾ. ಅರುಂಧತಿ ಚಂದ್ರಶೇಖರ್ ತಿಳಿಸಿದರು.
ಶುಕ್ರವಾರ ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ “ದೀಪ ಸಂಜೀವಿನಿ” ಕಾರ್ಯಕ್ರಮವನ್ನು ಉದ್ಟಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಒಟ್ಟು 16,407 ಸ್ವ-ಸಹಾಯ ಸ್ತ್ರೀ ಶಕ್ತಿ ಸಂಘಗಳಿದ್ದು, ಸುಮಾರು 2,02,696 ಸದಸ್ಯರಿರುತ್ತಾರೆ. ಸ್ವ-ಸಹಾಯ ಸಂಘದ ಮಹಿಳೆಯರು ಈವರೆಗೆ ಸುಮಾರು 239 ಕೋಟಿ ಆರ್ಥಿಕ ಚಟುವಟಿಕೆ ಮಾಡಿರುವುದು ತುಂಬಾ ಸಂತೋಷದ ವಿಷಯ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ ಗಾಯತ್ರಿ ಮಾತನಾಡಿ, ಜಿಲ್ಲೆಯಲ್ಲಿ ಇರುವ ಸ್ತ್ರೀ ಶಕ್ತಿ ಸ್ವ-ಸಹಾಯ ಸಂಘಗಳ ಮೂಲಕ ಕರಕುಶಲ ಕಲೆ ಬಳಸಿ ದೀಪಗಳನ್ನು ತಯಾರು ಮಾಡಿ ಮಾರಾಟ ಮಾಡಲಾಗುತ್ತಿದೆ. ದೀಪಾವಳಿ ಹಬ್ಬದಲ್ಲಿ ಪಟಾಕಿ ಹಚ್ಚಿ ಆಚರಿಸುವ ಬದಲು ದೀಪ ಹಚ್ಚಿ ಆಚರಿಸಬೇಕು. ಪಟಾಕಿಗಳು ಪರಸರಕ್ಕೇ ಹಾನಿಕಾರಕ ಹಾಗೂ ಶಬ್ದ ಮಾಲಿನ್ಯ ಉಂಟು ಮಾಡುತ್ತದೆ. ಇದರ ಬದಲು ದೀಪವನ್ನು ಹಚ್ಚಿ ಆಚರಿಸಬೇಕು ಎಂದು ಹೇಳಿದರು.
ದೀಪಾವಳಿ ಹಬ್ಬದ ಅಂಗವಾಗಿ ಇಂದಿನಿಂದ ಒಂದು ವಾರಗಳ ಕಾಲ ದೀಪ ಸಂಜೀವಿನಿ ಕಾರ್ಯಕ್ರಮವನ್ನು ಆಯೋಜಿಸಿ ಸ್ವ-ಸಹಾಯ ಸಂಘದ ಸದಸ್ಯರ ಆರ್ಥಿಕ ಚಟುವಟಿಕೆಗೆ ಒತ್ತು ನೀಡಿ ಸಾರ್ವಜನಿಕರಿಗೆ ಅರಿವು ಉಂಟು ಮಾಡಿರುವುದು ತುಂಬಾ ಸಂತೋಷದ ಸಂಗತಿ ಎಂದು ಹೇಳಿದರು.
ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಕೌಶಲ್ಯಾಭಿವೃದ್ದಿ, ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಜಿಲ್ಲಾ ಪಂಚಾಯತ್ ಅವರ ಸಹಯೋಗದೊಂದಿಗೆ “ದೀಪ ಸಂಜೀವಿನಿ” ಕಾರ್ಯಕ್ರಮವನ್ನು ಇಂದಿನಿಂದ ಒಂದು ವಾರಗಳ ಕಾಲ ಜಿಲ್ಲಾ ಪಂಚಾಯತ್ ನಲ್ಲಿ ಆಯೋಜಿಸಲಾಗಿದ್ದು, ಸದರಿ ಮಳಿಗೆಗಳನ್ನು ಕೆ ಎಂ ಗಾಯತ್ರಿ ಹಾಗೂ ಕಾರ್ಮಿಕ ಇಲಾಖೆಯ ಆಯುಕ್ತ ಡಾ.ಎಚ್.ಎನ್ ಗೋಪಾಲಕೃಷ್ಣ ವೀಕ್ಷಿಸಿದರು.
ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…
ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…
ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…
ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…