ಮೈಸೂರು

ಸರಗೂರು | ಹುಲಿ ದಾಳಿಗೆ ಹಸು ಬಲಿ

ಸರಗೂರು: ಸರಗೂರು ಪಟ್ಟಣ ವ್ಯಾಪ್ತಿಯ ೧೧ನೇ ವಾರ್ಡಿನ ಬಿಡುಗಲಿನ ರೈತ ರಾಜಶೇಖರ ಎಂಬವರಿಗೆ ಸೇರಿದ ಜರ್ಸಿ ತಳಿಯ ಹಸು ಜಮೀನಿನಲ್ಲಿ ಮೇವು ಮೇಯ್ದು ಹೊಳೆಯಲ್ಲಿ ನೀರು ಕುಡಿಯಲು ಹೋಗಿದ್ದ ವೇಳೆ ಹುಲಿ ದಾಳಿಗೆ ತುತ್ತಾಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಇದರ ಅಂದಾಜು ಬೆಲೆ ೬೦ ಸಾವಿರ ರೂ.ಗಳಾಗಿದೆ ಎಂದು ಮಾಲೀಕ ರಾಜಶೇಖರ್ ತಿಳಿಸಿದ್ದಾರೆ. ಸ್ಥಳಕ್ಕೆ ಡಿ ಆರ್‌ಎಫ್ ಹೆಚ್.ಎಸ್.ಅಭಿಲಾಷ್, ಗುಮಾಸ್ತ ಭುವನೇಶ್ ಕುಮಾರ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಹಸುವಿನ ಮಾಲೀಕರಿಗೆ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.

ಈ ವೇಳೆ ಬಾಲು ಎಂಬವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಹುಲಿ, ಚಿರತೆಗಳ ಕಾಟ ಹೆಚ್ಚಾಗಿದೆ. ದನ ಕರುಗಳು ಬಲಿಯಾಗುತ್ತಿವೆ ಎಂದು ದೂರಿದರು.

ಹುಲಿಯೊಂದು ಅಗತ್ತೂರು, ಸಾಗರೆ, ಮಾಗುಡಿಲು ಮಾರ್ಗದಲ್ಲಿ ಸಂಚರಿಸುತ್ತಿದ್ದು, ಗದ್ದೆ ತೆವರಿನ ಮೇಲೆ ತಿರುಗಾಡಿರುವ ಹುಲಿ ಹೆಜ್ಜೆ ಗುರುತು ಕಾಣಿಸುತ್ತದೆ ಎಂದು ಆಗತ್ತೂರು ರಾಜಣ್ಣ ತಿಳಿಸಿದರು.

ಸಂಬಂಧಪಟ್ಟ ಅರಣ್ಯ ಅಽಕಾರಿಗಳು ಹಸುವಿನ ಮಾಲೀಕರಿಗೆ ಪರಿಹಾರ ನೀಡಬೇಕು. ಹುಲಿ ಸೆರೆಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.

ರವಿ, ಅಭಿ, ಬಿಳಿಯಯ್ಯ, ಬಿ.ಎಸ್.ಮಹೇಶ್, ಇನ್ನಿತರರು ಹಾಜರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಾಮರಾಜನಗರ| ಕಾಡಾನೆ ದಾಳಿ: ವ್ಯಕ್ತಿ ಸಾವು

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ…

28 mins ago

ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ: ಬಿ.ವೈ.ವಿಜಯೇಂದ್ರ ಲೇವಡಿ

ಬೆಳಗಾವಿ: ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ.…

32 mins ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಕುವೆಂಪು ನಗರದ ಅಪೋಲೋ ಆಸ್ಪತ್ರೆಯ ಹಿಂಭಾಗ ದಲ್ಲಿರುವ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎದುರಿನ ದೊಡ್ಡಮೋರಿ ಯಿಂದ ತೆಗೆದ ಕಸವನ್ನು…

1 hour ago

ಓದುಗರ ಪತ್ರ: ರೈತರ ಆತ್ಮಹತ್ಯೆ ತಡೆಗೆ ಕ್ರಮ ಕೈಗೊಳ್ಳಿ

ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ)…

1 hour ago

ಓದುಗರ ಪತ್ರ: ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಿ

ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ…

1 hour ago

ವಿಕಸಿತ್ ಭಾರತ್- ಜಿ ರಾಮ್ ಜಿ: ಮಹಾತ್ಮನನ್ನು ಮರೆಗೆ ಸರಿಸುವ ಹುನ್ನಾರ

ಕೇಂದ್ರ ಸರ್ಕಾರದಲ್ಲಿ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಡಿಸೆಂಬರ್ ೧೬ರಂದು…

2 hours ago