ಸರಗೂರು: ಸರಗೂರು ಪಟ್ಟಣ ವ್ಯಾಪ್ತಿಯ ೧೧ನೇ ವಾರ್ಡಿನ ಬಿಡುಗಲಿನ ರೈತ ರಾಜಶೇಖರ ಎಂಬವರಿಗೆ ಸೇರಿದ ಜರ್ಸಿ ತಳಿಯ ಹಸು ಜಮೀನಿನಲ್ಲಿ ಮೇವು ಮೇಯ್ದು ಹೊಳೆಯಲ್ಲಿ ನೀರು ಕುಡಿಯಲು ಹೋಗಿದ್ದ ವೇಳೆ ಹುಲಿ ದಾಳಿಗೆ ತುತ್ತಾಗಿ ಮೃತಪಟ್ಟಿರುವ ಘಟನೆ ನಡೆದಿದೆ.
ಇದರ ಅಂದಾಜು ಬೆಲೆ ೬೦ ಸಾವಿರ ರೂ.ಗಳಾಗಿದೆ ಎಂದು ಮಾಲೀಕ ರಾಜಶೇಖರ್ ತಿಳಿಸಿದ್ದಾರೆ. ಸ್ಥಳಕ್ಕೆ ಡಿ ಆರ್ಎಫ್ ಹೆಚ್.ಎಸ್.ಅಭಿಲಾಷ್, ಗುಮಾಸ್ತ ಭುವನೇಶ್ ಕುಮಾರ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಹಸುವಿನ ಮಾಲೀಕರಿಗೆ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.
ಈ ವೇಳೆ ಬಾಲು ಎಂಬವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಹುಲಿ, ಚಿರತೆಗಳ ಕಾಟ ಹೆಚ್ಚಾಗಿದೆ. ದನ ಕರುಗಳು ಬಲಿಯಾಗುತ್ತಿವೆ ಎಂದು ದೂರಿದರು.
ಹುಲಿಯೊಂದು ಅಗತ್ತೂರು, ಸಾಗರೆ, ಮಾಗುಡಿಲು ಮಾರ್ಗದಲ್ಲಿ ಸಂಚರಿಸುತ್ತಿದ್ದು, ಗದ್ದೆ ತೆವರಿನ ಮೇಲೆ ತಿರುಗಾಡಿರುವ ಹುಲಿ ಹೆಜ್ಜೆ ಗುರುತು ಕಾಣಿಸುತ್ತದೆ ಎಂದು ಆಗತ್ತೂರು ರಾಜಣ್ಣ ತಿಳಿಸಿದರು.
ಸಂಬಂಧಪಟ್ಟ ಅರಣ್ಯ ಅಽಕಾರಿಗಳು ಹಸುವಿನ ಮಾಲೀಕರಿಗೆ ಪರಿಹಾರ ನೀಡಬೇಕು. ಹುಲಿ ಸೆರೆಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.
ರವಿ, ಅಭಿ, ಬಿಳಿಯಯ್ಯ, ಬಿ.ಎಸ್.ಮಹೇಶ್, ಇನ್ನಿತರರು ಹಾಜರಿದ್ದರು.
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್ನಲ್ಲಿ…
ಬೆಳಗಾವಿ: ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ.…
ಮೈಸೂರಿನ ಕುವೆಂಪು ನಗರದ ಅಪೋಲೋ ಆಸ್ಪತ್ರೆಯ ಹಿಂಭಾಗ ದಲ್ಲಿರುವ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎದುರಿನ ದೊಡ್ಡಮೋರಿ ಯಿಂದ ತೆಗೆದ ಕಸವನ್ನು…
ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್ಸಿಆರ್ಬಿ)…
ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ…
ಕೇಂದ್ರ ಸರ್ಕಾರದಲ್ಲಿ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಡಿಸೆಂಬರ್ ೧೬ರಂದು…