ಮೈಸೂರು : ಮುಂದಿನ ವಾರ ಸಂಕ್ರಾಂತಿ/ಪೊಂಗಲ್ ಹಬ್ಬದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಹೆಚ್ಚು ಜನರು ಪ್ರಯಾಣಿಸುವುದರಿಂದ ಅವರಿಗೆ ಸೌಲಭ್ಯ ಕಲ್ಪಿಸಲು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮುಂದಾಗಿದ್ದಾರೆ.
ಸಂಕ್ರಾಂತಿ / ಪೊಂಗಲ್ ಹಬ್ಬದ ಸಂದರ್ಭದಲ್ಲಿ ತಮಿಳುನಾಡಿಗೆ ಪ್ರಯಾಣಿಸುವ ಪ್ರಯಾಣಿಕರಿಗಾಗಿ ವಿಶೇಷ ರೈಲು ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸದ ಯದುವೀರ್ ಒಡೆಯರ್ ಮಾಹಿತಿ ನೀಡಿದ್ದಾರೆ.
ನೈರುತ್ಯ ರೈಲ್ವೆ ವತಿಯಿಂದ ಮೈಸೂರು ಮತ್ತು ಟ್ಯುಟಿಕಾರನ್ ನಡುವೆ ಎರಡು ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ವಿಶೇಷ ರೈಲುಗಳ ವಿವರ
06283 ಮೈಸೂರು– ಟ್ಯುಟಿಕಾರನ್ ಎಕ್ಸ್ಪ್ರೆಸ್ ವಿಶೇಷ ರೈಲುಗಳು ಇದೇ 9 ಮತ್ತು 13 ರಂದು (ಶುಕ್ರವಾರ ಮತ್ತು ಮಂಗಳವಾರ) ರಂದು ಮೈಸೂರಿನಿಂದ ಸಂಜೆ 18:35 ಗಂಟೆಗೆ ಹೊರಡಲಿದ್ದು, ಮರುದಿನ ಬೆಳಗ್ಗೆ 11:00 ಗಂಟೆಗೆ ಟ್ಯುಟಿಕಾರನ್ ತಲುಪಲಿದೆ ಎಂದು ಸಂಸದರು ವಿವರಿಸಿದ್ದಾರೆ.
06284 ಟ್ಯುಟಿಕಾರನ್ –ಮೈಸೂರು ಎಕ್ಸ್ಪ್ರೆಸ್ ವಿಶೇಷ ರೈಲು 10 ಮತ್ತು 14ರಂದು (ಶನಿವಾರ ಮತ್ತು ಬುಧವಾರ) ರಂದು ಟ್ಯುಟಿಕಾರನ್ನಿಂದ ಮಧ್ಯಾಹ್ನ 2 ಗಂಟೆಗೆ ಹೊರಡಲಿದ್ದು, ಮರುದಿನ ಬೆಳಗ್ಗೆ 07:45 ಗಂಟೆಗೆ ಮೈಸೂರು ತಲುಪಲಿದೆ ಎಂದು ಹೇಳಿದ್ದಾರೆ.
ಎಲ್ಲೆಲ್ಲಿ ನಿಲುಗಡೆ
ಈ ರೈಲುಗಳು ಮಂಡ್ಯ, ಮದ್ದೂರು, ಚನ್ನಪಟ್ಟಣ, ರಾಮನಗರಂ, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಬೆಂಗಳೂರು ಕಂಟೋನ್ಮೆಂಟ್, ಹೊಸೂರು, ಧರ್ಮಪುರಿ, ಸೇಲಂ ಜಂಕ್ಷನ್, ನಾಮಕ್ಕಲ್, ಕರೂರು ಜಂಕ್ಷನ್, ದಿಂಡಿಗಲ್ ಜಂಕ್ಷನ್, ಮದುರೈ ಜಂಕ್ಷನ್, ವಿರುದ್ಧ್ನಗರ ಜಂಕ್ಷನ್, ಸತೂರು, ಕೋವಿಲ್ಪಟ್ಟಿ ಮತ್ತು ಟುಟಿಮೇಲೂರ್ ನಿಲ್ದಾಣಗಳಲ್ಲಿ ಸ್ಟಾಪ್ ಕೊಡಲಿದೆ. ಈ ವಿಶೇಷ ರೈಲು ಒಟ್ಟು 19 ಕೋಚ್ಗಳನ್ನು ಹೊಂದಿದ್ದು, ಎಸಿ ಟು ಟೈಯರ್ – 03, ಎಸಿ ತ್ರಿ ಟೈಯರ್ – 06, ಸ್ಲೀಪರ್ ಕ್ಲಾಸ್ – 08, ಎಸ್ಎಲ್ಆರ್/ಡಿ – 02 ಬೋಗಿಗಳು ಇವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…