ಬೆಂಗಳೂರು : ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಡಗರ ಮನೆ ಮಾಡಿದೆ. ಹೊಸ ವರ್ಷದ ಮೊದಲ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಗಣ್ಯರು ನಾಡಿನ ಜನತೆಗೆ ಶುಭ ಕೋರಿದ್ದಾರೆ.
ಪ್ರಧಾನಿ ಮೋದಿ ಅವರು ರಾಜ್ಯದ (ಕರ್ನಾಟಕ) ಜನತೆಗೆ ಮಕರ ಸಂಕ್ರಾತಿಯ ಶುಭಾಶಯ ಕೋರಿದ್ದಾರೆ. ಕನ್ನಡದಲ್ಲಿ ಪತ್ರ ಬರೆದು ಶುಭ ಹಾರೈಸಿರುವುದು ವಿಶೇಷ. ಪತ್ರವನ್ನು ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪತ್ರದಲ್ಲಿ ಏನಿದೆ?
‘ಸಂಕ್ರಾಂತಿಯ ಈ ಶುಭ ಸಂದರ್ಭದಲ್ಲಿ, ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತೇನೆ. ಸೂರ್ಯನ ಪಥ ಬದಲಾವಣೆಯ ಹೊಸ ಆರಂಭವನ್ನು ಸೂಚಿಸುವ ಸಂಕ್ರಾಂತಿಯು ಭರವಸೆ ಮತ್ತು ಸಕಾರಾತ್ಮಕತೆಯ ಸಂಕೇತವಾಗಿದೆ. ದೇಶದಾದ್ಯಂತ ವಿವಿಧ ರೂಪಗಳಲ್ಲಿ, ಆದರೆ ಅಷ್ಟೇ ಉತ್ಸಾಹದಿಂದ ಆಚರಿಸಲಾಗುವ ಈ ಹಬ್ಬವು ನಮ್ಮ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುತ್ತದೆ ಮತ್ತು ನಮ್ಮನ್ನೆಲ್ಲ ಒಟ್ಟಾಗಿ ಬೆಸೆಯುವ ಒಗ್ಗಟ್ಟಿನ ಭಾವನೆಯನ್ನು ನೆನಪಿಸುತ್ತದೆ’ ಎಂದಿದ್ದಾರೆ.
ಈ ಹಬ್ಬವು ನಮ್ಮ ರೈತರು ಮತ್ತು ಅವರ ಕುಟುಂಬಗಳ ಜೀವನದಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ. ಇದು ನಮ್ಮ ಅನ್ನದಾತರಿಗೆ ಕೃತಜ್ಞತೆಯನ್ನು ಸಲ್ಲಿಸುವ ಮತ್ತು ಆ ಮೂಲಕ ನಮ್ಮ ಸಮಾಜವನ್ನು ಬಲಪಡಿಸುವ ಸಂದರ್ಭವಾಗಿದೆ.
ಸಂಕ್ರಾಂತಿಯು ನಮ್ಮನ್ನು ಆತ್ಮವಿಶ್ವಾಸ ಮತ್ತು ಅಶಾವಾದದೊಂದಿಗೆ ಮುನ್ನಡೆಯಲು ಪ್ರೋತ್ಸಾಹಿಸುತ್ತದೆ. ನಿಮ್ಮ ಮುಂದಿನ ದಿನಗಳು ಯಾವಾಗಲೂ ಸಮೃದ್ಧಿ, ಸಕಾರಾತ್ಮಕತೆ ಮತ್ತು ಉತ್ತಮ ಆರೋಗ್ಯದಿಂದ ಕೂಡಿರಲಿ. ನಿಮ್ಮ ಮನೆಯಲ್ಲಿ ಸಂತೋಷ ನೆಲೆಸಲಿ, ನಿಮ್ಮೆಲ್ಲಾ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿ ಮತ್ತು ಸಮಾಜದಲ್ಲಿ ಸಾಮರಸ್ಯ ಮೂಡಲಿ’ ಎಂದೂ ಅವರು ಆಶಿಸಿದ್ದಾರೆ.
ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ‘ಮಾಘಿ, ಬಿಹು’ ಎಂದು ಕರೆಯಲಾಗುವ, ಸಾರ್ವತ್ರಿಕವಾಗಿ ಮಕರ ಸಂಕ್ರಾಂತಿ ಎಂದು ಕರೆಯಲಾಗುವ ಹಬ್ಬಕ್ಕೂ ಮೋದಿ ಪ್ರತ್ಯೇಕ ಪೋಸ್ಟ್ಗಳ ಮೂಲಕ ಶುಭ ಕೋರಿದ್ದಾರೆ.
‘ಮಕರ ಸಂಕ್ರಾಂತಿ, ಪೊಂಗಲ್, ಸುಗ್ಗಿ ಹಬ್ಬ, ಮಾಘಿ, ಭೋಗಿ, ಬಿಹು, ಖಿಚಡಿ, ಪೌಷ್ ಪರ್ವ, ಉತ್ತರಾಯಣ ಮತ್ತು ಮಕರವಿಳಕ್ಕು ಹಬ್ಬಗಳು ಪ್ರತಿಯೊಬ್ಬರ ಜೀವನದಲ್ಲಿ ಅಪರಿಮಿತ ಸಂತೋಷ ಮತ್ತು ಅನಿಯಂತ್ರಿತ ಸಮೃದ್ಧಿಯನ್ನು ತರಲಿ. ಎಲ್ಲರಿಗೂ ಹಬ್ಬದ ಶುಭಾಶಯಗಳು’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಹ ನಾಡಿದ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…