ಮೈಸೂರು

ಸರಗೂರು | ಹುಲಿ ದಾಳಿಗೆ ಹಸು ಬಲಿ

ಸರಗೂರು: ಸರಗೂರು ಪಟ್ಟಣ ವ್ಯಾಪ್ತಿಯ ೧೧ನೇ ವಾರ್ಡಿನ ಬಿಡುಗಲಿನ ರೈತ ರಾಜಶೇಖರ ಎಂಬವರಿಗೆ ಸೇರಿದ ಜರ್ಸಿ ತಳಿಯ ಹಸು ಜಮೀನಿನಲ್ಲಿ ಮೇವು ಮೇಯ್ದು ಹೊಳೆಯಲ್ಲಿ ನೀರು ಕುಡಿಯಲು ಹೋಗಿದ್ದ ವೇಳೆ ಹುಲಿ ದಾಳಿಗೆ ತುತ್ತಾಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಇದರ ಅಂದಾಜು ಬೆಲೆ ೬೦ ಸಾವಿರ ರೂ.ಗಳಾಗಿದೆ ಎಂದು ಮಾಲೀಕ ರಾಜಶೇಖರ್ ತಿಳಿಸಿದ್ದಾರೆ. ಸ್ಥಳಕ್ಕೆ ಡಿ ಆರ್‌ಎಫ್ ಹೆಚ್.ಎಸ್.ಅಭಿಲಾಷ್, ಗುಮಾಸ್ತ ಭುವನೇಶ್ ಕುಮಾರ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಹಸುವಿನ ಮಾಲೀಕರಿಗೆ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.

ಈ ವೇಳೆ ಬಾಲು ಎಂಬವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಹುಲಿ, ಚಿರತೆಗಳ ಕಾಟ ಹೆಚ್ಚಾಗಿದೆ. ದನ ಕರುಗಳು ಬಲಿಯಾಗುತ್ತಿವೆ ಎಂದು ದೂರಿದರು.

ಹುಲಿಯೊಂದು ಅಗತ್ತೂರು, ಸಾಗರೆ, ಮಾಗುಡಿಲು ಮಾರ್ಗದಲ್ಲಿ ಸಂಚರಿಸುತ್ತಿದ್ದು, ಗದ್ದೆ ತೆವರಿನ ಮೇಲೆ ತಿರುಗಾಡಿರುವ ಹುಲಿ ಹೆಜ್ಜೆ ಗುರುತು ಕಾಣಿಸುತ್ತದೆ ಎಂದು ಆಗತ್ತೂರು ರಾಜಣ್ಣ ತಿಳಿಸಿದರು.

ಸಂಬಂಧಪಟ್ಟ ಅರಣ್ಯ ಅಽಕಾರಿಗಳು ಹಸುವಿನ ಮಾಲೀಕರಿಗೆ ಪರಿಹಾರ ನೀಡಬೇಕು. ಹುಲಿ ಸೆರೆಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.

ರವಿ, ಅಭಿ, ಬಿಳಿಯಯ್ಯ, ಬಿ.ಎಸ್.ಮಹೇಶ್, ಇನ್ನಿತರರು ಹಾಜರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು: ಪಂಪ್‌ಸೆಟ್‌ ಮೋಟಾರ್‌ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್‌ಗಳನ್ನು…

22 mins ago

ಬಿಜೆಪಿ ಕ್ರಿಮಿನಲ್‌ ಪಿತೂರಿ ಮಾಡಿ ಶೃಂಗೇರಿಯಲ್ಲಿ ವೋಟ್‌ ಚೋರಿ ಮಾಡಿದೆ: ಸಿಎಂ ಸಿದ್ದರಾಮಯ್ಯ ಬಾಂಬ್‌

ಬೆಂಗಳೂರು: ಶೃಂಗೇರಿಯಲ್ಲಿ ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯವರು ಕ್ರಿಮಿನಲ್‌ ಪಿತೂರಿ ಮಾಡಿ ವೋಟ್‌ ಚೋರಿ ಮಾಡಿದ್ದಾರೆ ಎಂದು…

35 mins ago

ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವು ಪ್ರಕರಣ: ಲೋಕಾಯುಕ್ತದಿಂದ ತನಿಖೆಗೆ ವಿಶೇಷ ತಂಡ ರಚನೆ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ಪ್ರಕರಣದ ತನಿಖೆಗೆ ಲೋಕಾಯುಕ್ತದಿಂದ ವಿಶೇಷ ತಂಡ ರಚನೆ ಮಾಡಲಾಗಿದೆ.…

2 hours ago

ಚೀನಾ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 21 ಜನರು ಸಾವು

ಬೀಜಿಂಗ್:‌ ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…

3 hours ago

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಮೈಸೂರು ಮೂಲದ…

4 hours ago

ನೀರಿಗಿಳಿಯುವ ಮುನ್ನ ಇರಲಿ ಎಚ್ಚರ !

ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…

8 hours ago