ಮೈಸೂರು

ಸಂಕ್ರಾಂತಿ ಸಂಭ್ರಮ | ನಾಡಿನ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ, ಖರ್ಗೆ, ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಡಗರ ಮನೆ ಮಾಡಿದೆ. ಹೊಸ ವರ್ಷದ ಮೊದಲ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಗಣ್ಯರು ನಾಡಿನ ಜನತೆಗೆ ಶುಭ ಕೋರಿದ್ದಾರೆ.

ಪ್ರಧಾನಿ ಮೋದಿ ಅವರು ರಾಜ್ಯದ (ಕರ್ನಾಟಕ) ಜನತೆಗೆ ಮಕರ ಸಂಕ್ರಾತಿಯ ಶುಭಾಶಯ ಕೋರಿದ್ದಾರೆ. ಕನ್ನಡದಲ್ಲಿ ಪತ್ರ ಬರೆದು ಶುಭ ಹಾರೈಸಿರುವುದು ವಿಶೇಷ. ಪತ್ರವನ್ನು ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ?
‘ಸಂಕ್ರಾಂತಿಯ ಈ ಶುಭ ಸಂದರ್ಭದಲ್ಲಿ, ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತೇನೆ. ಸೂರ್ಯನ ಪಥ ಬದಲಾವಣೆಯ ಹೊಸ ಆರಂಭವನ್ನು ಸೂಚಿಸುವ ಸಂಕ್ರಾಂತಿಯು ಭರವಸೆ ಮತ್ತು ಸಕಾರಾತ್ಮಕತೆಯ ಸಂಕೇತವಾಗಿದೆ. ದೇಶದಾದ್ಯಂತ ವಿವಿಧ ರೂಪಗಳಲ್ಲಿ, ಆದರೆ ಅಷ್ಟೇ ಉತ್ಸಾಹದಿಂದ ಆಚರಿಸಲಾಗುವ ಈ ಹಬ್ಬವು ನಮ್ಮ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುತ್ತದೆ ಮತ್ತು ನಮ್ಮನ್ನೆಲ್ಲ ಒಟ್ಟಾಗಿ ಬೆಸೆಯುವ ಒಗ್ಗಟ್ಟಿನ ಭಾವನೆಯನ್ನು ನೆನಪಿಸುತ್ತದೆ’ ಎಂದಿದ್ದಾರೆ.

ಈ ಹಬ್ಬವು ನಮ್ಮ ರೈತರು ಮತ್ತು ಅವರ ಕುಟುಂಬಗಳ ಜೀವನದಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ. ಇದು ನಮ್ಮ ಅನ್ನದಾತರಿಗೆ ಕೃತಜ್ಞತೆಯನ್ನು ಸಲ್ಲಿಸುವ ಮತ್ತು ಆ ಮೂಲಕ ನಮ್ಮ ಸಮಾಜವನ್ನು ಬಲಪಡಿಸುವ ಸಂದರ್ಭವಾಗಿದೆ.

ಸಂಕ್ರಾಂತಿಯು ನಮ್ಮನ್ನು ಆತ್ಮವಿಶ್ವಾಸ ಮತ್ತು ಅಶಾವಾದದೊಂದಿಗೆ ಮುನ್ನಡೆಯಲು ಪ್ರೋತ್ಸಾಹಿಸುತ್ತದೆ. ನಿಮ್ಮ ಮುಂದಿನ ದಿನಗಳು ಯಾವಾಗಲೂ ಸಮೃದ್ಧಿ, ಸಕಾರಾತ್ಮಕತೆ ಮತ್ತು ಉತ್ತಮ ಆರೋಗ್ಯದಿಂದ ಕೂಡಿರಲಿ. ನಿಮ್ಮ ಮನೆಯಲ್ಲಿ ಸಂತೋಷ ನೆಲೆಸಲಿ, ನಿಮ್ಮೆಲ್ಲಾ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿ ಮತ್ತು ಸಮಾಜದಲ್ಲಿ ಸಾಮರಸ್ಯ ಮೂಡಲಿ’ ಎಂದೂ ಅವರು ಆಶಿಸಿದ್ದಾರೆ.

ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ‘ಮಾಘಿ, ಬಿಹು’ ಎಂದು ಕರೆಯಲಾಗುವ, ಸಾರ್ವತ್ರಿಕವಾಗಿ ಮಕರ ಸಂಕ್ರಾಂತಿ ಎಂದು ಕರೆಯಲಾಗುವ ಹಬ್ಬಕ್ಕೂ ಮೋದಿ ಪ್ರತ್ಯೇಕ ಪೋಸ್ಟ್‌ಗಳ ಮೂಲಕ ಶುಭ ಕೋರಿದ್ದಾರೆ.

‘ಮಕರ ಸಂಕ್ರಾಂತಿ, ಪೊಂಗಲ್, ಸುಗ್ಗಿ ಹಬ್ಬ, ಮಾಘಿ, ಭೋಗಿ, ಬಿಹು, ಖಿಚಡಿ, ಪೌಷ್ ಪರ್ವ, ಉತ್ತರಾಯಣ ಮತ್ತು ಮಕರವಿಳಕ್ಕು ಹಬ್ಬಗಳು ಪ್ರತಿಯೊಬ್ಬರ ಜೀವನದಲ್ಲಿ ಅಪರಿಮಿತ ಸಂತೋಷ ಮತ್ತು ಅನಿಯಂತ್ರಿತ ಸಮೃದ್ಧಿಯನ್ನು ತರಲಿ. ಎಲ್ಲರಿಗೂ ಹಬ್ಬದ ಶುಭಾಶಯಗಳು’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸಹ ನಾಡಿದ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

9 hours ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

10 hours ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

10 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

10 hours ago