ಮೈಸೂರು : ಮುಂದಿನ ವಾರ ಸಂಕ್ರಾಂತಿ/ಪೊಂಗಲ್ ಹಬ್ಬದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಹೆಚ್ಚು ಜನರು ಪ್ರಯಾಣಿಸುವುದರಿಂದ ಅವರಿಗೆ ಸೌಲಭ್ಯ ಕಲ್ಪಿಸಲು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮುಂದಾಗಿದ್ದಾರೆ.
ಸಂಕ್ರಾಂತಿ / ಪೊಂಗಲ್ ಹಬ್ಬದ ಸಂದರ್ಭದಲ್ಲಿ ತಮಿಳುನಾಡಿಗೆ ಪ್ರಯಾಣಿಸುವ ಪ್ರಯಾಣಿಕರಿಗಾಗಿ ವಿಶೇಷ ರೈಲು ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸದ ಯದುವೀರ್ ಒಡೆಯರ್ ಮಾಹಿತಿ ನೀಡಿದ್ದಾರೆ.
ನೈರುತ್ಯ ರೈಲ್ವೆ ವತಿಯಿಂದ ಮೈಸೂರು ಮತ್ತು ಟ್ಯುಟಿಕಾರನ್ ನಡುವೆ ಎರಡು ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ವಿಶೇಷ ರೈಲುಗಳ ವಿವರ
06283 ಮೈಸೂರು– ಟ್ಯುಟಿಕಾರನ್ ಎಕ್ಸ್ಪ್ರೆಸ್ ವಿಶೇಷ ರೈಲುಗಳು ಇದೇ 9 ಮತ್ತು 13 ರಂದು (ಶುಕ್ರವಾರ ಮತ್ತು ಮಂಗಳವಾರ) ರಂದು ಮೈಸೂರಿನಿಂದ ಸಂಜೆ 18:35 ಗಂಟೆಗೆ ಹೊರಡಲಿದ್ದು, ಮರುದಿನ ಬೆಳಗ್ಗೆ 11:00 ಗಂಟೆಗೆ ಟ್ಯುಟಿಕಾರನ್ ತಲುಪಲಿದೆ ಎಂದು ಸಂಸದರು ವಿವರಿಸಿದ್ದಾರೆ.
06284 ಟ್ಯುಟಿಕಾರನ್ –ಮೈಸೂರು ಎಕ್ಸ್ಪ್ರೆಸ್ ವಿಶೇಷ ರೈಲು 10 ಮತ್ತು 14ರಂದು (ಶನಿವಾರ ಮತ್ತು ಬುಧವಾರ) ರಂದು ಟ್ಯುಟಿಕಾರನ್ನಿಂದ ಮಧ್ಯಾಹ್ನ 2 ಗಂಟೆಗೆ ಹೊರಡಲಿದ್ದು, ಮರುದಿನ ಬೆಳಗ್ಗೆ 07:45 ಗಂಟೆಗೆ ಮೈಸೂರು ತಲುಪಲಿದೆ ಎಂದು ಹೇಳಿದ್ದಾರೆ.
ಎಲ್ಲೆಲ್ಲಿ ನಿಲುಗಡೆ
ಈ ರೈಲುಗಳು ಮಂಡ್ಯ, ಮದ್ದೂರು, ಚನ್ನಪಟ್ಟಣ, ರಾಮನಗರಂ, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಬೆಂಗಳೂರು ಕಂಟೋನ್ಮೆಂಟ್, ಹೊಸೂರು, ಧರ್ಮಪುರಿ, ಸೇಲಂ ಜಂಕ್ಷನ್, ನಾಮಕ್ಕಲ್, ಕರೂರು ಜಂಕ್ಷನ್, ದಿಂಡಿಗಲ್ ಜಂಕ್ಷನ್, ಮದುರೈ ಜಂಕ್ಷನ್, ವಿರುದ್ಧ್ನಗರ ಜಂಕ್ಷನ್, ಸತೂರು, ಕೋವಿಲ್ಪಟ್ಟಿ ಮತ್ತು ಟುಟಿಮೇಲೂರ್ ನಿಲ್ದಾಣಗಳಲ್ಲಿ ಸ್ಟಾಪ್ ಕೊಡಲಿದೆ. ಈ ವಿಶೇಷ ರೈಲು ಒಟ್ಟು 19 ಕೋಚ್ಗಳನ್ನು ಹೊಂದಿದ್ದು, ಎಸಿ ಟು ಟೈಯರ್ – 03, ಎಸಿ ತ್ರಿ ಟೈಯರ್ – 06, ಸ್ಲೀಪರ್ ಕ್ಲಾಸ್ – 08, ಎಸ್ಎಲ್ಆರ್/ಡಿ – 02 ಬೋಗಿಗಳು ಇವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…