ಮೈಸೂರು

ಸಂಕ್ರಾಂತಿ ವಿಶೇಷ : ಮೈಸೂರು – ಟ್ಯುಟಿಕಾರನ್‌ ನಡುವೆ ವಿಶೇಷ ರೈಲು

ಮೈಸೂರು : ಮುಂದಿನ ವಾರ ಸಂಕ್ರಾಂತಿ/ಪೊಂಗಲ್‌ ಹಬ್ಬದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಹೆಚ್ಚು ಜನರು ಪ್ರಯಾಣಿಸುವುದರಿಂದ ಅವರಿಗೆ ಸೌಲಭ್ಯ ಕಲ್ಪಿಸಲು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮುಂದಾಗಿದ್ದಾರೆ.

ಸಂಕ್ರಾಂತಿ / ಪೊಂಗಲ್ ಹಬ್ಬದ ಸಂದರ್ಭದಲ್ಲಿ ತಮಿಳುನಾಡಿಗೆ ಪ್ರಯಾಣಿಸುವ ಪ್ರಯಾಣಿಕರಿಗಾಗಿ ವಿಶೇಷ ರೈಲು ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸದ ಯದುವೀರ್‌ ಒಡೆಯರ್‌ ಮಾಹಿತಿ ನೀಡಿದ್ದಾರೆ.

ನೈರುತ್ಯ ರೈಲ್ವೆ ವತಿಯಿಂದ ಮೈಸೂರು ಮತ್ತು ಟ್ಯುಟಿಕಾರನ್‌ ನಡುವೆ ಎರಡು ವಿಶೇಷ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ವಿಶೇಷ ರೈಲುಗಳ ವಿವರ
06283 ಮೈಸೂರು– ಟ್ಯುಟಿಕಾರನ್‌ ಎಕ್ಸ್‌ಪ್ರೆಸ್‌ ವಿಶೇಷ ರೈಲುಗಳು ಇದೇ 9 ಮತ್ತು 13 ರಂದು (ಶುಕ್ರವಾರ ಮತ್ತು ಮಂಗಳವಾರ) ರಂದು ಮೈಸೂರಿನಿಂದ ಸಂಜೆ 18:35 ಗಂಟೆಗೆ ಹೊರಡಲಿದ್ದು, ಮರುದಿನ ಬೆಳಗ್ಗೆ 11:00 ಗಂಟೆಗೆ ಟ್ಯುಟಿಕಾರನ್‌ ತಲುಪಲಿದೆ ಎಂದು ಸಂಸದರು ವಿವರಿಸಿದ್ದಾರೆ.

06284 ಟ್ಯುಟಿಕಾರನ್‌ –ಮೈಸೂರು ಎಕ್ಸ್‌ಪ್ರೆಸ್‌ ವಿಶೇಷ ರೈಲು 10 ಮತ್ತು 14ರಂದು (ಶನಿವಾರ ಮತ್ತು ಬುಧವಾರ) ರಂದು ಟ್ಯುಟಿಕಾರನ್‌ನಿಂದ ಮಧ್ಯಾಹ್ನ 2 ಗಂಟೆಗೆ ಹೊರಡಲಿದ್ದು, ಮರುದಿನ ಬೆಳಗ್ಗೆ 07:45 ಗಂಟೆಗೆ ಮೈಸೂರು ತಲುಪಲಿದೆ ಎಂದು ಹೇಳಿದ್ದಾರೆ.

ಎಲ್ಲೆಲ್ಲಿ ನಿಲುಗಡೆ
ಈ ರೈಲುಗಳು ಮಂಡ್ಯ, ಮದ್ದೂರು, ಚನ್ನಪಟ್ಟಣ, ರಾಮನಗರಂ, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಬೆಂಗಳೂರು ಕಂಟೋನ್ಮೆಂಟ್, ಹೊಸೂರು, ಧರ್ಮಪುರಿ, ಸೇಲಂ ಜಂಕ್ಷನ್, ನಾಮಕ್ಕಲ್, ಕರೂರು ಜಂಕ್ಷನ್, ದಿಂಡಿಗಲ್ ಜಂಕ್ಷನ್, ಮದುರೈ ಜಂಕ್ಷನ್, ವಿರುದ್ಧ್‌ನಗರ ಜಂಕ್ಷನ್, ಸತೂರು, ಕೋವಿಲ್‌ಪಟ್ಟಿ ಮತ್ತು ಟುಟಿಮೇಲೂರ್ ನಿಲ್ದಾಣಗಳಲ್ಲಿ ಸ್ಟಾಪ್‌ ಕೊಡಲಿದೆ. ಈ ವಿಶೇಷ ರೈಲು ಒಟ್ಟು 19 ಕೋಚ್‌ಗಳನ್ನು ಹೊಂದಿದ್ದು, ಎಸಿ ಟು ಟೈಯರ್ – 03, ಎಸಿ ತ್ರಿ ಟೈಯರ್ – 06, ಸ್ಲೀಪರ್ ಕ್ಲಾಸ್ – 08, ಎಸ್ಎಲ್ಆರ್/ಡಿ – 02 ಬೋಗಿಗಳು ಇವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

58 mins ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

1 hour ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

16 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

17 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

17 hours ago