ಸರಗೂರು: ಸರಗೂರು ಪಟ್ಟಣ ವ್ಯಾಪ್ತಿಯ ೧೧ನೇ ವಾರ್ಡಿನ ಬಿಡುಗಲಿನ ರೈತ ರಾಜಶೇಖರ ಎಂಬವರಿಗೆ ಸೇರಿದ ಜರ್ಸಿ ತಳಿಯ ಹಸು ಜಮೀನಿನಲ್ಲಿ ಮೇವು ಮೇಯ್ದು ಹೊಳೆಯಲ್ಲಿ ನೀರು ಕುಡಿಯಲು ಹೋಗಿದ್ದ ವೇಳೆ ಹುಲಿ ದಾಳಿಗೆ ತುತ್ತಾಗಿ ಮೃತಪಟ್ಟಿರುವ ಘಟನೆ ನಡೆದಿದೆ.
ಇದರ ಅಂದಾಜು ಬೆಲೆ ೬೦ ಸಾವಿರ ರೂ.ಗಳಾಗಿದೆ ಎಂದು ಮಾಲೀಕ ರಾಜಶೇಖರ್ ತಿಳಿಸಿದ್ದಾರೆ. ಸ್ಥಳಕ್ಕೆ ಡಿ ಆರ್ಎಫ್ ಹೆಚ್.ಎಸ್.ಅಭಿಲಾಷ್, ಗುಮಾಸ್ತ ಭುವನೇಶ್ ಕುಮಾರ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಹಸುವಿನ ಮಾಲೀಕರಿಗೆ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.
ಈ ವೇಳೆ ಬಾಲು ಎಂಬವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಹುಲಿ, ಚಿರತೆಗಳ ಕಾಟ ಹೆಚ್ಚಾಗಿದೆ. ದನ ಕರುಗಳು ಬಲಿಯಾಗುತ್ತಿವೆ ಎಂದು ದೂರಿದರು.
ಹುಲಿಯೊಂದು ಅಗತ್ತೂರು, ಸಾಗರೆ, ಮಾಗುಡಿಲು ಮಾರ್ಗದಲ್ಲಿ ಸಂಚರಿಸುತ್ತಿದ್ದು, ಗದ್ದೆ ತೆವರಿನ ಮೇಲೆ ತಿರುಗಾಡಿರುವ ಹುಲಿ ಹೆಜ್ಜೆ ಗುರುತು ಕಾಣಿಸುತ್ತದೆ ಎಂದು ಆಗತ್ತೂರು ರಾಜಣ್ಣ ತಿಳಿಸಿದರು.
ಸಂಬಂಧಪಟ್ಟ ಅರಣ್ಯ ಅಽಕಾರಿಗಳು ಹಸುವಿನ ಮಾಲೀಕರಿಗೆ ಪರಿಹಾರ ನೀಡಬೇಕು. ಹುಲಿ ಸೆರೆಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.
ರವಿ, ಅಭಿ, ಬಿಳಿಯಯ್ಯ, ಬಿ.ಎಸ್.ಮಹೇಶ್, ಇನ್ನಿತರರು ಹಾಜರಿದ್ದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…