ಮೈಸೂರು

ಮಹಿಳೆಯರು ಸಬಲರಾಗಲು ಸಂಜೀವಿನಿ ಪಾತ್ರ ಮಹತ್ವದ್ದು: ಡಾ. ಅರುಂಧತಿ ಚಂದ್ರಶೇಖರ್

ಮೈಸೂರು: ಸ್ವ-ಸಹಾಯ ಸಂಘದ ಸದಸ್ಯರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಬಲರಾಗಲು ಸಂಜೀವಿನಿ ಕಾರ್ಯಕ್ರಮಗಳಾದ ಸುತ್ತು ನಿಧಿ, ಸಮುದಾಯ ಬಂಡವಾಳ ನಿಧಿ ಹಾಗೂ ಸರ್ಕಾರದ ಆರ್ಥಿಕ ನೆರವು ಕಾರ್ಯಕ್ರಮಗಳು ಅತ್ಯಂತ ಪ್ರಮುಖ ಪಾತ್ರ ವಹಿಸಿವೆ ಎಂದು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತೆ ಡಾ. ಅರುಂಧತಿ ಚಂದ್ರಶೇಖರ್ ತಿಳಿಸಿದರು.

ಶುಕ್ರವಾರ  ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ  ಹಮ್ಮಿಕೊಂಡಿದ್ದ “ದೀಪ ಸಂಜೀವಿನಿ” ಕಾರ್ಯಕ್ರಮವನ್ನು ಉದ್ಟಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು 16,407 ಸ್ವ-ಸಹಾಯ ಸ್ತ್ರೀ ಶಕ್ತಿ ಸಂಘಗಳಿದ್ದು, ಸುಮಾರು 2,02,696 ಸದಸ್ಯರಿರುತ್ತಾರೆ. ಸ್ವ-ಸಹಾಯ ಸಂಘದ ಮಹಿಳೆಯರು ಈವರೆಗೆ ಸುಮಾರು 239 ಕೋಟಿ ಆರ್ಥಿಕ ಚಟುವಟಿಕೆ ಮಾಡಿರುವುದು ತುಂಬಾ ಸಂತೋಷದ ವಿಷಯ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ ಗಾಯತ್ರಿ ಮಾತನಾಡಿ, ಜಿಲ್ಲೆಯಲ್ಲಿ ಇರುವ ಸ್ತ್ರೀ ಶಕ್ತಿ ಸ್ವ-ಸಹಾಯ ಸಂಘಗಳ ಮೂಲಕ ಕರಕುಶಲ ಕಲೆ ಬಳಸಿ ದೀಪಗಳನ್ನು ತಯಾರು ಮಾಡಿ ಮಾರಾಟ ಮಾಡಲಾಗುತ್ತಿದೆ. ದೀಪಾವಳಿ ಹಬ್ಬದಲ್ಲಿ ಪಟಾಕಿ ಹಚ್ಚಿ ಆಚರಿಸುವ ಬದಲು ದೀಪ ಹಚ್ಚಿ ಆಚರಿಸಬೇಕು. ಪಟಾಕಿಗಳು ಪರಸರಕ್ಕೇ ಹಾನಿಕಾರಕ ಹಾಗೂ ಶಬ್ದ ಮಾಲಿನ್ಯ ಉಂಟು ಮಾಡುತ್ತದೆ. ಇದರ ಬದಲು ದೀಪವನ್ನು ಹಚ್ಚಿ ಆಚರಿಸಬೇಕು ಎಂದು ಹೇಳಿದರು.

ದೀಪಾವಳಿ ಹಬ್ಬದ ಅಂಗವಾಗಿ ಇಂದಿನಿಂದ ಒಂದು ವಾರಗಳ ಕಾಲ ದೀಪ ಸಂಜೀವಿನಿ ಕಾರ್ಯಕ್ರಮವನ್ನು ಆಯೋಜಿಸಿ ಸ್ವ-ಸಹಾಯ ಸಂಘದ ಸದಸ್ಯರ ಆರ್ಥಿಕ ಚಟುವಟಿಕೆಗೆ ಒತ್ತು ನೀಡಿ ಸಾರ್ವಜನಿಕರಿಗೆ ಅರಿವು ಉಂಟು ಮಾಡಿರುವುದು ತುಂಬಾ ಸಂತೋಷದ ಸಂಗತಿ ಎಂದು ಹೇಳಿದರು.

ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಕೌಶಲ್ಯಾಭಿವೃದ್ದಿ, ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಜಿಲ್ಲಾ ಪಂಚಾಯತ್ ಅವರ ಸಹಯೋಗದೊಂದಿಗೆ “ದೀಪ ಸಂಜೀವಿನಿ” ಕಾರ್ಯಕ್ರಮವನ್ನು ಇಂದಿನಿಂದ ಒಂದು ವಾರಗಳ ಕಾಲ ಜಿಲ್ಲಾ ಪಂಚಾಯತ್ ನಲ್ಲಿ ಆಯೋಜಿಸಲಾಗಿದ್ದು, ಸದರಿ ಮಳಿಗೆಗಳನ್ನು ಕೆ ಎಂ ಗಾಯತ್ರಿ ಹಾಗೂ ಕಾರ್ಮಿಕ ಇಲಾಖೆಯ ಆಯುಕ್ತ ಡಾ.ಎಚ್.ಎನ್‌ ಗೋಪಾಲಕೃಷ್ಣ ವೀಕ್ಷಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

4 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

7 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

7 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

8 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

9 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

9 hours ago